ಜಿಲ್ಲೆಯಲ್ಲೂ ಸಂಚಾರ ಆರಂಭಿಸಿದ ಪ್ರಕೃತಿ ಸ್ನೇಹಿ ಇ-ಆಟೋಗಳು

ಮಾಲಿನ್ಯ ತಡೆಗೆ ಸಹಕಾರಿ

Team Udayavani, Nov 14, 2019, 4:00 AM IST

vv-1

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಂದ ಇ-ಆಟೋ ವೀಕ್ಷಣೆ.

ಕಾಸರಗೋಡು: ರಾಜ್ಯದಲ್ಲಿ ಈಗಾಗಲೇ ಕಡಿಮೆ ದರದಲ್ಲಿ ಸಂಚಾರ ಸೇವೆ ಒದಗಿಸುವ ಇ-ಆಟೋ ಜಿಲ್ಲೆಯಲ್ಲೂ ತನ್ನ ಸಂಚಾರಿ ಸೌಲಭ್ಯ ಆರಂಭಿಸಿದೆ. ಜಿಲ್ಲೆಯಲ್ಲಿ ಇ-ಆಟೋದ ಸೇವೆ ಪ್ರಾರಂಭ ವಾಗಿದೆ. 55 ನಿಮಿಷಗಳಲ್ಲಿ ಬ್ಯಾಟರಿಯನ್ನು ಪೂರ್ಣಪ್ರಮಾದಲ್ಲಿ ರೀಚಾರ್ಜ್‌ ನಡೆಸ ಬಹುದಾದ, ಒಮ್ಮೆ ಚಾರ್ಜ್‌ ನಡೆಸಿದರೆ 100 ಕಿ.ಮೀ. ನಿರಾಳವಾಗಿ ಸಂಚಾರ ನಡೆಸಬಹುದು. ಒಂದು ಕಿ.ಮೀ. ಗೆ ಕೇವಲ 50 ಪೈಸೆ ವೆಚ್ಚ ತಗುಲುವುದು. ಪೆಟ್ರೋಲ್‌, ಡೀಸೆಲ್‌ ಇಂಧನ ಬಳಸಿ ಸಂಚಾರ ನಡೆಸುವ ವಾಹನಗಳಿಂದುಂಟಾಗುವ ಪರಿಸರ ಮಾಲಿನ್ಯದ ಭೀತಿಯಿಲ್ಲ ಇತ್ಯಾದಿಗಳು ಗಮನಾರ್ಹವಾಗಿದ್ದು, ಇ-ಆಟೋವನ್ನು ಜನಜನಿತಗೊಳಿಸಲಾಗುತ್ತಿದೆ.

ಅತಿ ವೇಗದಲ್ಲಿ ಬೆಳೆಯುತ್ತಿರುವ ಜಿಲ್ಲೆಯ ಎಲ್ಲ ಪೇಟೆಗಳಿಗೆ ಇ-ಆಟೋಗಳು ಅನುಯೋಜ್ಯ ವಾಗಿವೆ. ಶೀಘ್ರದಲ್ಲೇ ಈ ಕಡೆಗಳಲ್ಲಿ ಇ-ಆಟೋಗಳು ಆಗಮಿಸಿ, ಸಂಚಾರ ನಡೆಸಲಿವೆ. ಪ್ರತಿದಿನ ಇಂಧನ ಬಳಸುವ ವಾಹನಗಳು ನೀಡುವ ಪರಿಸರ ಮಾಲಿನ್ಯದ ಅಡ್ಡಪರಿಣಾಮದ ಪರಿಹಾರಕ್ಕೆ ಶಾಶ್ವತ ಪರಿಹಾರ ಎಂಬಂತೆ ಪ್ರಕೃತಿ ಸ್ನೇಹಿ ವಾಹನವಾಗಿರುವ ಇ-ಆಟೋವನ್ನು ಎಲ್ಲರೂ ಎರಡೂ ಕೈಗಳಿಂದ ಸ್ವಾಗತಿಸುತ್ತಿದ್ದಾರೆ.

ಪ್ರಕೃತಿ ಸ್ನೇಹಿ ವಾಹನ
ರಾಜ್ಯ ಸರಕಾರದ ಇ-ವಾಹನ ನೀತಿಯ ಹಿನ್ನೆಲೆಯಲ್ಲಿ ಇ-ಆಟೋದ ನಿರ್ಮಾಣ ನಡೆದಿದೆ. ರಾಜ್ಯ ಸಾರ್ವಜನಿಕ ಸಂಸ್ಥೆ ಕೇರಳ ಅಟೋಮೊಬೈಲ್ಸ್‌ ನಿಗಮ (ಕೆ.ಎ.ಎಲ್‌.)ಇ-ಆಟೋವನ್ನು ನಿರ್ಮಿಸುತ್ತಿದೆ. ದೇಶದಲ್ಲೇ ಪ್ರಥಮ ಬಾರಿಗೆ ಸಾರ್ವಜನಿಕ ಸಂಸ್ಥೆಯೊಂದು ಇ-ಆಟೋದಂತಹ ವಾಹನ ನಿರ್ಮಾಣಕ್ಕೆ ಪರವಾನಗಿ ಪಡೆದಿದೆ ಎಂಬುದೂ ಗಮನಾರ್ಹ ವಿಚಾರ. ಈ ವಾಹನದ ಎಲ್ಲ ಬಿಡಿ ಭಾಗಗಳೂ ದೇಶದಲ್ಲೇ ನಿರ್ಮಾಣಗೊಳ್ಳುತ್ತಿವೆ. ನೇರನೋಟಕ್ಕೆ ಇತರ ಆಟೋರಿಕ್ಷಾಗಳಂತೆಯೇ ಕಾಣುವ ರೀತಿ ಇ-ಆಟೋಗಳನ್ನು ತಯಾರಿಸಲಾಗಿದೆ. ಶಬ್ದ ಕಡಿಮೆ ಮತ್ತು ಸುರಕ್ಷಿತ ಚಾಲನೆಯ ವ್ಯವಸ್ಥೆಯೂ ಈ ವಾಹನದ ವಿಶೇಷವಾಗಿದೆ. ಚಾಲಕನಲ್ಲದೆ, ಏಕಕಾಲಕ್ಕೆ ಮೂವರು ಪ್ರಯಾಣಿಕರು ಸಂಚರಿಸಬಹುದಾಗಿದೆ.

ಈ ವಾಹನದ ಬೆಲೆ 2.8 ಲಕ್ಷ ರೂ.ಇದೆ. ಆರಂಭದಲ್ಲಿ ನೀಂ ಜೀಂ ಆಟೋಗಳು ಕೆ.ಎ.ಎಲ್‌. ಸಂಸ್ಥೆಯ ಮೂಲಕ ನೇರವಾಗಿ ಮಾರಾಟಗೊಳ್ಳುತ್ತವೆ. ಮುಂದಿನ ಹಂತ ದಲ್ಲಿ ಉಳಿದ ಜಿಲ್ಲೆಗಳಲ್ಲಿ ಡೀಲರ್‌ ಶಿಪ್‌ ನೀಡಲಾಗುವುದು. ಇ-ಆಟೋಗೆ ರಾಜ್ಯ ಸರಕಾರದ ಸಬ್ಸಿಡಿ ಸೌಲಭ್ಯ ಲಭ್ಯ ವಾದರೆ ಬೆಲೆ ಯಲ್ಲಿ 30 ಸಾವಿರ ರೂ. ಕಡಿಮೆಯಾಗಲಿದೆ.

ಇ-ಆಟೋವನ್ನು ಬೆಂಬಲಿಸಿ : ಜಿಲ್ಲಾಧಿಕಾರಿ
ಇ-ಆಟೋವನ್ನು ನಾವೆಲ್ಲರೂ ಬೆಂಬಲಿಸ ಬೇಕು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಆಗ್ರಹಿಸಿದ್ದಾರೆ. ವಿದ್ಯುನ್ಮಾನ ವಾಹನಗಳ ಬಗ್ಗೆ ನಾವು ತೋರುವ ಆಸಕ್ತಿಯ ಬಲುದೊಡ್ಡ ಹೆಜ್ಜೆಗಾರಿಕೆ ಇ-ಆಟೋಗಳಾಗಿವೆ. ಜಿಲ್ಲೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚುತ್ತಿರುವಂತೆಯೇ ಪರಿಸರ ಮಾಲಿನ್ಯವೂ ನಿಯಂತ್ರಣಾತೀತವಾಗಿ ವರ್ಧಿಸುತ್ತಿದೆ. ಸೌರಶಕ್ತಿ ಮೂಲಕದ ವಿದ್ಯುತ್‌ ಬಳಕೆಗೆ ಆದ್ಯತೆ ನೀಡುತ್ತಿರುವ ನಮ್ಮ ಮಟ್ಟಿಗೆ ಇ-ಆಟೋ ಮಹತ್ವ ಪಡೆಯುತ್ತದೆ. ಹೆಚ್ಚುವರಿ ಆಟೋಚಾಲಕರು ಇ-ಆಟೋಗಳ ಕಡೆಗೆ ವರ್ಗಾವಣೆ ಗೊಳ್ಳಬೇಕು ಎಂದವರು ಆಗ್ರಹಿಸಿದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.