ಹಣ್ಣುಗಳ ರಾಜನ ಲೋಕದ ಕದ ತೆರೆದ ಮಧುರಂ-2019.

ಮಾವಿನ ಹಣ್ಣುಗಳ ರಸದೌತಣ ನೀಡಿದ ಕಾಸರಗೋಡಿನ ಮ್ಯಾಂಗೋ ಫೆಸ್ಟ್‌

Team Udayavani, May 10, 2019, 12:02 PM IST

mango-1

ಬದಿಯಡ್ಕ: ಮೇ ತಿಂಗಳು ಹೂಹಣ್ಣುಗಳ ಮಾಸ. ಮೈತುಂಬ ರಂಗುರಂಗಿನ ಹೂಗಳಿಂದ ಕಂಗೊಳಿಸುವ ಗಿಡಮರಗಳು, ಹಸಿರು ಹಳದಿ ಹಣ್ಣುಗಳು ಜನರನ್ನು ಪ್ರಕೃತಿಯತ್ತ ಸೆಳೆಯುತ್ತದೆ. ಹಲಸು, ಪೇರಳೆ, ಈರೋಳು ಮುಂತಾದ ಹಣ್ಣುಗಳ ನಡುವೆ ತನ್ನ ವಿಶಿಷ್ಟವಾದ ರುಚಿ ಹಾಗೂ ಬಣ್ಣದಿಂದ ಕಂಗೊಳಿಸುವ ಹಣ್ಣೆಂದರೆ ಮಾವಿನಹಣ್ಣು ಮಾತ್ರ. ಹಣ್ಣುಗಳ ರಾಜ ಎಂಬ ಕೀರ್ತಿಗಳಿಸಿರುವ ಮಾವು ನಮ್ಮ ದೇಶದ ರಾಷ್ಟ್ರೀಯ ಹಣ್ಣು ಎಂಬ ಹೆಗ್ಗಳಿಕೆಯನ್ನೂ ಹೊಂದಿದೆ.

ಮಧುರಂ-2019.
ಪಡನ್ನಕ್ಕಾಡ್‌ ಕೃಷಿ ಕಾಲೇಜು ವೈವಿಧ್ಯಮಯ ಮಾವಿನ ಹಣ್ಣುಗಳ ಮಹೋತ್ಸವ ಮೂಲಕ ಹಣ್ಣುಗಳ ರಾಜನ ಲೋಕಕ್ಕೆ ಕದತೆರೆದು ನಾಡಿನ ಗಮನ ಸೆಳೆಯಿತು. ಮಲಬಾರ್‌ ಮ್ಯಾಂಗೋ ಫೆಸ್ಟ್‌ ಮಧುರಂ-2019 ಎಂಬ ಹೆಸರಿನಲ್ಲಿ ನಡೆಯುತ್ತಿರುವ ಮಾವಿನಹಣ್ಣುಗಳ ಮಹೋತ್ಸವದಲ್ಲಿ ಸ್ಥಳೀಯ ಮತ್ತು ವಿವಿಧ ಕಡೆಗಳ ವೈವಿಧ್ಯಮಯ ಮಾವಿನಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆದಿದೆ. ಕೃಷಿ ಕಾಲೇಜಿನ ಉತ್ಪನ್ನವಾಗಿರುವ ಫಿರಂಗಿ ಲಡುವದಿಂದ ತೊಡಗಿ ಅತ್ಯಧಿಕ ಬೆಲೆ ಹೊಂದಿರುವ ಅಲೋನ್ಸಾ, ಸಿಂಧೂರಂ, ನೀಲಂ, ಮುಂಡಪ್ಪ, ಮೆರ್ಕ್ನೂರಿ, ಸುವರ್ಣ ರೇಖೆ, ಕರ್ಪೂರ, ಬಂಗೋರ ಸಹಿತ 20ಕ್ಕೂ ಅಧಿಕ ಮಾವಿನಹಣ್ಣುಗಳು ಇಲ್ಲಿ ಹಣ್ಣು ಪ್ರಿಯರನ್ನು ಸೆಳೆಯುತ್ತಿವೆ. ಕಾಲೇಜು ವಿದ್ಯಾರ್ಥಿ ಯೂನಿಯನ್‌ ನೇತೃತ್ವದಲ್ಲಿ ಇಲ್ಲಿ ಮಾವಿನ ಹಣ್ಣುಗಳ ಮಹೋತ್ಸವ ನಡೆಯುತ್ತಿದೆ.

2004 ರಿಂದ ಯೂನಿಯನ್‌ ನೇತೃತ್ವದಲ್ಲಿ ಮ್ಯಾಂಗೋ ಫೆಸ್ಟ್‌ ಪ್ರಾರಂಭವಾಗಿದ್ದು ಆರಂಭದ ಹಂತದಲ್ಲಿ ಕಾಲೇಜು ಆವರಣದಲ್ಲಿ ನೆಟ್ಟು ಬೆಳೆಸಿದ ಮಾವಿನ ಹಣ್ಣುಗಳ ಪ್ರದರ್ಶನ ಮಾತ್ರ ನಡೆಯುತ್ತಿತ್ತು. ನಂತರದ ವರ್ಷಗಳಲ್ಲಿ ಮಾವುಪ್ರಿಯರ ಬೇಡಿಕೆಯ ಹಿನ್ನೆಲೆಯಲ್ಲಿ ಕಣ್ಣೂರು ಸಹಿತ ಇತರ ಜಿಲ್ಲೆಗಳಿಂದ ವೈವಿಧ್ಯಮಯ ಮಾವಿನ ಹಣ್ಣುಗಳು ಇಲ್ಲಿಗೆ ರವಾನೆಗೊಳ್ಳುತ್ತಿವೆ.

ಕಳೆದ ವರ್ಷ ನಡೆದಿದ್ದ ಮ್ಯಾಂಗೋ ಫೆಸ್ಟ್‌ನಲ್ಲಿ 7 ಟನ್‌ ಮಾವಿನ ಹಣ್ಣುಗಳ ಮಾರಾಟ ನಡೆದಿದೆ.  ಕಾಲೇಜು ಆವರಣದಲ್ಲೇ ಸರಿಸುಮಾರು 150 ಕ್ಕೂ ಅಧಿಕ ಮಾವಿನ ಮರಗಳಿದ್ದು, 20 ಜಾತಿಯ ಮಾವಿನಹಣ್ಣುಗಳನ್ನು ಬೆಳೆಸಲಾಗುತ್ತಿದೆ. ಕಿಲೋಗೆ 60 ರೂ.ನಿಂದ 130 ರೂ. ಬೆಲೆಯಿರುವ ಅತ್ಯಧಿಕ ದೊಡ್ಡ ಗಾತ್ರದ ಗುದಾದ್‌ ಮಾವಿನ ಹಣ್ಣು ಇಲ್ಲಿ ಗಮನಾರ್ಹವಾಗಿದೆ. ಒಂದು ಹಣ್ಣು 600 ಗ್ರಾಂನಿಂದ 800 ಗ್ರಾಂ ತೂಕವಿರುತ್ತದೆ.


ಕಾಲೇಜಿನ ನೇತೃತ್ವದಲ್ಲಿ ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ
ಕಾಲೇಜಿನ ಇತರ ವಿಭಾಗಗಳ ನೇತೃತ್ವದಲ್ಲಿ ವಿವಿಧ ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವೂ ಇಲ್ಲಿದೆ. ಬೇರೆ ಬೇರೆ ಹಣ್ಣುಗಳು, ಪುರಾತನ ಕೃಷಿ ಉಪಕರಣಗಳು, ಸಾಕು ಹಕ್ಕಿಗಳು, ಮೀನುಗಳು, ನರ್ಸರಿ ಸಸ್ಯಗಳು ಇತ್ಯಾದಿ ಗಮನ ಸೆಳೆದಿವೆ. ಪ್ರದರ್ಶನದ ಅಂಗವಾಗಿ ವಿಚಾರ ಸಂಕಿರಣ, ಸ್ಥಳೀಯ ಮಾವಿನ ಹಣ್ಣುಗಳ ಕುರಿತಾಗಿ ಸ್ಪರ್ಧೆಗಳು ಮೊದಲಾದುವು ನಡೆಯುತ್ತಿದೆ. ಪ್ರತಿದಿನ ನೂರಾರು ಮಂದಿ ಕೃಷಿ ಪ್ರೇಮಿಗಳು ಈ ಪ್ರದರ್ಶನ ವೀಕ್ಷಿಸಲು ಆಗಮಿಸುತ್ತಿದ್ದು ಫಿರಂಗಿ ಲಡುವ, ಸಿಂಧೂರಂ, ಮುಂಡಪ್ಪ ಜಾತಿಯ ಮಾವಿನಹಣ್ಣಗಳಿಗೆ ಇಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬುದಾಗಿ ಸಂಘಟಕರು ಅಭಿಪ್ರಾಯಪಟ್ಟಿದ್ದಾರೆ.

ಕೃಷಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಕೃಷಿ ಕಾಲೇಜು ತೋರುವ ಆಸಕ್ತಿ ಹಾಗೂ ವಿದ್ಯಾರ್ಥಿಗಳನ್ನು ಕೃಷಿಯತ್ತ ಸೆಳೆಯಲು ಕೈಗೊಳ್ಳುವ ಇಂತಹ ಅನುಕರಣೀಯ ಮಾದರಿ ಕಾರ್ಯಗಳು ಎಲ್ಲೆಡೆ ನಡೆಯಬೇಕು. ಹಲಸು, ಮಾವು ಮಾತ್ರವಲ್ಲದೆ ಇತರ ಹಣ್ಣುಗಳನ್ನೂ ಉಪಯೋಗಿಸಿ ಆಹಾರ ಮೇಳ, ಮಾರಾಟ ಮೇಳ. ಪ್ರದರ್ಶನದ ಮೂಲಕ ಹಣ್ಣುಗಳು ಹಾಗೂ ಇತರ ಕೃಷಿ ಉತ್ಪನ್ನಗಳ ಉಪಯೋಗದ ಬಗ್ಗೆ ಸರಿಯಾದ ಮಾಹಿತಿ ನೀಡುವ ಕಾರ್ಯ ದೇಶದೆಲ್ಲೆಡೆ ನಡೆಯುತ್ತಿದ್ದರೆ ಸಹಜವಾಗಿಯೇ ನಮ್ಮ ದೇಶದಲ್ಲಿ ಮತ್ತೆ ಕೃಷಿ ಅರ್ಥಪೂರ್ಣವಾಗಿ ಅಭಿವೃದ್ಧಿ ಹೊಂದಲು ಸಾಧ್ಯ.

ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.