Fraud Case ಹಣ ವರ್ಗಾಯಿಸಿಕೊಂಡು ವಂಚನೆ: ತನಿಖೆ ಆರಂಭ
Team Udayavani, Feb 1, 2024, 1:30 AM IST
ಕುಂಬಳೆ: ಸಾಮಗ್ರಿಗಳನ್ನು ವಿತರಣೆ ಮಾಡಿದ 32 ಲಕ್ಷ ರೂ. ಹಣವನ್ನು ಸೇಲ್ಸ್ ಎಕ್ಸಿಕ್ಯೂಟಿವ್ ತನ್ನ ಸ್ವಂತ ಖಾತೆಗೆ ವರ್ಗಾಯಿಸಿ ವಂಚಿಸಿರುವುದಾಗಿ ನ್ಯಾಯಾಲಯಕ್ಕೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಕುಂಬಳೆ ಶಾಂತಿಪಳ್ಳ ಬದ್ರಿಯ ನಗರದ ಗಬ್ಟಾನ ಮ್ಯಾಟ್ರಿಸ್ ಸಂಸ್ಥೆಯ ಮಾಲಕ ಪ್ರದೀಪ್ ಕುಮಾರ್ ಶರ್ಮ ನೀಡಿದ ದೂರಿನಂತೆ ಸಂಸ್ಥೆಯ ಸೇಲ್ಸ್ ಎಕ್ಸಿಕ್ಯೂಟಿವ್ ಯುಪಿ ನಿವಾಸಿಯಾದ ಅನಿಲ್ ಕುಮಾರ್ ಸಿಂಗ್ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಹಾಸಿಗೆಗಳಿಗೆ ಆರ್ಡರ್ ಪಡೆದು ವಿತರಿಸುವ ಹಾಗು ಹಣ ಸಂಗ್ರಹಿಸುವ ಕೆಲಸವನ್ನು ಅನಿಲ್ ಕುಮಾರ್ ಸಿಂಗ್ ಮಾಡುತ್ತಿದ್ದರು. ಆದರೆ ಸಂಗ್ರಹಿಸಿದ ಹಣವನ್ನು ತನ್ನ ಸ್ವಂತ ಖಾತೆಗೆ ವರ್ಗಾಯಿಸಿದ್ದಾಗಿ ಪ್ರದೀಪ್ ಕುಮಾರ್ ಶರ್ಮ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ