ತೋಡಾದ ರೋಡು; ರಸ್ತೆಗಳೇಕೆ ಹೀಗೆ..?


Team Udayavani, Jul 20, 2019, 4:41 PM IST

1

ವಿದ್ಯಾನಗರ: ದಶಕಗಳು ಕಳೆದರೂ ಮೋಕ್ಷಪ್ರಾಪ್ತಿಯಾಗದೆ ಅನಾಥವಾದ ರಸ್ತೆಯೊಂದು ಪ್ರಯಾಣಿಕರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ರಸ್ತೆಯಾದ್ಯಂತ ದೊಡ್ಡ ದೊಡ್ಡ ಹೊಂಡಗಳಲ್ಲಿನೀರು ತುಂಬಿ ಕೆಸರುಮಯವಾಗಿ ನಡೆದಾಡುವುದೇ ಕಷ್ಟ ಎನ್ನುವಂತಾಗಿದೆ. ಸಾವಿರಾರು ಜನರಿಗೆ ಆಶ್ರಯವಾಗುವ ಬದಿಯಡ್ಕ- ಏತಡ್ಕ- ಕಿನ್ನಿಂಗಾರ್‌- ಸುಳ್ಯಪದವು ಹೆದ್ದಾರಿಯು ಜನಜೀವನಕ್ಕೆ ಸವಾಲಾಗಿ ಚಾಚಿಕೊಂಡಿದ್ದು ಮಳೆಗಾಲ ಪ್ರಾರಂಭವಾದಾಗಿನಿಂದ ರೋಡು ತೋಡಾಗಿದೆ.

ಕೇರಳ-ಕರ್ನಾಟಕವನ್ನು ಸೇರಿಸುವ ಬದಿಯಡ್ಕ-ಕುಂಬಾಜೆ-ಎಣ್ಮಕಜೆ-ಬೆಳ್ಳೂರು ಪಂಚಾಯತುಗಳ ಮೂಲಕ ಹಾದುಹೋಗುವ ಜಿಲ್ಲೆಯ ಪ್ರಧಾನ ರಸ್ತೆಗಳಲ್ಲಿ ಒಂದಾದ ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ. ರಸ್ತೆಯಾದ್ಯಂತ ಡಾಮರು ಎದ್ದುಹೋಗಿ ಸಷ್ಠಿಯಾದ ಹೊಂಡಗಳು, ಜಲ್ಲಿಕಲ್ಲುಗಳು ತುಂಬಿಹೋಗಿದ್ದು ಈ ರಸ್ತೆಯನ್ನು ಆಶ್ರಯಿಸಿರುವ ವಾಹನ ಚಾಲಕರು ಭೀತಿಯಿಂದಲೇ ಗುರಿಯತ್ತ ಸಾಗುವಂತಾಗಿದೆ. ಡಾಮರ್‌ ಸಂಪೂರ್ಣ ಕಿತ್ತುಹೋಗಿ ಜರ್ಝರಿತವಾದ ಸಾರ್ವಜನಿಕ ರಸ್ತೆಯು ರಸ್ತೆಯ ರೂಪವನ್ನೇ ಕಳೆದುಕೊಂಡು ತೋಡಿನಂತೆ ಭಾಸವಾಗುತ್ತಿದ್ದು ಹೊಂಡಗಳೇ ತುಂಬಿ ಹೋಗಿರುವುದರಿಂದ ವಾಹನ ಚಾಲಕರು ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲೆಯ ಪ್ರಧಾನ ರಸ್ತೆ
2009ರಲ್ಲಿ ಜಿಲ್ಲೆಯ ಪ್ರಧಾನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹೀನ ಸ್ಥಿತಿಯಲ್ಲಿ ಜನರ ಪಾಲಿಗೆ ಮರೀಚಿಕೆಯಾದ ಲೋಕೋಪಯೋಗಿ ಇಲಾಖೆ ಅಧೀನದ ಬದಿಯಡ್ಕ- ಸುಳ್ಯಪದವು ರಸ್ತೆ ಶೋಚನೀಯವಸ್ಥೆಯಲ್ಲಿದ್ದು ವರ್ಷಗಳಿಂದ ದುರಸ್ಥಿ ಮಾಡುವ ಭರವಸೆಗಳು ನೀರ ಮೇಲಿಟ್ಟ ಹೋಮದಂತಾಗುತ್ತಿದೆ. ಮಲೆನಾಡು ಹೆದ್ದಾರಿ ನಿರ್ಮಾಣ ಯೋಜನೆಯಡಿ ಈ ರಸ್ತೆಯ ನವೀಕರಣ ಕಾಮಗಾರಿ ಮಾಡುವ ಭರವಸೆಯೂ ಕೈಗೂಡುವ ಯಾವುದೇ ಸೂಚನೆ ಇದುವರೆಗೂ ಲಭಿಸಿಲ್ಲ. ಶಾಲಾ ಮಕ್ಕಳು ರೋಗಿಗಳು ಸೇರಿದಂತೆ ಇಲ್ಲಿನ ಜನತೆ ಎದುರಿಸುವ ಸಮಸ್ಯೆ ಇಂದು ನಿನ್ನೆಯದಲ್ಲ.


20 ವರ್ಷಗಳಿಂದ ಟಾರ್‌ ಕಾಣದ ರಸ್ತೆ

ಸುಮಾರು 2 ದಶಕಗಳಿಂದ ಈ ರಸ್ತೆ ಒಂದೇ ಒಂದು ಹನಿ ಟಾರ್‌ ಕಂಡಿಲ್ಲ ಎನ್ನುವುದು ನಂಬಲೇ ಬೇಕಾದ ಸತ್ಯ. ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಾಗಾದ ಕಾಸರಗೋಡಿನ ಎಂಡೋಸಲ್ಫಾನ್‌ ಬಾಧಿತ ಪ್ರದೇಶ ಇದಾಗಿದೆ.
ಬಸ್ಸೂ ಬರುವುದಿಲ್ಲ

ಈ ಹಿಂದೆ ಖಾಸಗಿ, ಸರಕಾರಿ ಬಸ್ಸುಗಳು ಈ ಮಾರ್ಗವಾಗಿ ಸಂಚರಿಸುತ್ತಿದ್ದು ದುಸ್ಥಿತಿಯಿಂದಾಗಿ ನಾಲ್ಕು ವರ್ಷಗಳ ಹಿಂದೆಯೇ ಸಂಚಾರ ಮೊಟಕು ಗೊಳಿಸಿದ್ದು ಪ್ರಸ್ತುತ ಒಂದೇ ಒಂದು ಬಸ್ಸು ಮಾತ್ರವೇ ದಿನಕ್ಕೆರಡು ಬಾರಿ ಸಂಚರಿಸುತ್ತದೆ. ಮಧ್ಯಾಹ್ನದ ಸಂಚಾರವನ್ನು ಮೊಟಕುಗೊಳಿಸಲಾಗಿದೆ. ಎಂಡೋಸಲ್ಫಾನ್‌ ಪೀಡಿತರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಹಾದುಹೋಗುವ ಈ ರಸ್ತೆಯಲ್ಲಿ ಆಂಬಲೆನ್ಸ್‌ ಸೇರಿದಂತೆ ಯಾವುದೇ ಲಘು ವಾಹನಗಳು ಸಂಚರಿಸಲು ಹಿಂದೇಟು ಹಾಕುತ್ತಿದ್ದು ತುರ್ತು ಚಿಕಿತ್ಸೆಗೂ ಬದಿಯಡ್ಕ-ಮುಳ್ಳೇರಿಯ ರಸ್ತೆಯನ್ನು ಆಶ್ರಯಿಸಿ ಸುತ್ತು ಬಳಸಿ ಸಂಚರಿಸಬೇಕಾದ ಅನಿವಾರ್ಯತೆಯಿದೆ. ಕಿನ್ನಿಂಗಾರು ಭಾಗದ ಜನರು ಬದಿಯಡ್ಕ ತೆರಳಲು ನಾಟೆಕಲ್ಲು, ಬೆಳಿಂಜ, ಸ್ವರ್ಗ, ಪೆರ್ಲ ಅಥವಾ ಮುಳ್ಳೇರಿಯ ದಾರಿಯಾಗಿ 5-10 ಕಿಲೋಮೀಟರ್‌ ಹೆಚ್ಚು ದೂರವನ್ನು ಕ್ರಮಿಸಬೇಕಾಗಿದೆ.

ಘನ ವಾಹನಗಳಿಂದ ರಸ್ತೆ ನಾಶ
ಕಗ್ಗಲ್ಲು ಸಾಗಾಟ ಲಾರಿಗಳು ಅಮಿತ ಭಾರ ಹೇರಿ ಸಂಚರಿಸುತ್ತಿರುವುದೇ ಈ ರಸ್ತೆಯ ಶೋಚನೀಯಾವಸ್ಥೆಗೆ ಕಾರಣ. ಸಣ್ಣ ಪುಟ್ಟ ದುರಸ್ಥಿ ಕಾರ್ಯಗಳನ್ನು ಕೈಗೊಂಡರೂ ಈ ಲಾರಿಗಳಿಂದಾಗಿ ಬಹುಬೇಗನೆ ರಸ್ತೆ ನಶಿಸಿ ಹೋಗುತ್ತದೆ ಎಂಬುದು ಸ್ಥಳೀಯರ ದೂರು.

ಗುತ್ತಿಗೆ ಲಭಿಸಿದರೂ ಆರಂಭವಾಗದ ಕೆಲಸ
ಆರ್ಲಪದವು-ಮುಳ್ಳೇರಿಯ ರಸ್ತೆಗೆ ನಾಲ್ಕು ತಿಂಗಳ ಹಿಂದೆಯೇ ಗುತ್ತಿಗೆ ಲಭಿಸಿದ್ದರೂ ಗುತ್ತಿಗೆದಾರರು ಇದುವರೆಗೂ ಯಾವುದೇ ಕೆಲಸ ಪ್ರಾರಂಭ ಮಾಡದಿರುವುದು ಜನರ ಕ್ರೋಧಕ್ಕೆ ಕಾರಣವಾಗಿದೆ. ಇನ್ನೂ ಕೆಲಸ ಆರಂಭಿಸದಿದ್ದಲ್ಲಿ ಇನ್ನೊಂದು ಪ್ರತಿಭಟನೆಗೆ ಕಾರಣವಾಗಲಿದೆ.

ಪ್ರತಿಭಟನೆಗೂ ಸಿಕ್ಕದ ಫಲ
ಬಿಜೆಪಿ ನೇತೃತ್ವದಲ್ಲಿ ಕರುವಲ್ತಡ್ಕದಿಂದ ಏತಡ್ಕದವರೆಗೆ ಪಾದಯಾತ್ರೆ, ಪಂಪಿಂಗ್‌ ಚಳಚಳಿ, ಚಕ್ರಸ್ತಂಭನ, ಯುವ ಮೋರ್ಚಾ ನೇತೃತ್ವದ ಪಂಕ್ಚರ್‌ ಚಳುವಳಿ, ಜನಕೀಯ ಕ್ರಿಯಾಸಮಿತಿ ನೇತೃತ್ವದಲ್ಲಿ ರಾಜ್ಯ ರಾಜಧಾನಿ ತಿರುವನಂತಪುರಂ ಸೆಕ್ರೆಟೇರಿಯೆಟ್‌ ಮುಂದೆ ಅಳುವ ಸಮರ, ವ್ಯಾಪಾರಿ ಏಕೋಪನಾ ಸಮಿತಿ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ನಿರಂತರ ಹಲವು ಪ್ರತಿಭಟನೆಗಳು ನಡೆದರೂ ರಸ್ತೆಯ ದುರವಸ್ಥೆ ದೂರವಾಗಿಲ್ಲ.

ಹಲವಾರು ವರ್ಷಗಳಿಂದ ಡಾಮರು ಕಾಣದ ನಮ್ಮೂರ ರಸ್ತೆಯ ಸಂಚಾರ ಯಾತನಾಜನಕವಾಗಿದೆ. ಮಾಡುವ ಪ್ರಯತ್ನಗಳಿಗೆ ಸಿಗುವ ಭರವಸೆಗಳೂ ಕಡತಗಳಲ್ಲೇ ಉಳಿದು ಜನರ ಪಾಲಿಗೆ ನಿಷ್ಪ್ರಯೋಜಕವಾಗಿದೆ. ಈ ಸಮಸ್ಯೆಗೆ ಪರಿಹಾರ ಕಾಣ ಬೇಕಾದವರು ಕಣ್ಣಿದ್ದು ಕಾಣದಿರುವಾಗ ಸಾಮಾನ್ಯ ಜನತೆಯ ಗೋಳನ್ನು ಕೇಳುವವರಾರು? ಅಭಿವೃದ್ಧಿ ಎನ್ನುವುದು ಪೇಟೆ ಪಟ್ಟಣಗಳಿಗೆ ಸೀಮಿತವಾಗಿವೆಯೋ? ಗ್ರಾಮವಾಸಿಗಳತ್ತ ನಮ್ಮ ನಾಯಕರು ಗಮನ ಹರಿಸುವಂತಾಗಬೇಕು.
ಪ್ರಭಾಕರ ಕಲ್ಲೂರಾಯ ಬನದಗದ್ದೆ, ಅಧ್ಯಕ್ಷರು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.