ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಕೇರಳಕ್ಕೆ ಹಿನ್ನಡೆ


Team Udayavani, Apr 12, 2018, 9:20 AM IST

Highway-600.jpg

ಕಾಸರಗೋಡು: ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಮತ್ತು ಮಹತ್ವಾಕಾಂಕ್ಷೆಯ ದೃಷ್ಟಿಕೋನದೊಂದಿಗೆ ಎಲ್ಲಾ ರಾಜ್ಯಗಳ ರಾಷ್ಟ್ರೀಯ ಹೆದ್ದಾರಿಗಳು ಷಟ್ಪಥವಾಗಿ ಅಭಿವೃದ್ಧಿ ಹೊಂದುತ್ತಿರುವಂತೆಯೇ ಕೇರಳ ರಾಜ್ಯ ಮಾತ್ರ ಈ ವಿಷಯದಲ್ಲಿ ಹಿಂದಕ್ಕೆ ಸಾಗುತ್ತಿರುವುದು ನೋವಿನ ಹಾಗೂ ವಿಷಾದನೀಯ ಸಂಗತಿಯಾಗಿದೆ. ಇತರ ರಾಜ್ಯಗಳಿಗಿಂತ ಭಿನ್ನವಾಗಿ ಕೇರಳವು ಅತಿ ಹೆಚ್ಚು  ಜನಸಾಂದ್ರತೆ ಇರುವ ರಾಜ್ಯವಾಗಿರುವ ಹಿನ್ನೆಲೆಯಲ್ಲಿ  ರಾಜ್ಯ ಸರಕಾರದ ಮನವಿಯಂತೆ ಕೇರಳದ ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥದ ಬದಲು ಚತುಷ್ಪಥವಾಗಿ ಅಭಿವೃದ್ಧಿಗೊಳಿಸಲು ಕೇಂದ್ರ ಭೂ ಸಾರಿಗೆ ಇಲಾಖೆಯು ಸಂಪೂರ್ಣ ಒಪ್ಪಿಗೆ ನೀಡಿತ್ತು. ಆದರೆ ಇದೇ ವೇಳೆ ಯೋಜನೆಯ ನಿಮಿತ್ತ  ಅಗತ್ಯದ ಭೂಸ್ವಾಧೀನ ಕ್ರಮ ಆರಂಭಿಸಿದಾಗ ಅದನ್ನು  ಪ್ರತಿಭಟಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಜನರು ಹೋರಾಟ ಆರಂಭಿಸಿದ್ದು, ಅದು ಭೂಸ್ವಾಧೀನ ಪ್ರಕ್ರಿಯೆಗೆ ಅಡ್ಡಿಯಾಗಿ ಪರಿಣಮಿಸಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೊಂಡಲ್ಲಿ ಅದು ಕೇರಳದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ. ಆದರೆ ಅದಕ್ಕೆ ಅಡ್ಡಿಪಡಿಸಿದರೆ ಕೇರಳವು ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸಲಿದೆ. ಈ ಮಧ್ಯೆ ಅಗತ್ಯದ ಸ್ಥಳ ನೀಡಿದರೆ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿಗೆ ಎಷ್ಟು  ಬೇಕಾದರೂ ಅನುದಾನ ನೀಡಲು ಸಿದ್ಧವೆಂದು ಕೇಂದ್ರ ಭೂ ಸಾರಿಗೆ ಇಲಾಖೆ ಸಚಿವ ನಿತಿನ್‌ ಗಡ್ಕರಿ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಈಗಾಗಲೇ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಯವರು ಅದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಭೂಸ್ವಾಧೀನ ವಿರುದ್ಧ ಹಲವೆಡೆಗಳಲ್ಲಿ ನಡೆಯುತ್ತಿರುವ ಹೋರಾಟಗಳು ರಾಜ್ಯ ಸರಕಾರದ ಎಲ್ಲ ಪ್ರಯತ್ನಗಳನ್ನೂ ವಿಫಲಗೊಳ್ಳುವಂತೆ ಮಾಡುತ್ತಿವೆ.

ಕಾಸರಗೋಡು ಜಿಲ್ಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಚುರುಕು ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಾತ್ರವೇ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಅಗತ್ಯದ ಭೂಸ್ವಾಧೀನ ಕ್ರಮ ಭರದಿಂದ ಸಾಗುತ್ತಿದೆ. ಜಿಲ್ಲೆಯ ತಲಪಾಡಿಯಿಂದ ಕಾಲಿಕ್ಕಡವು ತನಕದ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ಹಂತದ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಮಂಜೇಶ್ವರ, ಉಪ್ಪಳ, ಕುಂಬಳೆ, ಕಾಸರಗೋಡು, ಕಾಂಞಂಗಾಡು, ನೀಲೇಶ್ವರ ಸೇರಿದಂತೆ ಎಲ್ಲ ಪ್ರದೇಶಗಳಲ್ಲೂ ಅಗತ್ಯದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕೆಲವು ಕಡೆಗಳಲ್ಲಿ  ಮೇಲ್ಸೇತುವೆ (ಓವರ್‌ ಬ್ರಿಡ್ಜ್ ) ಸೇರಿದಂತೆ ಇನ್ನಿತರ ಯೋಜನೆಗಳ ಬಗ್ಗೆಯೂ ಅಂತಿಮ ಚರ್ಚೆ ಮುಂದುವರಿದಿದೆ. ಇದೇ ವೇಳೆ ಹೋರಾಟದ ಹಿನ್ನೆಲೆಯಲ್ಲಿ ಉಳಿದ ಜಿಲ್ಲೆಗಳಲ್ಲಿ  ಪ್ರಕ್ರಿಯೆ ಇನ್ನೂ ಆರಂಭಗೊಳ್ಳದಿರುವುದು ದುರದೃಷ್ಟಕರ. ಇದು ರಾಜ್ಯದ ಒಟ್ಟು ಅಭಿವೃದ್ಧಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲು ದಾರಿ ಮಾಡಿಕೊಡಲಿದೆ.

ಅಭಿವೃದ್ಧಿಗೆ ಜನರದ್ದೇ ಅಸಹಕಾರ
ಕಾಸರಗೋಡಿನಿಂದ ಆರಂಭಗೊಂಡು ತಿರುವನಂತಪುರದ ವರೆಗೆ 590 ಕಿಲೋ ಮೀಟರ್‌ ರಾಷ್ಟ್ರೀಯ ಹೆದ್ದಾರಿಯನ್ನು  ಚತುಷ್ಪಥವಾಗಿ ಅಭಿವೃದ್ಧಿಗೊಳಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 26,000 ಕೋಟಿ ರೂ.ಗಳನ್ನು  ಒದಗಿಸಲು ಮುಂದಾಗಿದೆ. ಆದರೆ ಈ ಪೈಕಿ ಕೇವಲ 120 ಕಿಲೋ ಮೀಟರ್‌ ಭೂಮಿ ಸ್ವಾಧೀನಪಡಿಸುವ ಟೆಂಡರ್‌ ಕ್ರಮ ಮಾತ್ರವೇ ಪೂರ್ತಿಯಾಗಿದೆ. ಬಾಕಿ ಉಳಿದಿರುವ ಭೂಸ್ವಾಧೀನಕ್ಕೆ ಸರ್ವೇ ಆರಂಭಿಸಿದಾಗ ಅದನ್ನು ಹಲವೆಡೆಗಳಲ್ಲಿ  ಸ್ಥಳೀಯರು ತಡೆದ ಹಿನ್ನೆಲೆಯಲ್ಲಿ  ಅದು ಘರ್ಷಣೆಗೂ ದಾರಿ ಮಾಡಿಕೊಟ್ಟಿದೆ. ಇಂತಹ ಬೆಳವಣಿಗೆಗಳು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ತಡೆಯಾಗಿ ಪರಿಣಮಿಸಿದೆ. ಮಾತ್ರವಲ್ಲದೆ ಕೇರಳದ ಇತರ ಗ್ರಾಮೀಣ ಪ್ರದೇಶಗಳ ಪ್ರಗತಿಗೂ ಇದು ಮಾರಕವಾಗಿದ್ದು, ಆಧುನಿಕ ವ್ಯವಸ್ಥೆ ರಾಜ್ಯಕ್ಕೆ ನಷ್ಟವಾಗಲಿದೆ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.