ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಆಯ್ಕೆ: ಎಡನೀರು ಶ್ರೀ ಸಂತಸ
Team Udayavani, Jul 28, 2021, 9:52 AM IST
ಕಾಸರಗೋಡು: ಬಸವರಾಜ ಬೊಮ್ಮಾಯಿಯವರು ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುತ್ತಿರುವುದು ಸಂತೋಷದ ವಿಷಯ ಎಂದು ಎಡನೀರು ಶ್ರೀ ತಿಳಿಸಿದ್ದಾರೆ.
ಗಡಿನಾಡು ಕಾಸರಗೋಡಿನ ಜನರ ಮೇಲೂ ಅಪಾರವಾದ ಪ್ತೀತಿ ಹಾಗೂ ಗೌರವ ಭಾವವನ್ನು ಹೊಂದಿದ್ದ ಅವರು ಕರ್ನಾಟಕ ಗೃಹ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕೇರಳದ ಶಂಕರ ಪರಂಪರೆಯ ಏಕೈಕ ಮಠವಾದ ಶ್ರೀ ಎಡನೀರು ಮಠಕ್ಕೆ ಭೇಟಿಯಿತ್ತಿದ್ದರು ಎಂಬುದನ್ನು ಶ್ರೀಮದ್ಜಗದ್ಗರು ಶಂಕರಾಚಾರ್ಯರ ತೋಟಕಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ನೆನಪಿಸಿಕೊಂಡರು. ಮಾತ್ರವಲ್ಲದೆ ನಿಷ್ಠಾವಂತ ರಾಜಕಾರಣಿ ಮುಖ್ಯಮಂತ್ರಿ ಸ್ಥಾನ ಪಡೆದುದಕ್ಕೆ ಸಂತಸ ವ್ಯಕ್ತಪಡಿಸಿದರು.
ಗೃಹ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಇತ್ತೀಚೆಗೆ ಬೊಮ್ಮಾಯಿಯವರು ಮಠ ಸಂದರ್ಶಿಸಿ ಆಶೀರ್ವಾದ ಪಡೆದುಕೊಂಡಿದ್ದರು. ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಅವರಿಗೆ ಶಾಲು ಹೊದಿಸಿ ಗೌರವಿಸಿ ಮುಂದಿನ ಬಾರಿ ಶ್ರೀ ಮಠಕ್ಕೆ ಬರುವಾಗ ಇನ್ನೂ ಉನ್ನತ ಹುದ್ದೆ, ಸ್ಥಾನ ಮಾನ ಹೊಂದುವಂತೆ ಆರಾಧ್ಯ ದೇವರಾದ ಶ್ರೀ ದಕ್ಷಿಣಾಮೂರ್ತಿ ಗೋಪಾಲಕೃಷ್ಣ ಸ್ವಾಮಿಯು ಅನುಗ್ರಹಿಸಲಿ ಎಂದು ಮಂತ್ರಾಕ್ಷತೆಯನ್ನಿತ್ತು ಅನುಗ್ರಹಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ
ಶ್ರೀ ಮಠಕ್ಕೆ ಭೇಟಿ ನೀಡಿದ ಆನಂದವನ್ನು ಬಸವರಾಜ ಬೊಮ್ಮಾಯಿಯವರು ಅಂದು ಜಾಲತಾಣದಲ್ಲೂ ಹಂಚಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ