Madikeri ಮಾದಕ ಪದಾರ್ಥ ಸಾಗಾಟ ಪ್ರಕರಣ; ಮೂವರಿಗೆ 10 ವರ್ಷ ಕಠಿನ ಜೈಲು ಶಿಕ್ಷೆ


Team Udayavani, Feb 4, 2024, 10:53 PM IST

Madikeri ಮಾದಕ ಪದಾರ್ಥ ಸಾಗಾಟ ಪ್ರಕರಣ; ಮೂವರಿಗೆ 10 ವರ್ಷ ಕಠಿನ ಜೈಲು ಶಿಕ್ಷೆ

ಮಡಿಕೇರಿ: ನಿಷೇಧಿತ ಮಾದಕ ಪದಾರ್ಥ ಹ್ಯಾಶಿಷ್‌ ಆಯಿಲ್‌ (ಗಾಂಜಾದಿಂದ ತೆಗೆಯುವ ಎಣ್ಣೆ) ಸಾಗಾಟ ಮಾಡುತ್ತಿದ್ದ ಮೂವರಿಗೆ ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿನ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಅಹಮದ್‌ ಕಬೀರ್‌ (37), ಅಬ್ದುಲ್‌ ಖಾದರ್‌ (37) ಹಾಗೂ ಮೊಹಮ್ಮದ್‌ ಮುಜಮಿಲ್‌ (37) ಶಿಕ್ಷೆಗೆ ಒಳಗಾದವರು.

ಭಾಗಮಂಡಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2022ರ ಅಕ್ಟೋಬರ್‌ 29ರಂದು ಭಾಗಮಂಡಲ-ಮಡಿಕೇರಿ ಜಂಕ್ಷನ್‌ನಲ್ಲಿರುವ ಐಬಿ ರಸ್ತೆಯಲ್ಲಿ ಈ ಮೂವರು ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದರು.

ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕಾ, ಎಎಸ್‌ಐ ಬೆಳ್ಳಿಯಪ್ಪ ಎಂ.ಸಿ., ಮಹದೇವ ಸ್ವಾಮಿ ಹಾಗೂ ಸಿಬಂದಿ ದಾಳಿ ಮಾಡಿ ಕಾರನ್ನು ತಡೆದು ಪರಿಶೀಲಿಸಿದಾಗ 1 ಕೆ.ಜಿ. 160 ಗ್ರಾಂ ಹ್ಯಾಶಿಷ್‌ ಆಯಿಲ್‌ ಪತ್ತೆಯಾಗಿತ್ತು. ಕಾರಿನಲ್ಲಿದ್ದ ಮೂವರನ್ನು ಎನ್‌ಡಿಪಿಎಸ್‌ ಕಾಯಿದೆಯಡಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ತನಿಖೆ ಪೂರ್ಣಗೊಳಿಸಿದ ತನಿಖಾಧಿಕಾರಿ ಪ್ರಿಯಾಂಕಾ 2022ರ ನವೆಂಬರ್‌ 21ರಂದು ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ಎನ್‌ಡಿಪಿಎಸ್‌ ಕಾಯಿದೆ ಅಡಿಯಲ್ಲಿ 10 ವರ್ಷ ಕಠಿನ ಜೈಲು ಶಿಕ್ಷೆ ಪ್ರಕಟಿಸಿದೆ. ಮಾತ್ರವಲ್ಲದೇ ಪ್ರತಿ ಆರೋಪಿಗೆ ತಲಾ 1 ಲಕ್ಷ ರೂ. ದಂಡ ವಿಧಿಸಿದ್ದು, ದಂಡ ನೀಡಲು ತಪ್ಪಿದ್ದಲ್ಲಿ ಮತ್ತೆ 3 ವರ್ಷಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ.

ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕಾ, ಎಎಸ್‌ಐ ಎಂ.ಸಿ. ಬೆಳ್ಳಿಯಪ್ಪ (ಪ್ರಸಕ್ತ ನಿವೃತ್ತ), ಸಿಬಂದಿ ಹಾಗೂ ಆರೋಪಿಗಳ ವಿರುದ್ಧ ನ್ಯಾಯಾಲಯದಲ್ಲಿ ವಾದ ಮಂಡಿಸಿ ಕಠಿಣ ಜೈಲು ಶಿಕ್ಷೆ ವಿಧಿಸುವಲ್ಲಿ ಉತ್ತಮ ಕಾರ್ಯನಿರ್ವಹಿಸಿರುವ ಸರಕಾರಿ ಅಭಿಯೋಜಕಿ ಕೆ.ಜಿ. ಅಶ್ವಿ‌ನಿ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

ಕಾರಡ್ಕ ಅಗ್ರಿಕಲ್ಚರಿಸ್ಟ್‌ ಸೊಸೈಟಿ ವಂಚನೆ ಪ್ರಕರಣ: ಬಂಧಿತರಿಗೆ ರಿಮಾಂಡ್‌

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Misbehavior: ಅನುಚಿತ ವರ್ತನೆ; ಕೇಂದ್ರ ವಿ.ವಿ. ಅಧ್ಯಾಪಕನ ಅಮಾನತು

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

Fraud Case: ಆರೋಪಿ ರತೀಶ್‌ ಗೋವಾಕ್ಕೆ ಪರಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.