ಸಚಿವ ಸಜಿ ಚೆರಿಯಾನರನ್ನು ಭೇಟಿಯಾದ ಶಾಸಕ ಎ.ಕೆ ಎಂ.ಅಶ್ರಫ್: ವಿವಿಧ ಯೋಜನೆಗಳ ಕುರಿತು ಚರ್ಚೆ


Team Udayavani, Jun 28, 2021, 12:19 PM IST

 ಸಚಿವ ಸಜಿ ಚೆರಿಯಾನರನ್ನು ಭೇಟಿಯಾದ ಶಾಸಕ ಎ.ಕೆ ಎಂ.ಅಶ್ರಫ್: ವಿವಿಧ ಯೋಜನೆಗಳ ಕುರಿತು ಚರ್ಚೆ

ಮಂಜೇಶ್ವರ/ತಿರುವಂತಪುರ: ಮಂಜೇಶ್ವರ ಕ್ಷೇತ್ರದ ಎಂಟು ತೀರ ಪ್ರದೇಶ ರಸ್ತೆಗಳ ಅಭಿವೃದ್ಧಿಗಾಗಿ ಆಡಳಿತಾತ್ಮಕ ಅನುಮೋದನೆ ಹಾಗೂ ಸಮುದ್ರದ ಅಬ್ಬರದಿಂದ ತತ್ತರಿಸಿದ ಪ್ರದೇಶಗಳ ಜನತೆಯ ಗೋಳನ್ನು ವಿವರಿಸಿ, ಟ್ರಾಲಿಂಗ್ ನಿಷೇಧದ ಅವಧಿಯಲ್ಲಿ ಸರ್ಕಾರ ಮೀನುಗಾರರಿಗೆ ನ್ಯಾಯಬೆಲೆ ಅಂಗಡಿಯ ಮೂಲಕ ವಿತರಿಸುವ ಆಹಾರ-ಧಾನ್ಯಗಳನ್ನು ಪಡೆಯಲು ಅರ್ಹರಾದ ಹಲವು ಫಲಾನುಭವಿಗಳು ಪ್ರಸ್ತುತ ಯೋಜನೆಯ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದಿರುವುದರ ಬಗ್ಗೆ ಮಂಜೇಶ್ವರ ಕ್ಷೇತ್ರದ ಶಾಸಕರಾದ ಶ್ರೀ ಎ ಕೆ ಎಂ ಅಶ್ರಫ್  ಕೇರಳ ಮೀನುಗಾರಿಕೆ ಮತ್ತು ಸಾಂಸ್ಕೃತಿಕ ಸಚಿವರಾದ ಶ್ರೀ ಸಜಿ ಚೆರಿಯಾನ್ ಇವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.

ತೀರಪ್ರದೇಶದ ಜನತೆಯ ಬಗ್ಗೆ ಹಾಗೂ ಮೀನುಗಾರರ ವಿಚಾರವಾಗಿ ಜೂನ್ ತಿಂಗಳಲ್ಲಿ ಶಾಸಕರು ಸಚಿವರನ್ನು ಭೇಟಿಯಾಗುತ್ತಿರುವುದು ಇದು ಎರಡನೇ ಬಾರಿ.ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವ ಕ್ಷೇತ್ರದ ತೀರ ಪ್ರದೇಶಕ್ಕೆ ಸಚಿವರು ಮುಖತಃ ಭೇಟಿಯಾಗಬೇಕೆಂದು ಮನವಿ ಮಾಡಿದ ಎ ಕೆ ಎಂ ಅಶ್ರಫ್ ರವರು ಉಪ್ಪಳ ಮುಸೋಡಿ, ಕೊಯಿಪ್ಪಾಡಿ, ಪೆರ್’ವಾಡ್, ಕೊಪ್ಪಳ, ಮಂಜೇಶ್ವರ ಕಣ್ವ ತೀರ್ಥ, ಹೊಸಬೆಟ್ಟು, ಬೆಂಗ್ರೆ ಮಂಜೇಶ್ವರ, ಆರಿಕ್ಕಾಡಿ ಮುಂತಾದ ತೀರಪ್ರದೇಶಗಳಿಗಾಗಿ ಪ್ರತ್ಯೇಕ ಪ್ಯಾಕೇಜ್ ಮಂಜೂರು ಮಾಡಬೇಕೆಂದು ಕೋರಿದರು.

ಕಡಲಿನ ಅಬ್ಬರವನ್ನು ತಡೆಯಲು ಟೆಟ್ರಾಪೋಡ್ ಯೋಜನೆಯನ್ನು ಕೇರಳದಲ್ಲಿ ಜಾರಿಗೊಳಿಸುವಾಗ ಮಂಜೇಶ್ವರವನ್ನು ಸಮುದ್ರದ ಅಬ್ಬರ ಅತಿಯಾದ ಕ್ಷೇತ್ರ ಎಂಬ ಕಾರಣದಿಂದ ಮೊದಲಿನ ಆದ್ಯತೆ ನೀಡಬೇಕು.ಸಮುದ್ರ ತೀರದಿಂದ ಮನೆ ಮತ್ತು ಆಸ್ತಿಯನ್ನು ಬಿಟ್ಟು ತೆರಳುವವರಿಗೆ ‘ಪುನರ್’ಗೇಹಂ’ ಯೋಜನೆಯ ಮೂಲಕ ವಿತರಿಸುವ ಆರ್ಥಿಕ ನೆರವನ್ನು ಹತ್ತು ಲಕ್ಷದಿಂದ ಇಪ್ಪತ್ತು ಲಕ್ಷಕ್ಕೆ ಹೆಚ್ಚಿಸಬೇಕು. ಹೀಗೆ ತೆರಳುವವರಲ್ಲಿ ಒಂದೇ ಮನೆಯ ಒಂದಕ್ಕಿಂತ ಹೆಚ್ಚು ಕುಟುಂಬವಿದ್ದಲ್ಲಿ ಅವನ್ನು ಬೇರೆ ಕುಟುಂಬ ಎಂದು ಗಣನೆಗೆ ತೆಗೆದುಕೊಂಡು ಧನ ಸಹಾಯಯನ್ನು ನೀಡಬೇಕು ಎಂದು ಮನವಿಯಲ್ಲಿ ವಿವರಿಸಲಾಯಿತು.ಮನವಿಯನ್ನು ಕೂಲಂಕಷವಾಗಿ ಆಲಿಸಿದ ಸಚಿವರು ಸಾಧ್ಯವಾಗುವ ಮಟ್ಟಿನಲ್ಲಿ ಸಹಕಾರವನ್ನು ನೀಡುವ ಬಗ್ಗೆ ಭರವಸೆ ನೀಡಿರುವುದಾಗಿ ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.