ಮೀಡಿಯಾ ಕ್ಲಾಸಿಕಲ್ಸ್‌ನಿಂದ ಪೆರಡಾಲ ಕಾಲನಿಯಲ್ಲಿ ಯೋಗ ದಿನಾಚರಣೆ


Team Udayavani, Jun 21, 2019, 2:58 PM IST

IMG_0018

ಬದಿಯಡ್ಕ:ಉತ್ತಮ ಆರೋಗ್ಯ ಮತ್ತು ಮನಸ್ಸಿನ ಸ್ಥಿಮಿತಕ್ಕಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡುವುದು ಅತ್ಯಗತ್ಯ. ಎದುರಾಗುವ ಸನ್ನಿವೇಶಗಳನ್ನು ಧೆ„ರ್ಯದಿಂದ ಎದುರಿಸುವ ಶಕ್ತಿ ಯೋಗದಿಂದ ಲಭ್ಯವಾಗುತ್ತದೆ. ನಮ್ಮೊಳಗಿನ ನೋವು ಮತ್ತು ಸಮಸ್ಯೆಗಳಿಂದ ಮುಕ್ತಿ ನೀಡುವ ಸುಲಭದಾರಿ ಯೋಗಾಭ್ಯಾಸ ಎಂದು ನಿವೃತ್ತ ಬಿಎಸ್‌ಎನ್‌ಎಲ್‌ ಉದ್ಯೋಗಿ ಈಶ್ವರ ನಾಯಕ್‌ ಅಭಿಪ್ರಾಯ ಪಟ್ಟರು.

ಪೆರಡಾಲ ಕೊರಗ ಕಾಲನಿಯಲ್ಲಿ ಮೀಡಿಯಾ ಕ್ಲಾಸಿಕಲ್ಸ್‌ ಆಶ್ರಯದಲ್ಲಿ ಜರುಗಿದ ವಿಶ್ವ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಬದಿಯಡ್ಕ ವ್ಯಾಪಾರಿ ವ್ಯವಸಾಯಿ ಸಮಿತಿಯ ಅಧ್ಯಕ್ಷರಾದ ಕುಂಜಾರು ಮಹಮ್ಮದ್‌ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಯಾವುದೇ ಮತ, ಧರ್ಮ, ಜಾತಿ, ಕುಲವೆನ್ನದೆ ಜಗತ್ತು ಒಪ್ಪಿಕೊಂಡ ಜೀವನ ಸೂತ್ರ ಇದಾಗಿದೆ. ಧಾರ್ಮಿಕ ಎಲ್ಲೆಗಳನ್ನು ಮೀರಿದ ಅಭ್ಯಾಸವಿದು. ಮನಸಿನ ನಿಯಂತ್ರಣ ಮತ್ತು ದೇಹದ ಸಮರ್ಪಕ ಕಾರ್ಯ ನಿರ್ವಹಣೆಗೆ ಕಾರಣವಾಗುವ ಯೋಗ ಮಾನವನನ್ನು ಪರಿಪೂರ್ಣತೆಯೆಡೆಗೆ ಕೊಂಡೊಯ್ಯಬಲ್ಲುದು ಎಂದರು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ ಸದಸ್ಯೆ ಅನಿತಾ ಮಯ್ಯ ಬದಿಯಡ್ಕ ಸಂಪನ್ಮೂಲ ವ್ಯಕ್ತಿಯಾಗಿ ಯೋಗದ ಕುರಿತು ಮಾಹಿತಿ ನೀಡಿ ಯೋಗಾಭ್ಯಾಸವು ಆಧ್ಯಾತ್ಮಿಕ ಆಚರಣೆಯಾಗಿದ್ದು ಚಿರಂತನ ಮತ್ತು ಪರಿಪೂರ್ಣವಾದುದಾಗಿದೆ. ಎಲ್ಲಾ ಕಾಲಕ್ಕೂ ಸಲ್ಲುವ ಹಾಗೂ ಭಗವಂತನೆಡೆಗೆ ಸಾಗುವ ಮಾರ್ಗೋಪಾಯ, ಮಾತ್ರವಲ್ಲದೆ ಇಡೀ ಮಾನವಕುಲದ ಅತ್ಯಂತ ದೊಡ್ಡ ಸಂಪತ್ತು ಯೋಗ. ಮನುಷ್ಯ ಮತ್ತು ಭಗವಂತನ ನಡುವಿನ ಕಳಚಿದ ಕೊಂಡಿಯನ್ನು ಬೆಸೆದು ಸತ್ಕರ್ಮದ ಮೂಲಕ ಸರಿದಾರಿ ತೋರುವ ಶಕ್ತಿ. ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ. ನಮ್ಮ ದೇಶದಲ್ಲಿ ಮಹೋನ್ನತ ಸ್ಥಾನವನ್ನು ಪಡೆದಿರುವ ಈ ಹವ್ಯಾಸ ಸುಖ ಜೀವನದ ಅವಿಭಾಜ್ಯ ಅಂಗ. ದೇಹ ಮತ್ತು ಮನಸ್ಸಿನೊಂದಿಗೆ ಮೌನ ಸಂವಾದ ನಡೆಸುವ ಯೋಗವೆಂಬುದು ಒಂದು ಸಾಧನೆ. ಸಮರ್ಪಕವಾದ, ಕ್ರಮಬದ್ದವಾದ, ಸೂಕ್ತವಾದ, ಸರಿಯಾದ ಯೋಗಾಭ್ಯಾಸ ನಮ್ಮಲ್ಲಿ ನಿಯಂತ್ರಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಾತ್ರವಲ್ಲದೆ ಶಾಂತವಾದ ಜೀವನಕ್ಕೆ ಮೂಲವಾಗಿದೆ. ದೇಹ ಮತ್ತು ,ಮನಸ್ಸನ್ನು ಒಂದುಗೂಡಿಸಿ ಏಕಾಗ್ರತೆಗೊಳಿಸುವುದೇ ಯೋಗದ ಗುರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಲೌಕಿಕ ಭೋಗಗಳಿಗಿಂತಲೂ ಆಂತರಿಕ ಶುದ್ಧಿ, ಸಮಾಧಾನ ಮುಖ್ಯವಾದುದು. ಆಧುನಿಕ ಜೀವನ ರೀತಿ, ಆಹಾರ ಪದ್ಧತಿ ತಂದೊಡ್ಡುವ ಹೆಚ್ಚಿನ ಎಲ್ಲಾ ಸಮಸ್ಯೆಗಳಿಗೂ ಯೋಗವೇ ಪರಿಹಾರ. ಮನಸಿದ್ದರೆ ಮಾರ್ಗ. ಆದುದರಿಂದ ಇರುವ ಸಮಯದಲ್ಲಿ ಒಂದಷ್ಟು ಹೊತ್ತು ಯೋಗಕ್ಕಾಗಿ ಮೀಸಲಿಟ್ಟು ಸುಂದರವಾದ ಬದುಕನ್ನು ಕಂಡುಕೊಳ್ಳುವ ಮನಸು ಮಾಡುವ ಮೂಲಕ ಉತ್ತಮವಾದ ಜೀವನ ಶೆ„ಲಿಯನ್ನು ನಮ್ಮದಾಗಿಸುವ ಎಂದು ಸಲಹೆಯನ್ನಿತ್ತರು. ಮೀಡಿಯಾ ಕ್ಲಾಸಿಕಲ್‌ ಸ್ಥಾಪಕರಾದ ಅಖೀಲೇಶ್‌ ನಗುಮುಗಂ, ಶ್ಯಾಮಲಾ ನಾರಂಪಾಡಿ ಶುಭಾಶಂಸನೆಗೆ„ದರು. ಕಾರ್ಯದರ್ಶಿಗಳಾದ ಬಾಲಕೃಷ್ಣ ಆಚ್ಚಾಯಿ ಧನ್ಯವಾದ ಸಮರ್ಪಿಸಿದರು. ಸಂಘಟನಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.