ನಾಳೆ ಸುಜಾತಾ ಗುರವ್‌ ಕಮ್ಮಾರ, ರಾಜೇಶ್‌ ಪಡಿಯಾರ್‌ ಸ್ವರಮಾಧುರ್ಯ


Team Udayavani, Mar 30, 2018, 9:40 AM IST

Padiyar-29-3.jpg

ಕಾಸರಗೋಡು: ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾಗಿರುವ ರಂಗಚಿನ್ನಾರಿ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ ಖ್ಯಾತ ಹಿಂದೂಸ್ಥಾನಿ ಗಾಯಕಿ ಸುಜಾತಾ ಗುರವ್‌ ಕಮ್ಮಾರ ಮತ್ತು ಖ್ಯಾತ ಸುಗಮ – ಭಕ್ತಿ ಸಂಗೀತ ಗಾಯಕ ರಾಜೇಶ್‌ ಪಡಿಯಾರ್‌ ಅವರಿಂದ ಭಕ್ತಿ – ಭಾವ – ವಚನ ಗಾಯನ “ನಾಮವೊಂದೇ ಸಾಲದೇ…’ ಕಾರ್ಯಕ್ರಮ ಮಾ. 31ರಂದು ಶನಿವಾರ ಸಂಜೆ 5.30ರಿಂದ ಕರಂದಕ್ಕಾಡಿನ ಪದ್ಮಗಿರಿ ಕುಟೀರದಲ್ಲಿ ನಡೆಯಲಿದೆ.

ಸುಜಾತಾ ಗುರವ್‌ ಕಮ್ಮಾರ 
1973 ನವಂಬರ್‌ 19ರಂದು ಸಂಗೀತ ಮನೆತನದಲ್ಲಿ ಜನಿಸಿದ ಸುಜಾತಾ ಗುರವ್‌ ಕಮ್ಮಾರ ಅವರು ಹಿಂದೂಸ್ತಾನಿ ಸಂಗೀತ ಹಾಗೂ ಸುಗಮ ಸಂಗೀತದಲ್ಲಿ ಖ್ಯಾತಿಗಳಿಸಿದ್ದಾರೆ. ಸಂಗೀತದಲ್ಲಿ ಅದಮ್ಯ ಅಭಿರುಚಿ ಮೈಗೂಡಿಸಿಕೊಂಡ ಸುಜಾತಾ ಅವರು ತಮ್ಮ ತಂದೆ ಹಾಗೂ ಗುರುಗಳಾದ ಖ್ಯಾತ ಹಿಂದುಸ್ಥಾನಿ ಗಾಯಕರಾದ ಪಂಡಿತ್‌ ಸಂಗಮೇಶ್ವರ ಗುರುವ ಅವರ ಮಾರ್ಗದರ್ಶನದಲ್ಲಿ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ ಹಾಗೂ ಸುಗಮ ಸಂಗೀತವನ್ನು ಖ್ಯಾತ ಹಾರ್ಮೋನಿಯಂ ವಾದಕರಾದ ಪಂಡಿತ ವಸಂತ ಕನಕಾಪೂರ ಅವರಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

ತಂದೆಯ ಮಾರ್ಗದರ್ಶನದಲ್ಲಿ ಸಂಗೀತದ ಜ್ಞಾನಾರ್ಜನೆ ಮಾಡಿ ತಮ್ಮ ಗಾಯನದಲ್ಲಿ ಅಳವಡಿಸಿಕೊಂಡಿದ್ದಾರೆ. ಕನ್ನಡ, ಹಿಂದಿ, ಮರಾಠಿ ಭಾಷೆಯಲ್ಲಿ ಸುಗಮ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದೂ ಅಲ್ಲದೇ ವಚನ, ದಾಸರ ಪದ, ಜಾನಪದ, ಕನ್ನಡ ರಂಗಗೀತೆಗಳನ್ನು ಮತ್ತು ಠುಮಲ ಝಲಾಗಳನ್ನು ಸುಶ್ರಾವ್ಯವಾಗಿ ಹಾಡಿ ಶ್ರೋತೃಗಳ ಮನಸೂರೆಗೊಂಡಿದ್ದಾರೆ.

ಪ್ರಸಕ್ತ ಧಾರವಾಡ ಆಕಾಶವಾಣಿ ಹಾಗೂ ದೂರದರ್ಶನ ಕೇಂದ್ರದ ಕಲಾವಿದರಾಗಿರುವ ಅವರು ಸಂಗೀತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸುಮಧುರ ಗಾಯಕಿಯಾಗಿರುವ ಇವರು ಖ್ಯಾತ ರಾಗ ಸಂಯೋಜಕರಾಗಿದ್ದಾರೆ. ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಮೂಡಿಬಂದ ‘ನಮನ’ ಕಾರ್ಯಕ್ರಮದ ಅತಿಥಿಯಾಗಿ ನಾಡಿಗೆ ಚಿರಪರಿಚಿತರು. ಖಾಸಗಿ ದೂರದರ್ಶನ ಚಾನೆಲ್‌ಗ‌ಳಾದ ಉದಯ ಹಾಗೂ ಸುವರ್ಣ ನ್ಯೂಸ್‌ ವಾಹಿನಿಯಲ್ಲಿ ಸುಗಮ ಸಂಗೀತ, ರಾಷ್ಟ್ರೀಯ ಉತ್ಸವಗಳಾದ ಮೈಸೂರು ದಸರಾ, ಹಂಪಿ ಉತ್ಸವ, ಗಡಿನಾಡು ಉತ್ಸವ, ಆಳ್ವಾಸ್‌ ನುಡಿಸಿರಿ ಉತ್ಸವ, ಕದಂಬೋತ್ಸವ, ಧಾರವಾಡ ಉತ್ಸವ ಹೀಗೆ ಅನೇಕ ವೇದಿಕೆಗಳಲ್ಲಿ ರಾಜ್ಯದಾದ್ಯಂತ ಕಾರ್ಯಕ್ರಮ ನೀಡಿದ್ದಾರೆ. ತಿರುಪತಿ ಹಾಗೂ ಮಂತ್ರಾಲಯದಲ್ಲಿ ದಾಸವಾಣಿ ಕಾರ್ಯಕ್ರಮ ನೀಡಿದ್ದಾರೆ. ಬೆಂಗಳೂರಿನ ಅಶ್ವಿ‌ನಿ ರಿಕಾರ್ಡಿಂಗ್‌ ಕಂಪೆನಿಯವರು ‘ವಚನ ಸುಧೆ’ ಎಂಬ ವಚನಗಳ ಧ್ವನಿ ಸುರಳಿಯನ್ನು ಬಿಡುಗಡೆ ಮಾಡಿದ್ದಾರೆ.

1991ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಸಭೆಯ ‘ಜನಪದ ಗೀತೆಯಲ್ಲಿ’ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಅವರು 1992ರ ನಾಡ ಹಬ್ಬದ ಕಾರ್ಯಕ್ರಮದಲ್ಲಿ ಶ್ರೇಷ್ಠ ಗಾಯಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಹುಬ್ಬಳ್ಳಿಯ ರಾಧಾಕೃಷ್ಣ ಅಕಾಡೆಮಿ ವತಿಯಿಂದ “ದಶಕದ ಸಾಧಕರು’ ಪ್ರಶಸ್ತಿ, ಸೌತ್‌ ಸೆಂಟ್ರಲ್‌ ಜೋನ್‌ ಕಲ್ಚರಲ್‌ ಸೆಂಟರ್‌ ನಾಗಪುರ ಇವರಿಂದ ಟಪ್ಪಾ-ಟುಮಲ ಪ್ರಶಸ್ತಿ ಪಡೆದಿದ್ದಾರೆ. 2004ರ ಎಪ್ರಿಲ್‌ 4ರಂದು ಗದುಗಿನ ಪುಟ್ಟರಾಜ ಗವಾಯಿಗಳ ಹುಟ್ಟು ಹಬ್ಬದ ಸಮ್ಮೇಳನದಲ್ಲಿ  “ಸಂಗೀತ ವಿಕಾಸ ರತ್ನ’ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ರೋಟರಿ ಕ್ಲಬ್‌ ಧಾವರಾಡ ಇವರಿಂದ ವೊಕೇಶನಲ್‌ ಎಕ್ಸಲೆನ್ಸ್‌ ಅವಾರ್ಡ್‌ ಪಡೆದಿದ್ದಾರೆ.

ರಾಜೇಶ್‌ ಪಡಿಯಾರ್‌
18 ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಮೈಸೂರಿನ ರಾಜೇಶ್‌ ಪಡಿಯಾರ್‌ ಹಿಂದೂಸ್ಥಾನಿ ಶಾಸ್ತ್ರೀಯ, ಭಜನ್ಸ್‌, ಭಕ್ತಿಗೀತೆ, ಜಾನಪದ ಗೀತೆ ಮತ್ತು ಸುಗಮ ಸಂಗೀತದಲ್ಲಿ ಖ್ಯಾತರಾಗಿದ್ದಾರೆ. ರಿಥಂ ಪ್ಯಾಡ್‌ ಮತ್ತು ತಬ್ಲಾದಲ್ಲೂ ವಿಶೇಷ ಸಾಧನೆ ಮಾಡಿರುವ ಅವರು ಚಿಕ್ಕಂದಿನಿಂದಲೇ ಸಂಗೀತದಲ್ಲಿ ಆಸಕ್ತಿ ವಹಿಸಿದ್ದರು. ಕನ್ನಡ, ಹಿಂದಿ, ಕೊಂಕಣಿ ಮತ್ತು ಮರಾಠಿ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಬಲ್ಲರು. 2011 ರಲ್ಲಿ ಮಂತ್ರಾಲಯ ಸುಶಮೀಂದ್ರ ಕಲಾ ಪುರಸ್ಕಾರ್‌ ಪಡೆದಿದ್ದಾರೆ.

ಮದ್ರಾಸ್‌ನಲ್ಲಿ ಭಜನ್‌ ಉತ್ಸವ್‌, ಪುನಾದಲ್ಲಿ ದತ್ತ ಜಯಂತಿ, 2009 ರಲ್ಲಿ ಮಂತ್ರಾಲಯದಲ್ಲಿ ರಾಘವೇಂದ್ರ ಆರಾಧನಾ, 2008 ಮತ್ತು 2009ರಲ್ಲಿ ಮೈಸೂರು ದಸರಾ ಉತ್ಸವ, ಮುಂಬ ಯಿಯ ಕಾಶೀಮಠ ಮೊದಲಾದೆಡೆ ಸಂಗೀತ ಕಾರ್ಯಕ್ರಮ ನೀಡಿರುವ ಅವರು ದೂರದರ್ಶನ, ಇ-ಟಿವಿ. ಸುವರ್ಣ, ಉದಯ, ಜನಶ್ರೀ ಮೊದ ಲಾದ ವಾಹಿನಿಗಳಲ್ಲಿ ಸುಗಮ ಸಂಗೀತ ಮತ್ತು ದಾಸವಾಣಿ ಕಾರ್ಯಕ್ರಮ ನೀಡಿದ್ದಾರೆ. ದಿ| ಅಶ್ವತ್ಥ್, ಪುತ್ತೂರು ನರಸಿಂಹ ನಾಯಕ್‌, ಸಂಗೀತಾ ಕಟ್ಟಿ ಮೊದಲಾದವರ ಜತೆ ಕಳೆದ 15 ವರ್ಷಗಳಿಂದ ಆಲ್ಲದೆ, ಆಲ್‌ ಇಂಡಿಯಾ ರೇಡಿಯೋದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.