ಮುಖವರ್ಣಿಕೆ-ನಾಟ್ಯ ತರಬೇತಿ ಸಮಾರೋಪ


Team Udayavani, Jan 11, 2019, 9:20 AM IST

11-january-16.jpg

ಮಂಜೇಶ್ವರ : ಕರಾವಳಿಯ ಹೆಮ್ಮೆಯ ಕಲಾ ಪ್ರಕಾರವಾದ ಯಕ್ಷಗಾನದ ವಿವಿಧ ಆಯಾಮಗಳ ಆಳ ಅಧ್ಯಯನವು ಪರಂಪರೆಯನ್ನು ಬೆಳೆಸುವ, ಮುನ್ನಡೆಸುವ ನಿಟ್ಟಿನಲ್ಲಿ ಅತ್ಯಗತ್ಯವಾಗಿದೆ. ಆಧುನಿಕತೆಗೆ ಒಗ್ಗಿಕೊಳ್ಳುವ ವೇಗದಲ್ಲಿ ಮೂಲ ಪರಂಪರೆಯನ್ನು ಅಲಕ್ಷಿಸುವುದು ಹಾನಿಕಾರಕವಾಗಿದ್ದು, ಈ ನಿಟ್ಟಿನಲ್ಲಿ ತರಬೇತಿ, ಪ್ರಾತ್ಯಕ್ಷಿಕೆಗಳು ಪೂರಕ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಾಮೋದರ ಶೆಟ್ಟಿ ತಿಳಿಸಿದರು.

ಕೋಳ್ಯೂರು ಶಂಕರನಾರಾಯಣ ದೇವಸ್ಥಾನದ ಸಭಾಭವನದಲ್ಲಿ ಒಂದು ತಿಂಗಳುಗಳ ಕಾಲ ಆಯೋಜಿಸಲಾಗಿದ್ದ ಮುಖವರ್ಣಿಕೆ ಮತ್ತು ನಾಟ್ಯತರಗತಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಹಿರಿಯ ವೈದಿಕ ವಿದ್ವಾಂಸ ಬೋಳಂತಕೋಡಿ ರಾಮ ಭಟ್ ಅವರು ಆಶೀರ್ವಚನಗೈದು ಮಾತನಾಡಿ, ವೇದ-ಪುರಾಣ ಅರ್ಥ ವಿಸ್ತಾರತೆಯನ್ನು ಜನಸಾಮಾನ್ಯರಿಗೆ ತಲಪಿಸುವಲ್ಲಿ ಯಕ್ಷಗಾನದಂತಹ ಶಾಸ್ತ್ರೀಯ ಕಲಾ ಪ್ರಕಾರಗಳು ಗಣನೀಯ ಕೊಡುಗೆ ನೀಡುತ್ತಿದೆ. ಆದರೆ ಹೊಸ ತಲೆಮಾರು ಯಕ್ಷಗಾನದ ಮೂಲ ಚೌಕಟ್ಟನ್ನು ಅಭ್ಯಸಿಸಿದರಷ್ಟೇ ನೀಡುವ ಪ್ರದರ್ಶನಗಳು ಅರ್ಥವ್ಯಾಪಕತೆ ಪಡೆಯುತ್ತದೆ. ವೈಜ್ಞಾನಿಕ, ಮನೋವಿಕಾಸದ ಹಿನ್ನೆಲೆಯ ಭಾರತೀಯ ನಾಟ್ಯ ಶಾಸ್ತ್ರದ ಅಂಶಗಳು ಅಡಕವಾಗಿರುವ ಯಕ್ಷಗಾನ ನಾಟ್ಯ ಮತ್ತು ಬೆಳಕು ಮತ್ತು ಮನಸ್ಸಿನ ಸಂಬಂಧಗಳಿಂದ ಕೂಡಿದ ಬಣ್ಣಗಾರಿಕೆಯ ಆಳವಾದ ಅನುಭವ ಕಲಾವಿದರಾಗುವವರಲ್ಲಿ ಇದ್ದಾಗ ಯಶಸ್ಸು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಕೇಶವ ಭಟ್ ಮೊಗಸಾಲೆ, ತಿಮ್ಮಣ್ಣ ಭಟ್ ಕೊಮ್ಮೆ, ವರ್ಕಾಡಿ ಸಂತೋಷ ತಂತ್ರಿ ಉಪಸ್ಥಿತರಿದ್ದರು. ನಾಟ್ಯ – ಮುಖವರ್ಣಿಕೆ ತರಗತಿಗಳನ್ನು ನಡೆಸಿಕೊಟ್ಟ ಗುರುಗಳಾದ ಕೊಮ್ಮೆ ಮಹಾಬಲೇಶ್ವರ ಭಟ್ ಮತ್ತು ಅಶ್ವತ್ಥ್ ಮಂಜನಾಡಿ ಅವರನ್ನು ಗೌರವಿಸಲಾಯಿತು.

ಬಳಿಕ ಹೊಸಮೂಲೆ ಗಣೇಶ ಭಟ್, ಪಾರೆಕೋಡಿ ಗಣಪತಿ ಭಟ್, ರಾಜ ಭಟ್ ಬರೆಮನೆ, ಸುಬ್ರಹ್ಮಣ್ಯ ಶಾಸ್ತ್ರಿ ಮಣಿಮುಂಡ, ಕುದ್ರೆಕೋಡ್ಲು ರಾಮಮೂರ್ತಿ, ಭಾರ್ಗವ ಬಲಿಪಗುಳಿ ಅವರ ಹಿಮ್ಮೇಳದಲ್ಲಿ ಶಿಬಿರಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ಯಜ್ಞ ಸಂರಕ್ಷಣೆ-ಇಂದ್ರಜಿತು ಕಾಳಗ ಯಕ್ಷಗಾನ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.