ಮಂಗಳೂರು ಕುಕ್ಕರ್ ಪ್ರಕರಣ: ಕಾಸರಗೋಡು ಜಿಲ್ಲೆಗೂ ತನಿಖೆ ವಿಸ್ತರಣೆ ಸಾಧ್ಯತೆ
Team Udayavani, Nov 30, 2022, 6:55 AM IST
ಕಾಸರಗೋಡು: ಮಂಗಳೂರು ನಾಗುರಿಯಲ್ಲಿ ನ.19 ರಂದು ನಡೆದ ಕುಕ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲೆಯ ಕೆಲವರಿಗೆ ನಂಟು ಸಾಧ್ಯತೆಯ ಶಂಕೆಯ ಹಿನ್ನೆಲೆಯಲ್ಲಿ ಎನ್.ಐ.ಎ. ತಂಡ ತನಿಖೆಯನ್ನು ಕಾಸರಗೋಡಿಗೂ ವಿಸ್ತರಿಸುವ ಸಾಧ್ಯತೆಯಿದೆ.
ಇದೇ ಶಂಕೆಯಿಂದ ಕಾಸರಗೋಡು ಜಿಲ್ಲೆಯ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುಕ್ಕರ್ ಪ್ರಕರಣದಿಂದ ಗಾಯಗೊಂಡಿರುವ ಆರೋಪಿ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಚೇತರಿಸುತ್ತಿದ್ದು, ಆತನನ್ನು ಎನ್ಐಎ ಸಮಗ್ರ ತನಿಖೆ ನಡೆಸಲಿದೆ.
ವಿಧ್ವಂಸಕ ಕೃತ್ಯಕ್ಕಾಗಿ ಹಣ ಸಂಗ್ರಹಿಸಲು ಕೇರಳದಲ್ಲಿ ಈ ಹಿಂದೆ ಶಾರೀಕ್ ಕೊಚ್ಚಿಯಲ್ಲಿ ಮಾದಕ ದ್ರವ್ಯ ವ್ಯವಹಾರವನ್ನೂ ನಡೆಸಿದ್ದನೆಂಬ ಮಾಹಿತಿಯೂ ಪೊಲೀಸರಿಗೆ ಲಭಿಸಿದೆ.
ಕಾಸರಗೋಡು ಜಿಲ್ಲೆಯ ಚಂದೇರಾ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಯುವತಿಯರೂ ಸಹಿತ ಸುಮಾರು 10 ರಷ್ಟು ಮಂದಿ ಕೇರಳದಿಂದ ವಿದೇಶಕ್ಕೆ ಹೋಗಿ ಅಲ್ಲಿ ಸಿರಿಯಾ ಮತ್ತು ಅಪಘಾನಿಸ್ತಾನದಲ್ಲಿರುವ ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್(ಐಎಸ್) ಗೆ ಸೇರಿದ್ದರು. ಈ ಪೈಕಿ ಕೆಲವರು ದಾಳಿಯಲ್ಲಿ ಸಾವಿಗೀಡಾಗಿದ್ದರು. ಇನ್ನೂ ಕೆಲವರು ಅಪಘಾನಿಸ್ತಾನದ ಕಾರಾಗೃಹದಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ತಂಡಕ್ಕೆ ಸೇರಿದ ಮಂದಿಯೊಂದಿಗೆ ಮಂಗಳೂರು ಕುಕ್ಕರ್ ಪ್ರಕರಣದೊಂದಿಗೆ ಯಾವುದಾದರೂ ರೀತಿಯ ನಂಟು ಇದ್ದಿರಬಹುದೆಂಬ ಬಲವಾದ ಶಂಕೆ ತನಿಖಾ ತಂಡ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?