ಮುಜುಂಗಾವು ತೀರ್ಥಸ್ನಾನ: ಹರಿದು ಬಂದ ಭಕ್ತ ಜನಸಾಗರ 


Team Udayavani, Oct 18, 2018, 11:47 AM IST

18-october-8.gif

ತೀರ್ಥಕೆರೆಯಲ್ಲಿ ಮಿಂದರೆ ದೇಹದ ತುರಿಕೆ,ಕಜ್ಜಿ,ಕೆಡು,ಚರ್ಮರೋಗಗಳು ವಾಸಿಯಾಗುವುದೆಂಬ ನಂಬಿಕೆಯಲ್ಲಿ ಭಕ್ತರು ಅನ್ಯರಾಜ್ಯಗಳಿಂದಲೂ ತೀರ್ಥ ಸ್ನಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿವರ್ಷವೂ ಆಗಮಿಸುವರು. ಈ ಬಾರಿಯೂ ಬೆಳ್ಳಂಬೆಳಗ್ಗೆಯೇ ವಿಶೇಷ ವಾಹನಗಳ ಮೂಲಕ ಭಕ್ತರು ತೀರ್ಥಸ್ನಾನಕ್ಕಾಗಿ ಆಗಮಿಸಿದ್ದರು.

ಕುಂಬಳೆ: ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ದ ದೇವಾಲಯಗಳಲ್ಲೊಂದಾದ ಮುಜುಂಗಾವು ಪಾರ್ಥಸಾರಥಿ ಶ್ರೀಕೃಷ್ಣ ದೇವಾಲಯದ ತೀರ್ಥ ಕೆರೆಯಲ್ಲಿ ತುಲಾ ಸಂಕ್ರಮಣ ದಿನವಾದ ಬುಧವಾರ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ಪುನೀತರಾದರು.

ಮುಂಜಾನೆ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ ಬಳಿಕ ತೀರ್ಥ ಕೆರೆಯಿಂದ ಕ್ಷೇತ್ರದ ಪ್ರಧಾನ ಅರ್ಚಕ ಕಿಶೋರ್‌ ಪೆರ್ಮುಕತ್ತಾಯರು ವೇದಘೋಷಗಳ ಮೆರವಣಿಗೆಯಲ್ಲಿ ಬೆಳ್ಳಿ ಕಲಶದಲ್ಲಿ ತೀರ್ಥ ತಂದು ದೇವರಿಗೆ ಅಭಿಷೇಕ ಮಾಡಿದರು. ಬಳಿಕ ಅಪಾರ ಸಂಖ್ಯೆಯ ಭಕ್ತರು ಮಧ್ಯಾಹ್ನದ ತನಕ ತೀರ್ಥ ಮಿಂದು ಬೆಳ್ತಿಗೆ ಹುರುಳಿ ಮಿಶ್ರಣವನ್ನು ತಲೆಗೆ ನಿವಾಳಿಸಿ, ತೀರ್ಥಕೊಳಕ್ಕೆ ಎಸೆಯುತ್ತಾ ತೀರ್ಥಕೆರೆಗೆ  ದಕ್ಷಿಣೆ ಹಾಕಿ ಬಳಿಕ ದೇವರ ದರ್ಶನ ಪಡೆದರು.

ಕ್ಷೇತ್ರದ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿ ಅವರು ಕ್ಷೇತ್ರದಲ್ಲಿ ವೈದಿಕ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಗ್ಗಿನ ಪೂಜೆಯ ಬಳಿಕ ನವಕ, ಗಣಪತಿ ಪೂಜೆ, ಪಲ್ಲಪೂಜೆ, ಮಧ್ಯಾಹ್ನ ಮಹಾಪೂಜೆ ಜರಗಿತು. ಬೆಳಗ್ಗಿನಿಂದ ಸಂಜೆ ತನಕ ನಡೆದ ಅನ್ನಸಂತರ್ಪಣೆಯಲ್ಲಿ ಸುಮಾರು 20 ಸಹಸ್ರ ಮಂದಿ ಭಕ್ತರು ಭಾಗವಹಿಸಿರುವರು. ಭಕ್ತರು ದೇವರಿಗೆ ಪ್ರಿಯವಾದ ಮುಳ್ಳು ಸೌತೆಯನ್ನು ಅರ್ಪಿಸಿದರು. ಕಾರ್ಯಕ್ರಮದ ವ್ಯವಸ್ಥೆಗೆ ಸುಮಾರು 25ರಷ್ಟು ವೈದಿಕರು, ವಿವಿಧ ಸಂಘ ಸಂಸ್ಥೆಗಳ 300ಕ್ಕೂ ಮಿಕ್ಕಿ ಸ್ವಯಂ ಸೇವಕರು, ಮಹಿಳಾ ಪೊಲೀಸ್‌ ಪೇದೆ ಸಹಿತ 50 ಕ್ಕೂ ಹೆಚ್ಚು ಪೊಲೀಸರು ಭಾಗವಹಿಸಿದ್ದರು.

ಮುಂಜಾಗ್ರತೆ: ತೀರ್ಥಕೆರೆಯಲ್ಲಿ ಯಾವುದೇ ಅಪಾಯವಾಗದಂತೆ ಮುಂಜಾಗ್ರತೆಯಾಗಿ ಕಾಸರಗೋಡು ಅಗ್ನಿಶಾಮಕದಳ ತಂಡದ 7 ಮಂದಿ ಸಿಬಂದಿಗಳು ಡಿಂಕಿ, ಲೈಫ್‌ಜಾಕೆಟ್‌, ಲೈಫ್‌ಬಾಯ್‌ ಉಪಕರಣಗಳೊಂದಿಗೆ ತೀರ್ಥಕೆರೆಯ ಸುತ್ತ ಕಾವಲು ಕಾಯುತ್ತಿದ್ದರು. ಕುಂಬಳೆ, ಬದಿಯಡ್ಕ, ಪೆರ್ಲ, ಪುತ್ತಿಗೆ ಭಾಗಕ್ಕೆ ಸಂಚರಿಸುವ ಎಲ್ಲ ಖಾಸಗಿ ಬಸ್ಸುಗಳು ಮುಜಂಗಾವು ಕ್ಷೇತ್ರದ ತನಕ ಪ್ರಯಾಣ ಬೆಳೆ‌ಸಿದವು.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.