ಮಡಿಕೇರಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ
Team Udayavani, Aug 16, 2017, 7:20 AM IST
ಮಡಿಕೇರಿ: ಸ್ವಾತಂತ್ರ್ಯದ ಪರಿಕಲ್ಪನೆಯ ಸಮಗ್ರತೆಯನ್ನು ಅರ್ಥೈಸಿಕೊಂಡು ಭೇದ-ಭಾವ ವಿಲ್ಲದೆ ಸರ್ವರೂ ಒಂದಾಗಿ ದೇಶವನ್ನು ಕಟ್ಟಿ ಬೆಳೆ ಸುವ ಕಾರ್ಯಕ್ಕೆ ಮುಂದಾಗಬೇಕಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್. ಸೀತಾರಾಂ ಕರೆ ನೀಡಿದ್ದಾರೆ.
ಕೊಡಗು ಜಿಲ್ಲಾಡಳಿತದಿಂದ ನಗರದ ಕೋಟೆ ಆವರಣದಲ್ಲಿ ನಡೆದ 71ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ತ್ರಿವರ್ಣ ಧ್ವಜಾರೋಹಣ ಗೈದು ಸಚಿವರು ಸಂದೇಶ ನೀಡಿದರು.
ಎಸ್ಪಿಗೆ ಸಮ್ಮಾನ: ರಾಷ್ಟ್ರಪತಿ ಪದಕ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಅವರನ್ನು ಉಸ್ತುವಾರಿ ಸಚಿವರು ಮತ್ತು ಅತಿಥಿ ಗಣ್ಯರು ಸಮ್ಮಾನಿಸಿ ಗೌರವಿಸಿದರು.
ಪುರಸ್ಕಾರ: ಕಳೆದ ಶೈಕ್ಷಣಿಕ ಸಾಲಿನಲ್ಲಿ ಪಿಯು ಸಿಯ ಜಿಲ್ಲೆಗೆ ಪ್ರಥಮರಾದ ವಿಜ್ಞಾನ ವಿಭಾಗದ: ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಎನ್.ಎಸ್.ಮುತ್ತಮ್ಮ,ವಾಣಿಜ್ಯ ವಿಭಾಗ: ಪೊನ್ನಂಪೇಟೆ ಸಂತ ಅಂಥೋಣಿ ವಿದ್ಯಾಸಂಸ್ಥೆಯ ಕೆ.ಜಿ. ಕಾವೇರಮ್ಮ,
ಕಲಾ ವಿಭಾಗ: ಮದೆ ಮಹೇಶ್ವರ ಶಾಲೆಯ ಹೇಮಂತ್ ಕೆ.ಎ., ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶನಿವಾರಸಂತೆಯ ಸೇಕ್ರೆಡ್ ಹಾರ್ಟ್ ಶಾಲೆಯ ರಚನಾ ಆರ್. ಮತ್ತು ಕನ್ನಡ ವಿಭಾಗ ದಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಂಟಿಕೊಪ್ಪ ಪ್ರೌಢಶಾಲೆಯ ನವ್ಯಾ ಅವರನ್ನು ಪುರಸ್ಕರಿಸಲಾಯಿತು.
ಇದೇ ಸಂದರ್ಭ ಪತ್ರಕರ್ತರಿಗೆ ರಾಜ್ಯ ಸರಕಾರ ದಿಂದ ಕೊಡಮಾಡಲಾಗಿರುವ ಆರೋಗ್ಯ ಭಾಗ್ಯ ಕಾರ್ಡ್ನ್ನು ಸಚಿವ ಸೀತಾರಾಂ ಅವರು ಹಿರಿಯ ಪತ್ರಕರ್ತ ಕೆ.ಬಿ. ಮಹಂತೇಶ್ ಮತ್ತು ಇಂದ್ರೇಶ್ ಅವರಿಗೆ ವಿತರಿಸಿದರು.
ಜೀವ ರಕ್ಷಕ ಪ್ರಶಸ್ತಿ ಪ್ರದಾನ : ನಿಸ್ವಾರ್ಥ ಸಮಾಜ ಸೇವೆಗೆ ಕೊಡಮಾಡುವ ಜೀವ ರಕ್ಷಕ ಪ್ರಶಸ್ತಿಯನ್ನು ಪಿ.ಎಂ. ಶೈಲಜಾ, ಮೊಹಮ್ಮದ್ ರಫೀಕ್ ಮತ್ತುಎಂ.ಬಿ. ಮುನೀರ್ ಅವರಿಗೆ ಪ್ರದಾನಿಸಲಾಯಿತು.
ಇದೇ ಸಂದರ್ಭ ಭಾರತ್ ಸ್ಕೌಟ್ಸ್ ಮತ್ತು ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಗಾಗಿ ಪೊನ್ನಂಪೇಟೆಯ ಕೆ.ಕೆ. ಮುತ್ತಮ್ಮ, ನಂಜರಾಯಪಟ್ಟಣದ ಶಿಕ್ಷಕಿ ಎ.ಜಿ. ಕುಸುಮಾ, ಮಡಿಕೇರಿ ಸಂತ ಜೋಸೆಫರ ಶಾಲೆಯ ರೀಟಾ ಫಿಲೋಮಿನಾ ಡಿ’ಸೋಜಾ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ : ಸಭಾ ಕಾರ್ಯಕ್ರಮದ ಬಳಿಕ ಸಂತ ಜೋಸೆಫರ ಕಾನ್ವೆಂಟ್, ಸಂತ ಮೈಕೆಲರ ಶಾಲೆ, ಕೇಂದ್ರೀಯ ವಿದ್ಯಾಲಯ ಮತ್ತು ರಾಜೇಶ್ವರಿ ವಿದ್ಯಾಲಯದ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಎಂಎಲ್ಸಿಗಳಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಪಂ ಅಧ್ಯಕ್ಷರಾದ ಬಿ.ಎ. ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಮೇಕೇರಿ ತಾಪಂ ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ. ರಮೇಶ್, ಜಿಲ್ಲಾ ಕಸಾಪ ಅಧ್ಯಕ್ಷರಾದ ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ, ಮಿಟ್ಟು ಚಂಗಪ್ಪ, ಡಿಎಫ್ಒ ಸೂರ್ಯಸೇನ್, ಎಸಿ ನಂಜುಂಡೇ ಗೌಡ, ಮೂಡ ಅಧ್ಯಕ್ಷ ಎ.ಸಿ. ದೇವಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ