ಮರೆಯಾದ ಮಳೆ. ಬತ್ತಿದ ಭತ್ತದ ಬಯಲು. ಕಂಗಾಲಾದ ಕೃಷಿಕರು


Team Udayavani, Jul 4, 2019, 4:16 PM IST

bad1

ಬದಿಯಡ್ಕ: ತಡವಾಗಿ ಪ್ರಾರಂಭವಾದ ಮುಂಗಾರುಮಳೆ ರೈತರಲ್ಲಿ ಮೂಡಿಸಿದ ನಿರೀಕ್ಷೆ ಇಂದು ಬಿಸಿಲಲ್ಲಿ ಒಣಗಿ ಹೋಗುತ್ತಿದ್ದು ನಿರೀಕ್ಷೆಯ ಕಂಗಳಲ್ಲಿ ನಿರಾಸೆಯ ಕಣ್ಣೀರು ಸುರಿಯುವಂತೆ ಮಾಡಿದೆ. ಮಳೆ ಪ್ರಾರಂಭವಾದಂತೆ ಉತ್ತಮ ಮಳೆ-ಬೆಳೆಯ ನಿರೀಕ್ಷೆಯೊಂದಿಗೆ ಭತ್ತ ಕೃಷಿ ಆರಂಭಿಸಿದ ಕೃಷಿಕರು ನೀರಿಲ್ಲದೆ ಸಂದಿಗ್ಧತೆಯಲ್ಲಿ ಸಿಲುಕಿದ್ದಾರೆ. ಬೆಳೆದು ನಿಂತ ಭತ್ತದ ಹುಲ್ಲುಗಳನ್ನು (ನೇಜಿ) ತೆಗೆದು ಗದ್ದೆಯಲ್ಲಿ ನಾಟಿ ಮಾಡುವ ಸಮಯವಾದರೂ ನೀರಿನ ಕೊರತೆಯಿಂದ ಗದ್ದೆಯ ಉಳುಮೆ ಹಾಗೂ ನಾಟಿ ಕೆಲಸ ಅರ್ಧದಲ್ಲೇ ಉಳಿದಿದ್ದು ಮಳೆ ಪ್ರಾರಂಭವಾದರೆ ಮಾತ್ರ ಇದನ್ನು ಮುಂದುವರಿಸಲು ಸಾಧ್ಯ.

ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆ
ಕಾಸರಗೋಡು ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆಯಾಗಿರುವುದು ಇಲ್ಲಿನ ಕೃಷಿಕರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಜೂನ್‌ ತಿಂಗಳಲ್ಲಿ ಕಡಿಮೆಯಾದರೂ ಮುಂದೆ ಹೆಚ್ಚು ಮಳೆ ಸುರಿಯಬಹುದೆಂಬ ಊಹೆಯಿಂದ ಹಲವೆಡೆಗಳಲ್ಲಿ ಕೃಷಿಕರು ಭತ್ತದ ಕೃಷಿ ಆರಂಭಿಸಿದ್ದಾರೆ. ಆದರೆ ಜುಲೈ ತಿಂಗಳು ಪ್ರಾರಂಭವಾದರೂ ಮಳೆ ಬಿರುಸುಗೊಳ್ಳದಿರುವುದು ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಸೌಲಭ್ಯ ಇರುವ ಕಡೆಗಳಲ್ಲಿ ಮೋಟಾರು ಮೂಲಕ ನೀರು ಹಾಯಿಸಿ ಗದ್ದೆ ಕೆಲಸ ಮಾಡಲಾಗುತ್ತಿದೆ.

ಬೀಜ ಬಿತ್ತಿ 20-25ದಿನಗಳೊಳಗೆ ನೇಜಿ ತೆಗೆದು ಗದ್ದೆ ಉತ್ತು ಮತ್ತೆ ನಾಟಿ ಮಾಡಬೇಕು. ಇಲ್ಲವಾದಲ್ಲಿ ಫಸಲು ಕಡಿಮೆಯಾಗುತ್ತದೆ. ಆದರೆ ಈ ವರ್ಷ ನೇಜಿ ನೆಡಲು ಅಗತ್ಯವಾದ ಮಳೆ ಸುರಿಯದಿರುವುದು ಕೃಷಿಕರನ್ನು ಸಂಕಷ್ಟಕ್ಕೀಡು ಮಾಡಿದೆ.

ಮೋಟಾರ್‌ ಬಳಸಿ ಗದ್ದೆ ಕೃಷಿ
ನೀರ್ಚಾಲು, ಏಣಿಯರ್ಪು ಸೇರಿದಂತೆ ಜಿಲ್ಲೆಯ ಹಲೆವೆಡೆಗಳಲ್ಲಿ ನೇಜಿ ನೆಡುವ ಕೆಲಸ ಬಹುತೇಕ ಪೂರ್ತಿಗೊಂಡಿದೆ. ಮಳೆ ಇಲ್ಲದಿದ್ದರೂ ಮೋಟಾರ್‌ ಬಳಸಿ ಗದ್ದೆಗೆ ನೀರು ಹಾಯಿಸಿ ಕೃಷಿಕೆಲಸವನ್ನು ಮಾಡಲಾಗಿದೆ. ಆದರೆ ಬೇಳ, ಕೋಡಿಂಗಾರು, ವಿದ್ಯಾಗಿರಿ ಸೇರಿದಂತೆ ಜಿಲ್ಲೆಯಾದ್ಯಂತ ಮೋಟಾರ್‌ ಬಳಸಿ ನೀರು ಹಾಯಿಸಿ ಕೆಲಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಸುಡುಬಿಸಿಲ ಬೇಗೆ
ರಾತ್ರಿ ಕಾಲದಲ್ಲಿ ಸುರಿಯುವ ಸಣ್ಣ ಪುಟ್ಟ ಮಳೆಯ ನೀರನ್ನು ಹಗಲಿನ ಸುಡುಬಿಸಿಲು ಸಂಪೂರ್ಣವಾಗಿ ಹೀರಿಬಿಡುತ್ತದೆ. ಆದುದರಿಂದ ಗದ್ದೆಗಳಿಗೆ ನೀರು ಹಾಯಿಸುವುದು ಒಂದು ಸವಾಲಾಗಿದೆ. ಎಷ್ಟೇ ನೀರು ಹಾಯಿಸಿದರೂ ಮಣ್ಣು ಹೀರಿಕೊಳ್ಳುವ ಕಾರಣ ಹೆಚ್ಚು ಹೆಚ್ಚು ನೀರು ಹಾಯಿಸಬೇಕಾದ ಅಗತ್ಯವಿದೆ. ಇದು ಹೆಚ್ಚು ಖರ್ಚಿಗೂ ದಾರಿಯಾಗುತ್ತಿದ್ದು ಈ ಬಾರಿ ಬೆಳೆಯಲ್ಲಿ ಉಂಟಾಗಬಹುದಾದ ಕುಸಿತದ ಭಯವಿರುವ ಕೃಷಿಕರಿಗೆ ಇದೊಂದು ಸವಾಲಾಗಿ ಪರಿಣಮಿಸಿದೆ.

ಮಳೆ ಬಂದರೆ ಭತ್ತ ಬೆಳೆಯುವ
ಜಿಲ್ಲೆಯ ಇನ್ನು ಕೆಲವು ಭಾಗಗಳಲ್ಲಿ ಭತ್ತದ ಕೃಷಿ ಇನ್ನೂ ಆರಂಭವಾಗಿಲ್ಲ. ಉತ್ತಮ ಮಳೆ ಬಂದ ನಂತರವೇ ನೇಜಿ ಹಾಕುವ, ಬಿತ್ತನೆ ಮಾಡುವ ಕೆಲಸ ಆರಂಭಿಸುವುದಾಗಿ ನಿರ್ಧರಿಸಿರುವ ರೈತರು ಮಳೆಗಾಗಿ ಕಾಯುತ್ತಿದ್ದಾರೆ.
ಲಾಭಕ್ಕಿಂತ ನಷ್ಟವೇ ಹೆಚ್ಚು ಕಾರ್ಮಿಕರ ಕೊರತೆ, ಸರಕಾರದಿಂದ ಸೂಕ್ತ ಸೌಲಭ್ಯಗಳು ದೊರೆಯದಿರುವುದು, ಹೆಚ್ಚಾಗುತ್ತಿರುವ ಖರ್ಚು ಈಗಾಗಲೇ ಕೃಷಿಕರನ್ನು ಭತ್ತದ ಕೃಷಿಯಿಂದ ಹಿಂಜರಿಯುವಂತೆ ಮಾಡಿದೆ. ಕೆಲವೆಡೆಗಳಲ್ಲಿ ಭತ್ತದ ಗದ್ದೆಯಲ್ಲಿ ತೆಂಗು, ಕೌಂಗು ಬೆಳೆದಿರುವುದು ಕಾಣಬಹುದು.

ಅಕ್ಕಿ ಬೆಲೆ ಹೆಚ್ಚಬಹುದೇ?
ಈಗಾಗಲೇ ಅಕ್ಕಿ ಬೆಲೆ ಗಗನಕ್ಕೇರಿದೆ. ಈ ಬಾರಿಯ ಮಳೆ-ಬೆಳೆಯ ಸಮಸ್ಯೆ ಮುಂದಿನ ದಿನಗಳಲ್ಲಿ ಬಡವರ ಅನ್ನಕ್ಕೆ ಕಲ್ಲು ಹಾಕಲಿದೆಯೇ ಎಂಬ ಸಂದೇಹ ಮೂಡುತ್ತದೆ.

ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.