ಮಂಗಳೂರು ಕುಕ್ಕರ್ ಪ್ರಕರಣ: ಕೊಚ್ಚಿಯಲ್ಲಿ ಎನ್ಐಎ ತನಿಖೆ
Team Udayavani, Dec 1, 2022, 6:45 AM IST
ಕೊಚ್ಚಿ: ಮಂಗಳೂರು ಕುಕ್ಕರ್ ಪ್ರಕರಣ ಮತ್ತು ಕೊಯಮತ್ತೂರು ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.
ದಕ್ಷಿಣ ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ಕೈಗೊಳ್ಳಲು ಕೇರಳದಲ್ಲಿ ನಿಧಿ ಸಂಗ್ರಹಿಸಲಾಗುತ್ತಿತ್ತು. ಜತೆಗೆ ಚಿನ್ನ ಮತ್ತು ಡ್ರಗ್ಸ್ ಕಳ್ಳಸಾಗಣೆಯಿಂದ ಬಂದ ಲಾಭವನ್ನು ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಅನುಮಾನವನ್ನು ಎನ್ಐಎ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಮಂಗಳೂರು ಕುಕ್ಕರ್ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಕೊಚ್ಚಿ ಮತ್ತು ಅಲೆಪ್ಪಿ ನಗರದ ಹಲವು ಕಡೆ ವಾಸವಿದ್ದ. ಡ್ರಗ್ಸ್ ವ್ಯವಹಾರ ಕುದುರಿಸಲು ಇಲ್ಲಿಗೆ ಆಗಮಿಸಿದ್ದ. ಇವನ ಕಾರ್ಯಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ ತೆರೆಯ ಹಿಂದಿನ ವ್ಯಕ್ತಿಯೂ ಕೊಚ್ಚಿಯಲ್ಲಿ ನೆಲೆಸಿರುವ ಅನುಮಾನವನ್ನು ಎನ್ಐಎ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಜತೆಗೆ ಕೊಚ್ಚಿಯಲ್ಲಿ ವಾಸವಿದ್ದಾಗ ಶಾರೀಕ್ ಯಾರ್ಯಾರನ್ನು ಸಂಪರ್ಕಿಸಿದ್ದ ಎಂಬ ಮಾಹಿತಿಯನ್ನು ಎನ್ಐಎ ಕಲೆಹಾಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?