ನಾರಾಯಣ ದೇಲಂಪಾಡಿ ಕೇರಳ ರಾಜ್ಯ ಶ್ರೇಷ್ಠ ಶಿಕ್ಷಕ
Team Udayavani, Sep 6, 2021, 12:21 AM IST
ಕಾಸರಗೋಡು: ಕೇರಳ ಸರಕಾರವು ನೀಡುವ 2021 – 22ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕನ್ನಡಿಗರಾದ ನಾರಾಯಣ ದೇಲಂಪಾಡಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಎಸ್ಎಸ್ಕೆ ಕಾಸರಗೋಡು ಜಿಲ್ಲಾ ಪ್ರೋಗ್ರಾಂ ಆಫೀಸರ್ ಆಗಿರುವ ನಾರಾಯಣ ಅವರು ಕ್ರಿಯಾಶೀಲ ವ್ಯಕ್ತಿತ್ವ ಮತ್ತು ಬಹುಮುಖೀ ಪ್ರತಿಭಾ ವಂತರು. 2001ರಲ್ಲಿ ಕೇರಳ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ನೊಂದಿಗೆ ತೇರ್ಗಡೆ
ಯಾಗಿ ಪ್ರೌಢ ಶಾಲಾ ಶಿಕ್ಷಕರಾಗಿ ತಾನು ಕಲಿತ ಜಿಎಚ್ಎಸ್ ದೇಲಂಪಾಡಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದರು. ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ ಧನಾತ್ಮಕ ಬದಲಾವಣೆಗಳನ್ನು ತರುವ ಮೂಲಕ ಸರ್ವರ ಮೆಚ್ಚುಗೆಗೆ ಪಾತ್ರರಾದರು. 2005ರಲ್ಲಿ ಐಟಿ ಅಟ್ ಸ್ಕೂಲ್ನಲ್ಲಿ ಮಾಸ್ಟರ್ ಟ್ರೈನರ್ ಆಗಿ ಆಯ್ಕೆಯಾದರು. ಈ ಮೂಲಕ ಸುಮಾರು 2,000ಕ್ಕಿಂತಲೂ ಅಧಿಕ ಶಿಕ್ಷಕರಿಗೆ ರಾಜ್ಯ, ತಾಲೂಕು ಮಟ್ಟದಲ್ಲಿ ತರಬೇತಿ ನೀಡಿದ್ದಾರೆ.
2014ರಲ್ಲಿ ಕಾಸರಗೋಡು ಮಾಯಿಪ್ಪಾಡಿ ಡಯಟ್ಗೆ ಅಧ್ಯಾಪಕ ತರಬೇತುದಾರರಾಗಿ ಸೇರಿದ ಅವರು ಮೂಲಭೂತ ವಿದ್ಯಾಭ್ಯಾಸ, ಮನಃಶಾಸ್ತ್ರ, ಸಮಾಜ ವಿಜ್ಞಾನ ಮತ್ತು ಕನ್ನಡ ಭಾಷೆಯನ್ನು ಕಲಿಸುವುದರೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಅಧ್ಯಾಪಕ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಲ್ಲರ ನೆಚ್ಚಿನ ಅಧ್ಯಾಪಕರೆನ್ನಿಸಿಕೊಂಡರು.
ಯಕ್ಷಗಾನ ಪ್ರಿಯರಾಗಿರುವ ನಾರಾಯಣ ಅವರು ಆ ಕಲೆಯ ಒಲವನ್ನು ತಮ್ಮ ಅಧ್ಯಾಪಕ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮೂಲಕ ಪಸರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ