ಸಮಸ್ಯೆ ಪರಿಹರಿಸಲು ಆಯೋಗ ನೇಮಕ ಮಾಡಲಿ: ನೆಲ್ಲಿಕುನ್ನು

ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Team Udayavani, Jun 23, 2019, 5:23 AM IST

22KSDE12

ಕಾಸರಗೋಡು: ಭಾಷಾ ಅಲ್ಪಸಂಖ್ಯಾತರಾಗಿರುವ ಕನ್ನಡಿಗರು ಹಲವು ವರ್ಷಗಳಿಂದ ನಿರಂತರವಾಗಿ ಎದುರಿಸುತ್ತಲೇ ಬಂದಿರುವ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆಯೋಗವೊಂದನ್ನು ನೇಮಕ ಮಾಡಬೇಕೆಂದು ಶಾಸಕ ಎನ್‌.ಎ.ನೆಲ್ಲಿಕುನ್ನು ಅವರು ಕೇರಳ ಸರಕಾರವನ್ನು ಆಗ್ರಹಿಸಿದರು.

ರಾಜ್ಯಮಟ್ಟದ ಭಾಷಾ ಅಲ್ಪಸಂಖ್ಯಾಕ ಸಮಿತಿಯಲ್ಲಿ ಕನ್ನಡಿಗರನ್ನು ಪುನಃ ಸೇರಿಸಬೇಕು, ಅಂಗನವಾಡಿ ಮೇಲ್ವಿಚಾರಕರಾಗಿ ಕನ್ನಡಿಗರನ್ನೇ ನೇಮಿಸಬೇಕು, ಇದಕ್ಕಾಗಿ ಸರಕಾರ ವಿಶೇಷ ಕಾನೂನು ರೂಪಿಸಬೇಕು, ಮಂಜೇಶ್ವರ ತಾಲೂಕನ್ನು ಭಾಷಾಅಲ್ಪಸಂಖ್ಯಾಕ ತಾಲೂಕೆಂದು ಘೋಷಿಸಬೇಕು, ಕನ್ನಡ ಗುಮಾಸ್ತ ಹುದ್ದೆಗಳನ್ನು ತತ್‌ಕ್ಷಣವೇ ಭರ್ತಿಗೊಳಿಸಬೇಕು ಈ ಮುಂತಾದ ಬೇಡಿಕೆಗಳನ್ನೊಡ್ಡಿ ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ಆಯೋಜಿಸಿದ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಲಭಿಸಬೇಕು. ಚಪ್ಪರ ನಿರ್ಮಾಣ ಮಾಡಿ ಪದೇ ಪದೇ ಕನ್ನಡಿಗರು ಧರಣಿ ಸತ್ಯಾಗ್ರಹ, ಆಂದೋಲನ ನಡೆಸುವ ಸನ್ನಿವೇಷ ಇನ್ನು ಮುಂದೆ ಬರಬಾರದು. ಈ ನಿಟ್ಟಿನಲ್ಲಿ ಆಯೋಗ ನೇಮಿಸಿ ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಸರಕಾರವನ್ನು ಒತ್ತಾಯಿಸುವುದಾಗಿ ಅವರು ಹೇಳಿದರು.

ಕಾಸರಗೋಡಿನ ಭಾಷಾ ಅಲ್ಪಸಂಖ್ಯಾಕರಿಗೆ ಸಂವಿಧಾನಬದ್ಧವಾಗಿ ನೀಡಿರುವ ಹಕ್ಕು, ಅವಕಾಶಗಳನ್ನು ಕಸಿದುಕೊಳ್ಳುವುದು ಸಮಂಜಸವಲ್ಲ. ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ನನ್ನ ಜವಾಬ್ದಾರಿಯೂ ಹೌದು. ಈ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ವಿಧಾನಸಭೆಯಲ್ಲೂ, ಹೊರಗೂ ವಾದಿಸುತ್ತೇನೆ. ಭಾಷಾ ಅಲ್ಪಸಂಖ್ಯಾಕರಿಗೆ ಸಂವಿಧಾನಬದ್ಧವಾಗಿ ನೀಡಲಾದ ಎಲ್ಲಾ ಹಕ್ಕು ಸವಲತ್ತುಗಳನ್ನು ಹತ್ತಿಕ್ಕುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದರು.

ಸಾತ್ವಿಕ ಹೋರಾಟ
ಈ ಹೋರಾಟ ಕನ್ನಡ ಸಂಸ್ಕೃತಿಯ ಉಳಿವಿಗಾಗಿ. ಸಂಸ್ಕೃತಿ ಎಂದಾಕ್ಷಣ ಭಾಷೆ, ಕಲೆ, ಸಾಹಿತ್ಯ, ಉದ್ಯೋಗ, ಭೌಗೋಳಿಕ ಎಲ್ಲವೂ ಅದರಲ್ಲಿ ಅಡಕವಾ ಗಿದೆ. ಕಾಸರಗೋಡಿನ ಕನ್ನಡಿಗರ ಹೋರಾಟಕ್ಕೆ ನೈತಿಕವಾದ ಮತ್ತು ಶಾಸನಾತ್ಮಕವಾದ ಶಕ್ತಿ ಇದೆ. ಹೋರಾಟದಲ್ಲಿ ಸಾತ್ವಿಸಿಕ, ರಾಜಸಿಕ, ತಾಮಸಿಕ ಎಂಬ ಮೂರು ವಿಧಾನಗಳಿವೆ. ಕಾಸರಗೋಡು ಕನ್ನಡಿಗರ ಹೋರಾಟ ಸಾತ್ವಿಕ ರೂಪದಲ್ಲಿದೆ ಎಂದು ಹಿರಿಯ ಸಾಹಿತಿ ಡಾ|ರಮಾನಂದ ಬನಾರಿ ಅವರು ಹೇಳಿದರು. ಜನಪ್ರತಿನಿಧಿಗಳು ಕೇವಲ ಜಾತಿ, ಪಂಗಡ, ಪಕ್ಷಕ್ಕೆ ಸೀಮಿತರಲ್ಲ. ಎಲ್ಲರಿಗೂ ಪ್ರತಿನಿಧಿ. ಈ ಹಿನ್ನೆಲೆಯಲ್ಲಿ ಕಾಸರಗೋಡಿನ ಕನ್ನಡಿಗರ ಬೇಡಿಕೆಯನ್ನೂ ಸಾಕಾರಗೊಳಿಸುವ ಜವಾಬ್ದಾರಿ ಜನಪ್ರತಿನಿಧಿಗಳಿಗಿವೆ ಎಂದರು.

ಅಸ್ತಿತ್ವಕ್ಕಾಗಿ ಹೋರಾಟ
ಕಾಸರಗೋಡಿನ ಕನ್ನಡಿಗರ ಹೋರಾಟ ಕೇವಲ ಉದ್ಯೋಗಕ್ಕಾಗಿ ಅಲ್ಲ. ಅಸ್ತಿತ್ವಕ್ಕಾಗಿ ಹೋರಾಟ ನಡೆಯುತ್ತಿದೆ. ಸರಕಾರದಿಂದ ನಡೆಯುತ್ತಿರುವ ದಬ್ಟಾಳಿಕೆ ನಿಲ್ಲಬೇಕು. ಕನ್ನಡ ಭಾಷೆಯನ್ನಾಡುವವರನ್ನೆಲ್ಲರನ್ನು ರಕ್ಷಿಸಬೇಕೆಂದು ಜಿ. ಪಂ. ಸ್ಥಾಯೀ ಸಮಿತಿ ಅಧ್ಯಕ್ಷರು ಹೇಳಿದರು.ಸಂವಿಧಾನ ಬದ್ಧ ಹಕ್ಕುಗಳನ್ನು ರಕ್ಷಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಇನ್ನಾದರೂ ಸರಕಾರ ಕಣ್ಣು ತೆರೆಯಬೇಕೆಂದು ನ್ಯಾಯವಾದಿ ತೋಮಸ್‌ ಡಿ’ಸೋಜ ಹೇಳಿದರು. ಹಿರಿಯಸಾಹಿತಿಗಳಾದ ಗಿರೀಶ್‌ ಕಾರ್ನಾಡ್‌ ಮತ್ತು ಡಾ|ಡಿ.ಕೆ.ಚೌಟ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸತೀಶ್‌ ಮಾಸ್ಟರ್‌ ಕೂಡ್ಲು ಅವರು ವಂದಿಸಿದರು.

ಹೋರಾಟದಲ್ಲಿ
ಪಾಲ್ಗೊಂಡ ಗಣ್ಯರು
ಧರಣಿ ಸತ್ಯಾಗ್ರಹದಲ್ಲಿ ನ್ಯಾಯವಾದಿ ಸದಾನಂದ ರೈ, ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್‌.ವಿ.ಭಟ್‌, ರವೀಂದ್ರ ಬಲ್ಲಾಳ್‌, ಗೋಪಾಲ ಶೆಟ್ಟಿ ಅರಿಬೈಲು, ರಾಜೇಶ್‌, ತಾರಾನಾಥ ಮಧೂರು, ವಿ.ಬಿ.ಕುಳಮರ್ವ, ಎಂ.ಎಚ್‌.ಜನಾರ್ಧನ, ಬಿ.ಎಂ.ಆದರ್ಶ್‌, ವಿಜಯಲಕ್ಷಿ$¾, ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳುಕ್ಕುರಾಯ, ವಿ.ಬಿ.ಕುಳಮರ್ವ, ಕೆ.ಎನ್‌.ಕೃಷ್ಣ ಭಟ್‌ ಮೊದಲಾದವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಹೋರಾಟ ಸಮಿತಿ ಉಪಾಧ್ಯಕ್ಷ ಮಹಾಲಿಂಗೇಶ್ವರ ಭಟ್‌ ಅಧ್ಯಕ್ಷತೆ ವಹಿಸಿದ್ದರು ಧರಣಿಯಲ್ಲಿ ಸಾಹಿತಿಗಳಾದ ಡಾ|ಯು.ಮಹೇಶ್ವರಿ, ಲಕ್ಷ¾ಣ ಪ್ರಭು, ವಿಶ್ವನಾಥ ರಾವ್‌, ನವೀನ್‌ ಮಾಸ್ಟರ್‌ ಮಾನ್ಯ, ಗೋಪಾಲಕೃಷ್ಣ ಭಟ್‌, ವಾಮನ ರಾವ್‌ ಬೇಕಲ್‌, ಟಿ.ಶಂಕರನಾರಾಯಣ ಭಟ್‌, ಕುಶಲ ಪಾರೆಕಟ್ಟೆ, ವಿಶ್ವನಾಥ ಮಾಸ್ಟರ್‌, ಸತ್ಯನಾರಾಯಣ ಕಾಸರಗೋಡು, ವಿನೋದ್‌, ಶಿವ ಕಾಸರಗೋಡು, ನಾರಾಯಣ ಭಟ್‌, ಉದಯಚಂದ್ರ, ಬಾಲಕೃಷ್ಣ, ಆದರ್ಶ್‌ ಪಿ.ಎಂ, ಸುಂದರ ಬಾರಡ್ಕ, ಬೇ.ಸಿ.ಗೋಪಾಲಕೃಷ್ಣ ಭಟ್‌, ಕಮಲಾಕ್ಷ ಸುವರ್ಣ ಪ್ರಭಾಕರ ನಾೖಕ್‌, ದಿವಾಕರ ಅಶೋಕನಗರ, ಕೆ.ವಿ.ರಮೇಶ್‌ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.