ಲೈಫ್ ಯೋಜನೆ: 72 ಮನೆಗಳ ಕೀಲಿಕೈ ವಿತರಣೆ
Team Udayavani, Mar 3, 2019, 1:00 AM IST
ಕಾಸರಗೋಡು: ಲೈಫ್ ಯೋಜನೆಯಲ್ಲಿ ಅಳವಡಿಸಿ ಚೆರುವತ್ತೂರು ಗ್ರಾಮ ಪಂಚಾಯತ್ನಲ್ಲಿ ನಿರ್ಮಿಸಿದ 27 ಮನೆಗಳ ಕೀಲಿಕೈ ವಿತರಣೆ ಸಮಾರಂಭ ನಡೆಯಿತು.
ರಾಜ್ಯ ಕಂದಾಯ ಸಚಿವ ಇ.ಚಂದ್ರಶೇಖರನ್ ಕೀಲಿಕೈ ವಿತರಣೆ ನಡೆಸಿದರು. ವಸತಿ ಇಲ್ಲದವರಿಗೆ ಮನೆ ನಿರ್ಮಿಸಿ ನೀಡುವ ಯೋಜನೆ ಪ್ರಕಾರ ಎರಡೂವರೆ ವರ್ಷ ಅವಧಿಯಲ್ಲಿ ಈ ಮನೆಗಳ ನಿರ್ಮಾಣ ನಡೆದಿದೆ.
ಈ ಸಂದರ್ಭ ಮಾತನಾಡಿದ ಸಚಿವ ರಾಜ್ಯ ಎಲ್ಲ ವಲಯಗಳಲ್ಲೂ ಬಲು ದೊಡ್ಡ ಬದಲಾವಣೆ ತರಲು ರಾಜ್ಯ ಸರಕಾರಕ್ಕೆ ಸಾಧ್ಯವಾಗಿದೆ ಎಂದು ಹೇಳಿದರು.
ಚೆರುವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮಾಧವನ್ ಮಣಿಯರ ಅಧ್ಯಕ್ಷತೆ ವಹಿಸಿದ್ದರು.
ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಬರಬಹುದಾದ ಸಾಧ್ಯತೆಗಳ ಬಗ್ಗೆ ಪಂಚಾಯತ್ ವತಿಯಿಂದ ನಿರ್ಮಿಸಲಾದ 30 ನಿಮಿಷಗಳ ಅವಧಿಯ ಕಿರುಚಿತ್ರವನ್ನೂ ಸಚಿವ ಲೋಕಾರ್ಪಣೆ ನಡೆಸಿದರು. ಬೇರೆ ಬೇರೆ ಕ್ಷೇತ್ರಗಳ ಗಣ್ಯರಾದ ಯು. ಸುಮಿತ್ರಾ, ಕೆ.ವಿ. ಕುಂಞಿರಾಮನ್, ಮಾಧವಿ ಕೃಷ್ಣನ್, ಕೆ. ನಾರಾಯಣನ್, ಒ.ವಿ. ನಾರಾಯಣನ್, ಟಿ.ವಿ. ಪ್ರಭಾಕರನ್ ಮೊದಲಾದವರು ಉಪಸ್ಥಿತರಿದ್ದರು. ಪಂ. ಉಪಾಧ್ಯಕ್ಷೆ ಸಿ.ವಿ. ಪ್ರಮೀಳಾ ಸ್ವಾಗತಿಸಿದರು. ಎಂ. ಸುರೇಶ್ ಬಾಬು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು