ಕೊನೆಗೂ ಮಗಳ ಕೈಸೇರಿತು ಅಮ್ಮನ ನೆನಪುಗಳ ಬುತ್ತಿ!


Team Udayavani, Aug 20, 2021, 7:40 AM IST

ಕೊನೆಗೂ ಮಗಳ ಕೈಸೇರಿತು ಅಮ್ಮನ ನೆನಪುಗಳ ಬುತ್ತಿ!

ಮಡಿಕೇರಿ: ಅಮ್ಮನ ನೆನಪುಗಳ ಬುತ್ತಿಯಂತಿದ್ದ ಮೊಬೈಲ್‌ ಫೋನ್‌ ಕೊನೆಗೂ ಹೃತಿಕ್ಷಾಳಿಗೆ ಸಿಕ್ಕಿದೆ. ಕೋವಿಡ್‌ ಸೋಂಕಿಗೆ ಬಲಿಯಾದ ಅಮ್ಮನ ಜತೆಯಲ್ಲಿ ಅವರ ಮೊಬೈಲನ್ನು ಕೂಡ ಕಳೆದುಕೊಂಡು ದುಃಖದ ಮಡುವಿನಲ್ಲಿದ್ದ ಈ ಪುಟ್ಟ ಬಾಲೆಗೆ ಸರಿ ಸುಮಾರು ಮೂರು ತಿಂಗಳ ಅನಂತರ ಹೆತ್ತಾಕೆ ಬಿಟ್ಟು ಹೋದ ನೆನಪುಗಳನ್ನು ಮೆಲುಕು ಹಾಕುವ ಅವಕಾಶ ದೊರೆತಿದೆ.

ಕುಶಾಲನಗರದ ಗುಮ್ಮನ ಕೊಲ್ಲಿಯ ನಿವಾಸಿ ನವೀನ್‌ ಅವರ ಪತ್ನಿ ಪ್ರಭಾ ಮೇ 6ರಂದು ಕೊರೊನಾ ಸೋಂಕಿಗೆ ಒಳಗಾಗಿ ಮೇ 16ರಂದು ಮಡಿಕೇರಿಯ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಟುಂಬಸ್ಥರಿಗೆ ನೀಡುವ ಸಂದರ್ಭ ಪ್ರಭಾ ಅವರಿಗೆ ಸೇರಿದ ಮೊಬೈಲ್‌ ನಾಪತ್ತೆಯಾಗಿತ್ತು. ಅಮ್ಮನೊಂದಿಗಿದ್ದ ಹಲವಾರು ಫೋಟೋಗಳನ್ನು ಹೊಂದಿದ್ದ ಮೊಬೈಲ್‌ ಕಾಣೆಯಾದದ್ದು ಅವರ ಏಕಮಾತ್ರ ಪುತ್ರಿ ಹೃತಿಕ್ಷಾ ಹಾಗೂ ಕುಟುಂಬದ ಸದಸ್ಯರ ಅಪಾರ ದುಃಖಕ್ಕೆ ಕಾರಣವಾಗಿತ್ತು.

ಈ ಹಂತದಲ್ಲಿ ಪುಟ್ಟ ಬಾಲೆೆ ಹೃತಿಕ್ಷಾ ಜಿಲ್ಲಾಡಳಿತಕ್ಕೆ ಪತ್ರವೊಂದನ್ನು ಬರೆದು, ಅಮ್ಮನ ಮೊಬೈಲ್‌ ದೊರಕಿಸಿಕೊಡುವಂತೆ ಮನವಿ ಮಾಡಿದ್ದಳು. ಮೂರು ತಿಂಗಳ ಬಳಿಕ ಮಡಿಕೇರಿ ನಗರ ಠಾಣೆಯಿಂದ ಬಂದ ಫೋನ್‌ ಕರೆ ಹೃತಿಕ್ಷಾ ಹಾಗೂ ಆಕೆಯ ಕುಟುಂಬದ ಸದಸ್ಯರನ್ನು ಅಚ್ಚರಿಕೆ ತಳ್ಳಿದೆ.

ಮಡಿಕೇರಿ ಕೋವಿಡ್‌ ಆಸ್ಪತ್ರೆಯ ಗೋದಾಮು ಬಳಿಯಲ್ಲಿ ಕಂಡು ಬಂದ ಮೊಬೈಲನ್ನು ಆಸ್ಪತ್ರೆಯ ಸಿಬಂದಿ ಮಡಿಕೇರಿ ನಗರ ಠಾಣೆಗೆ ಹಸ್ತಾಂತರಿಸಿದ್ದಾರೆ. ಗುರುವಾರ ಬೆಳಗ್ಗೆ ಠಾಣೆಗೆ ಮಾವ ಟಿ.ಕೆ. ಸಂತೋಷ್‌ ಅವರೊಂದಿಗೆ ತೆರಳಿದ ಹೃತಿಕ್ಷಾ ಮೊಬೈಲ್‌ ಪರಿಶೀಲಿಸಿ, ಅದರಲ್ಲಿದ್ದ ಅಮ್ಮನ ಫೋಟೋಗಳನ್ನು ನೋಡಿ ನೋವಿನೊಂದಿಗೆ ಸಂಭ್ರಮಿಸಿದಳು. ಹೃತಿಕ್ಷಾಳಿಗೆ ಎಸ್‌ಪಿ ಅವರು ಚಾಕಲೇಟ್‌ ನೀಡುವ ಮೂಲಕ ಸಂತಸ ಹಂಚಿಕೊಂಡರು. ನಗರ ವೃತ್ತ ನಿರೀಕ್ಷಕ ವೆಂಕಟೇಶ್‌, ಠಾಣಾಧಿಕಾರಿ ಅಂತಿಮ ಗೌಡ ಹಾಜರಿದ್ದರು.

ಆ. 10ರಂದು ಕೋವಿಡ್‌ ಆಸ್ಪತ್ರೆಯ ಗೋದಾಮನ್ನು ಸ್ವತ್ಛಗೊಳಿಸುವ ಸಂದರ್ಭ ಒಂದು ಮೊಬೈಲ್‌ ದೊರಕಿದ್ದು,  ಪೊಲೀಸರಿಗೆ ಹಸ್ತಾಂತರಿಸಿದ್ದರು. ಐಎಂಐ ನಂಬರ್‌ ಪರಿಶೀಲಿಸಿದಾಗ ಕಾಣೆಯಾಗಿದ್ದ ಮೊಬೈಲ್‌ ಇದುವೇ ಎಂಬುದು ಖಚಿತವಾಯಿತು. ಪ್ರಕರಣ ದಾಖಲಾದ ದಿನದಿಂದಲೇ ತನಿಖೆ ನಡೆಸುತ್ತಿದ್ದೆವು. ಮೊಬೈಲ್‌ ದೊರಕಿರುವುದು ತುಂಬಾ ಖುಷಿಯಾಗಿದೆ; ಇನ್‌ಬಿಲ್ಟ್ ಮೆಮೋರಿಯಲ್ಲಿದ್ದ ಎಲ್ಲ ಡಾಟಾಗಳು ಮತ್ತು ಮೃತ ಪ್ರಭಾ ಅವರ ಫೋಟೋಗಳು ಸುರಕ್ಷಿತವಾಗಿವೆ ಕ್ಷಮಾಮಿಶ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.