ನಾರಾಯಣಮಂಗಲ: ಮದ್ಯದಂಗಡಿ ವಿರೋಧಿ ಹೋರಾಟಕ್ಕೆ ವಿಹಿಂಪ ಬೆಂಬಲ
Team Udayavani, Apr 28, 2017, 2:03 PM IST
ಕುಂಬಳೆ: ಕುಂಬಳೆ ಸಮೀಪದ ನಾರಾಯಣಮಂಗಲದಲ್ಲಿ ನಡೆಯುತ್ತಿರುವ ಮದ್ಯದಂಗಡಿ ವಿರೋಧಿ ಹೋರಾಟದಂಗವಾಗಿ ವಿಶ್ವ ಹಿಂದೂ ಪರಿಷತ್ನ ಮಂಗಳೂರು ಗ್ರಾಮಾಂತರ ಕಾಸರಗೋಡು ಜಿಲ್ಲಾ ಪದಾಧಿಕಾರಿಗಳು ಭೇಟಿ ನೀಡಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಹಿಂಪ ಜಿಲ್ಲಾಧ್ಯಕ್ಷ ಅಂಗಾರ ಶ್ರೀಪಾದ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಳುವಾನ ಶಂಕರ ಭಟ್ ಮಾತನಾಡಿ, ಆರೋಗ್ಯವಂತ ಸಮಾಜವಿರುವಲ್ಲಿ ಮದ್ಯದಂತಹ ಅಮಲು ದ್ರವ್ಯಗಳನ್ನು ಮಾರಾಟ ಮಾಡಲು ಹೊರಟರೆ ಇಡೀ ಸಮಾಜವೇ ಕಲುಷಿತಗೊಳ್ಳಲಿದೆ. ಈ ನಿಟ್ಟಿನಲ್ಲಿ ಕೇರಳ ರಾಜ್ಯ ಸರಕಾರವೇ ಇನ್ನಾದರೂ ಮಧ್ಯ ಪ್ರವೇಶಿಸಿ ಸಾರ್ವಜನಿಕರ ಹೋರಾಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ ಈ ನಿಟ್ಟಿನಲ್ಲಿ ಅಧಿಕಾರಿಗಳು, ಸಚಿವರು ಮತ್ತು ಶಾಸಕರ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಲಾಯಿತು. ವಿಹಿಂಪ ಜಿಲ್ಲಾ ಸತ್ಸಂಗ ಪ್ರಮುಖ್, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ಜಿಲ್ಲಾ ಗೋರûಾ ಪ್ರಮುಖ್ ಗೋಪಾಲ ಶೆಟ್ಟಿ ಅರಿಬೈಲು ನೆತ್ಯ ಮುಂತಾದವರು ಭಾಗವಹಿಸಿದ್ದರು. ಮಾತ್ರವಲ್ಲದೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಮಾತƒ ಮಂಡಳಿ, ದುರ್ಗಾವಾಹಿನಿ ಕೂಡ ಹೋರಾಟಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿವೆ.
ಈ ಸಂದರ್ಭದಲ್ಲಿ ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯ ಸತ್ಯಶಂಕರ ಭಟ್ ಹಿಳ್ಳೆಮನೆ, ಕುಂಬಳೆ ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಲತಾ ಎನ್., ಕೇಶವಪ್ರಸಾದ್ ನಾಣಿತ್ತಿಲು ಸಹಿತ ಅಪಾರ ಸಂಖ್ಯೆಯ ಪ್ರತಿಭಟನಾ ನಿರತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ