ಮಡಿಕೇರಿ: ಗುಂಡು ಹೊಡೆದು ಗರ್ಭ ಧರಿಸಿದ್ದ ಕಾಡಾನೆ ಹತ್ಯೆ
Team Udayavani, May 22, 2023, 8:30 AM IST
ಮಡಿಕೇರಿ: ಗರ್ಭ ಧರಿಸಿದ್ದ ಕಾಡಾನೆಯೊಂದನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕುಶಾಲನಗರ ತಾಲೂಕು ಗುಡ್ಡೆಹೊಸೂರು ಗ್ರಾಮದ ಬಾಳುಗೋಡು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18ರಿಂದ 20 ವರ್ಷದ ಹೆಣ್ಣಾನೆಗೆ ಎರಡು ಗುಂಡು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದೆ. ರವಿವಾರ ಬೆಳಗ್ಗೆ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದ ಸಂದರ್ಭ ಕಾಡಾನೆ ಮೃತಪಟ್ಟ ಸ್ಥಳದಿಂದ ಅನತಿ ದೂರದಲ್ಲಿ ಖಾಲಿ ತೋಟಾಗಳು ಪತ್ತೆಯಾಗಿವೆೆ. ಆರೋಪಿಗಳಿಗೆ ಶೋಧ ಮುಂದುವರಿಸಲಾಗಿದೆ.
ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಶಿವರಾಮ್ ಬಾಬು, ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಮ, ಉಪವಲಯ ಅರಣ್ಯಾಧಿಕಾರಿಗಳ ಅನಿಲ್ ಡಿ’ಸೋಜಾ, ದೇವಯ್ಯ, ರಂಜನ್ ಹಾಗೂ ಆರ್ಆರ್ಟಿ ಸಿಬಂದಿ ಭೇಟಿ ನೀಡಿದರು.