2018ರ ಜನವರಿಯಲ್ಲಿ ಸಂಗೀತ ರಥಯಾತ್ರೆ: ಮುದ್ದುಕೃಷ್ಣ


Team Udayavani, Aug 3, 2017, 6:35 AM IST

02ksde5.jpg

ಹೊಸಂಗಡ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನಿವಾಸದಿಂದ 2018ರ ಜನವರಿ ತಿಂಗಳಲ್ಲಿ “ಸಂಗೀತ ರಥ ಯಾತ್ರೆ’ ಹೊರಡಿಸುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ. ಹದಿನೆಂಟು ವರ್ಷಗಳ ಅನಂತರ ಮತ್ತೂಮ್ಮೆ ಸಂಗೀತ ರಥದ ಮುಖಾಂತರ ಕಾಸರಗೋಡು ಕನ್ನಡಿಗರ ಸಾಂಸ್ಕೃತಿಕ ಮನಸ್ಸನ್ನು ಮತ್ತಷ್ಟು ಗಟ್ಟಿಯಾಗಿಸುವ ಪ್ರಯತ್ನ ಮಾಡಲಾಗುವುದೆಂದು ಕರ್ನಾಟಕ ಸುಗಮ ಸಂಗೀತ ಪರಿಷತ್‌ನ ಗೌರವಾ ಧ್ಯಕ್ಷ ವೈ.ಕೆ. ಮುದ್ದುಕೃಷ್ಣ ತಿಳಿಸಿದರು.

ಅವರು ಕಾಸರಗೋಡಿನ ಸಾಹಿತ್ಯಿಕ- ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ, ಗೋವಿಂದ ಪೈ ಸ್ಮಾರಕ ಟ್ರಸ್ಟ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಮಂಜೇಶ್ವರ ಗೋವಿಂದ ಪೈ ನಿವಾಸ ಗಿಳಿವಿಂಡುವಿನಲ್ಲಿ ಏರ್ಪಡಿಸಿದ “ಶ್ರಾವಣ ಕುಶಲೋಪರಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಕಲಾವಿದರು ಹಾಗೂ ಸಾಹಿತಿ ಗಳು ಕಾಸರಗೋಡಿಗೆ ಆಗಮಿಸಿ ಪರಸ್ಪರ ಚಟುವಟಿಕೆಗಳನ್ನು ಹಂಚಿಕೊಳ್ಳುವ ಮುಖಾಂತರ ಹತ್ತಿರವಾಗುತ್ತಿರುವುದು ಖುಷಿ ತಂದಿದೆ. ಈಗಿನ ಕಾಲಘಟ್ಟದಲ್ಲಿ ಇದರ ಅನಿವಾರ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾದ “ರಂಗಚಿನ್ನಾರಿ’ಯ ಪ್ರಯತ್ನ ನಿಜಕ್ಕೂ ಶ್ಲಾಘನೀಯ ಅಂದರು. ಕೇರಳ ಸರಕಾರ ಕನ್ನಡಿಗರ ಮೇಲೆ ಮಲಯಾಳ ಭಾಷೆಯನ್ನು ಹೇರುತ್ತಿರುವುದನ್ನು ಅವರು ಕಠಿನ ಭಾಷೆಯಲ್ಲಿ ವಿರೋಧಿಸಿದರು.

ಕಾರ್ಯಕ್ರಮವನ್ನು ಶ್ರೀಮತ್‌ ಅನಂತೇಶ್ವರ ದೇವಸ್ಥಾನ ಆಡಳಿತ ಮೊಕ್ತೇ ಸರರೂ ಖ್ಯಾತ ವೈದ್ಯರೂ ಆಗಿರುವ ಡಾ| ಅನಂತ ಕಾಮತ್‌ ದೀಪ ಬೆಳಗಿಸಿ ಉದ್ಘಾಟಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ, ನಾಟಕಕಾರ ಡಾ| ನಾ. ದಾಮೋದರ ಶೆಟ್ಟಿ ಅವರು ಅತಿಥಿಯಾಗಿ ಭಾಗವಹಿಸಿ ಸಾಹಿತ್ಯದ ಮನಸ್ಸುಗಳು ಹತ್ತಿರವಾಗುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ ಉತ್ತರ ಕನ್ನಡದ ಕಾಳೀ ನದೀ ತೀರದಿಂದ ಕಾಸರಗೋಡು ಚಂದ್ರಗಿರಿ ನದಿ ತನಕ ಎಂಬ ಪರಿಕಲ್ಪನೆಯೇ ವಿಶಿಷ್ಟ ರೀತಿಯದ್ದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್‌ನ ಜತೆ ಕಾರ್ಯದರ್ಶಿ ಎಂ.ಜೆ. ಕಿಣಿ ಮಾತನಾಡಿ “ಗಿಳಿವಿಂಡು’ ಸ್ಮಾರಕದಲ್ಲಿ ಪ್ರತೀ ತಿಂಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆಯಲ್ಲದೆ, ಮತ್ತಷ್ಟು ಸಾಹಿತ್ತಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಸಹಕಾರ ಕೋರುತ್ತಿದ್ದೇವೆ ಎಂದರು.

ಖ್ಯಾತ ವೈದ್ಯ ಡಾ| ರಮಾನಂದ ಬನಾರಿ, ಪಂಚಾಯತ್‌ ವಾರ್ಡ್‌ ಸದಸ್ಯೆ ಸುಪ್ರಿಯಾ ಪೈ, ಬಿ.ವಿ. ಕಕ್ಕಿಲ್ಲಾಯ, ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರವಿಂದ ಕರ್ಕಿಕೋಡಿ, ರಂಗಚಿನ್ನಾರಿ ಸಂಸ್ಥೆಯ ನಿರ್ದೇಶಕ ಸತ್ಯನಾರಾಯಣ ಕೆ., ಕಾಸರಗೋಡು ಚಿನ್ನಾ ಉಪಸ್ಥಿತರಿದ್ದರು.

ಟ್ರಸ್ಟ್‌ನ ಕಾರ್ಯದರ್ಶಿ ಆರ್‌. ಜಯಾನಂದ ಸ್ವಾಗತಿಸಿದರು. ಖ್ಯಾತ ಗಾಯಕಿ ಪ್ರಭಾ ನಾಯಕ್‌ ತಂಡದವರಿಂದ ಪ್ರಾರ್ಥನೆ ಹಾಡಲಾಯಿತು.

ಪ್ರಖ್ಯಾತ ಸುಗಮ ಸಂಗೀತ ಗಾಯಕರಾದ ವೈ.ಕೆ.ಮುದ್ದುಕೃಷ್ಣ ಸೀಮಾ ರಾಯ್ಕರ್‌, ಕಿಶೋರ್‌ ಪೆರ್ಲ, ಉಮೇಶ್‌ ಮುಂಡಳ್ಳಿ, ಪೃಥ್ವೀ ನಾಯಕ್‌, ಪ್ರಜ್ಞಾ ನಾಯಕ್‌, ಶ್ವೇತಾ ಪೈ, ಪ್ರಭಾ ನಾಯಕ್‌ ಮುಂತಾದವರು ಭಾವ, ಭಕ್ತಿ, ಜಾನಪದ ಗೀತೆಗಳನ್ನು ಹಾಡಿದರು.

ಪ್ರಾಸ್ತಾವಿಕ ಮಾತನಾಡಿದ ರಂಗ ಚಿನ್ನಾರಿಯ ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಮುಂದಿನ ದಿನಗಳಲ್ಲಿ ರಂಗಚಿನ್ನಾರಿಯು ಮಂಜೇಶ್ವರ ತಾಲೂಕಿನ ವಿವಿಧ ಹಳ್ಳಿ ಪ್ರದೇಶಗಳಲ್ಲಿ ಕಾರ್ಯ ಕ್ರಮಗಳನ್ನು ಏರ್ಪಡಿಸುವ ಮಾಹಿತಿ ಯನ್ನು ನೀಡಿ, ರಂಗಚಿನ್ನಾರಿಯ ಚಟು ವಟಿಕೆಗಳನ್ನು ಹೇಳಿದರು. ಗೋವಿಂದ ಪೈ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ| ಕಮಲಾಕ್ಷ ಕಾರ್ಯಕ್ರಮ ನಿರೂಪಿಸಿದರು. ಶ್ರೀಮದ್‌ ಅನಂತೇಶ್ವರ ದೇವಸ್ಥಾನದ ವತಿಯಿಂದ ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು. ಮಂಜೇಶ್ವರ ಗೋವಿಂದ ಪೈ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶಿವಶಂಕರ ಪಿ. ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.