![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿ ಮಾಲಿನ್ಯ ರಾಶಿ
Team Udayavani, Apr 14, 2017, 2:13 PM IST
![12-kbl-5.jpg](https://www.udayavani.com/wp-content/uploads/2017/04/14/12-kbl-5-620x357.jpg)
ಕುಂಬಳೆ : ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಮಾಲಿನ್ಯ ರಾಶಿ ತುಂಬಿ ತುಳುಕುತ್ತಿದೆ. ಹೊಸಂಗಡಿ ಬಸ್ ನಿಲ್ದಾಣದ ಪಕ್ಕದ ಮಂಜೇಶ್ವರ ಬಸ್ ನಿಲ್ದಾಣ ಪರಿಸರ ಸಹಿತ ಹಲವೆಡೆಗಳಲ್ಲಿ ಇಂತಹಾ ಮಾಲಿನ್ಯ ಕುಂಭಾರವನ್ನು ಕಾಣಬಹುದಾಗಿದೆ.ಇದು ಇಂದು ನಿನ್ನೆಯ ಕಥೆಯಲ್ಲ.ಹಲವಾರು ವರ್ಷಗಳಿಂದ ಈ ದೃಶ್ಯ ಹೆಚ್ಚಿನೆಲ್ಲಾ ಪ್ರದೇಶಗಳಲ್ಲಿ ಕಂಡು ಬರುವುದು ಸರ್ವೇ ಸಾಮಾನ್ಯವಾಗಿದೆ.
ಪ್ರಧಾನ ಮಂತ್ರಿಯವರು ದೇಶಾದ್ಯಂತ ಸ್ವತ್ಛ ಭಾರತಕ್ಕೆ ಆದ್ಯತೆ ನೀಡಿದರೂ ಇದು ಹೆಚ್ಚಿನ ಗ್ರಾಮ ಪಂಚಾಯತ್ಗಳಿಗೆ ಬಾಧಕವಲ್ಲವೆಂಬುದಾಗಿ ನಿರ್ಲಕ್ಷ ತಾಳಿರುವ ಆರೋಪ ಬಲವಾಗಿದೆ.ಮಂಗಲ್ಪಾಡಿ, ಕುಂಬಳೆ, ಮೊಗ್ರಾಲ್ ಮೊದಲಾದ ಪೇಟೆಯನ್ನು ಹೊಂದಿದ ಸ್ಥಳೀಯಾಡಳಿತೆಗಳಲ್ಲಿ ಮಾಲಿನ್ಯ ರಾಶಿಯನ್ನು ಕಾಣಬಹುದಾಗಿದೆ.
ಗ್ರಾಮ ಪಂಚಾಯತ್ನಲ್ಲಿ ಪೂರ್ತಿ ಶುಚೀಕರಣ ಮಾಡಿರುವುದಾಗಿ ಈ ಹಿಂದೆಯೇ ಕೇಂದ್ರ ಸರಕಾರದ ನಿರ್ಮಲ ಪುರಸ್ಕಾರ್ ಬಹುಮಾನವನ್ನು ಜಿಲ್ಲೆಯ ಹೆಚ್ಚಿನೆಲ್ಲಾ ಗ್ರಾ.ಪಂ. ಅಧ್ಯಕ್ಷರು ದಿಲ್ಲಿಗೆ ತೆರಳಿ ಪಡೆದಿದ್ದಾರೆ.
ಆದರೆ ಆ ಬಳಿಕ ಶುಚಿತ್ವದ ಬಗ್ಗೆ ಆಡಳಿತ ಗಮನ ಹರಿಸಿಲ್ಲವಾದ ಕಾರಣ ಮಾಲಿನ್ಯ ಸಮಸ್ಯೆ ಜಟಿಲ ವಾಗುತ್ತಿರುವ ಆರೋಪ ಕೇಳಿ ಬರುತ್ತಿದೆ. ಆದರೆ ಮಳೆಗಾಲದಲ್ಲಿ ಈ ಮಾಲಿನ್ಯ ರಾಶಿಗಳಿಂದ ಮಾರಕ ರೋಗಾಣುಗಳು ಸೃಷ್ಟಿಯಾಗುತ್ತಿದೆ.ಸೊಳ್ಳೆ ಉತ್ಪಾದನೆಯಾಗಿ ಡೆಂಗ್ಯೂ ಜ್ವರ ಇತ್ಯಾದಿ ಮಾರಕ ರೋಗಗಳು ಹರಡುತ್ತಿವೆ.
ಸರಕಾರ ಆರೋಗ್ಯ ಇಲಾಖೆಯ ಮೂಲಕ ಸಾಕಷ್ಟು ನಿಧಿಯನ್ನು ಮಳೆಗಾಲಕ್ಕೆ ಮುನ್ನ ನೀಡುತ್ತಿದೆ.ಇದನ್ನು ಅಲ್ಲಲ್ಲಿ ಮಾಹಿತಿ ಶಿಬಿರ ನಡೆಸಿ, ಕಾಟಾಚಾರಕ್ಕೆ ಕೆಲಕಡೆ ಕೀನ್ ಮಾಡಿ ಫೂಟೊ ತೆಗೆಸಿ ಪತ್ರಿಕೆಗೆ ನೀಡಿ ಕೈತೊಳೆದು ಕೊಳ್ಳುವುದು ಸರ್ವೇ ಸಾಮಾನ್ಯವಾಗಿದೆ.
ಜನಸಾಮಾನ್ಯರೂ ತಮ್ಮ ಮನೆಯ ಮಾಲಿನ್ಯವನ್ನು ತಮ್ಮ ಮನೆಯ ಆವರಣದಿಂದ ಹೊರಗೆಸೆದು ಇದು ಇನ್ನು ನಮ್ಮದಲ್ಲವೆಂಬುದಾಗಿ ಭಾವಿಸುವುದರಿಂದ ಮಾಲಿನ್ಯ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.