ಬೆಸ್ತರನ್ನೊಳಗೊಂಡ ಸಮುದ್ರ ಸುರಕ್ಷಾ ಸ್ಕ್ವಾಡ್‌ ರಚನೆ


Team Udayavani, Nov 14, 2018, 2:40 AM IST

squad-13-11.jpg

ಕಾಸರಗೋಡು: ಪದೇ ಪದೆ ಸಂಭವಿಸುವ ಸಮುದ್ರ ಕ್ಷೋಭೆ, ಕಡಲ್ಕೊರೆತ, ನೆರೆ, ಪ್ರಳಯ ಮೊದಲಾದ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಅಪಾಯಕ್ಕೆ ಸಿಲುಕಿದವರನ್ನು ಸಂರಕ್ಷಿಸುವ ಉದ್ದೇಶದಿಂದ ಬೆಸ್ತರನ್ನು ಸೇರ್ಪಡೆಗೊಳಿಸಿ ಸಮುದ್ರ ಸುರಕ್ಷಾ ಸ್ಕ್ವಾಡ್‌ ರೂಪಿಸಲು ಸರಕಾರ ಮುಂದಾಗಿದೆ. ಇತ್ತೀಚೆಗೆ ಕೇರಳದಲ್ಲಿ ಸಂಭವಿಸಿದ ಪ್ರಳಯದ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಹಲವಾರು ಮಂದಿಯನ್ನು ರಕ್ಷಿಸಿದ ಮೀನು ಕಾರ್ಮಿಕರನ್ನೂ ಸೇರ್ಪಡೆಗೊಳಿಸಿ ಇಂತಹ ಸಂದರ್ಭಗಳು ಬಂದಲ್ಲಿ ರಕ್ಷಿಸಿಕೊಳ್ಳಲು ಸಮುದ್ರ ಸುರಕ್ಷಾ ಸ್ಕ್ವಾಡ್‌ ರಚಿಸಲಾಗುವುದು.

ರಾಜ್ಯದಲ್ಲಿ ಆರಂಭ ಹಂತದಲ್ಲಿ ಇಂತಹ 60 ಯೂನಿಟ್‌ಗಳನ್ನು ರೂಪಿಸಲಾಗುವುದು. ಕಾಸರಗೋಡು ಜಿಲ್ಲೆಯಲ್ಲಿ ಎಂಟು ಮೀನುಗಾರಿಕಾ ಕೇಂದ್ರಗಳಲ್ಲಿನ ದೋಣಿ ಮತ್ತು ಬೋಟ್‌ಗಳಲ್ಲಿ ದುಡಿಯುವ ಬೆಸ್ತರನ್ನು ಸೇರ್ಪಡೆಗೊಳಿಸಿ ಸುರಕ್ಷಾ ಸ್ಕ್ವಾಡ್‌ ಆರಂಭಗೊಳ್ಳಲಿದೆ. ಕಾಸರಗೋಡು, ಚೆರ್ವತ್ತೂರು, ಪಳ್ಳಿಕೆರೆ, ಕಾಂಞಂಗಾಡ್‌ ತೈಕಡಪ್ಪುರ, ಹೊಸದುರ್ಗ, ಮಂಜೇಶ್ವರ, ಕೊಯಿಪ್ಪಾಡಿ, ಕೋಟಿಕುಳಂ ಎಂಬೆಡೆಗಳಲ್ಲಿ ಪ್ರಥಮ ಹಂತದಲ್ಲಿ ಸ್ಕ್ವಾಡ್‌ ರಚಿಸಲಾಗುವುದು.

ಒಖೀ ದುರಂತದ ಹಿನ್ನೆಲೆಯಲ್ಲಿ ಸಮುದ್ರ ಸುರಕ್ಷಾ ವ್ಯವಸ್ಥೆ ಮತ್ತು ಸಮುದ್ರದಲ್ಲಿ ರಕ್ಷಣಾ ಕಾರ್ಯವನ್ನು ಬಲಪಡಿಸುವುದು ಈ ಮೂಲಕ ಸರಕಾರದ ಉದ್ದೇಶವಾಗಿದೆ. ಸಾಕಷ್ಟು ಅನು ಭವವುಳ್ಳ ಮೀನುಕಾರ್ಮಿಕರನ್ನು ಈ ಸ್ಕ್ವಾಡ್‌ಗೆ ಸೇರಿಸಿಕೊಳ್ಳಲಾಗುವುದು. ಕಡಲ್ಕೊರೆತ, ಸಮುದ್ರ ಕ್ಷೋಭೆ, ನೆರೆ, ಪ್ರಳಯ ಮೊದಲಾದ ಪ್ರಾಕೃತಿಕ ದುರಂತಗಳು ಎದುರಾದಾಗ ತುರ್ತು ರಕ್ಷಣಾ ಕಾರ್ಯಗಳಿಗೆ ಈ ಸ್ಕ್ವಾಡ್‌ಗಳನ್ನು ಬಳಸಿಕೊಳ್ಳಲಾಗುವುದು. ಯಾವುದೇ ಪ್ರಾಕೃತಿಕ ವಿಕೋಪ ಇಲ್ಲದ ಸಂದರ್ಭಗಳಲ್ಲಿ ಈ ಸ್ಕ್ವಾಡ್‌ನ‌ಲ್ಲಿರುವ ಮೀನು ಕಾರ್ಮಿಕರಿಗೆ ಮೀನುಗಾರಿಕೆಯಲ್ಲಿ ತೊಡಗಬಹುದು. ಈ ಸ್ಕ್ವಾಡ್‌ಗೆ ಸರಕಾರ ನಿಗದಿಪಡಿಸುವ ಗೌರವ ಧನವನ್ನು ನೀಡಲಾಗುವುದು. ಸ್ಕ್ವಾಡ್‌ಗಳನ್ನು ರೂಪೀಕರಿಸಲು ಎಲ್ಲಾ ಸುರಕ್ಷಾ ವ್ಯವಸ್ಥೆಗಳಿಗರುವ ದೋಣಿ, ಮೀನುಗಾರಿಕಾ ಬೋಟ್‌ಗಳ ಮಾಲಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸ್ಕ್ವಾಡ್‌ಗೆ ಆಯ್ಕೆಯಾಗುವ ಬೆಸ್ತರಿಗೆ ಗೋವಾದಲ್ಲಿರುವ ಇನ್‌ಸ್ಟಿಟ್ಯೂಟ್‌ ಆಫ್‌ ವಾಟರ್‌ ಸ್ಟೋರ್ನಲ್ಲಿ ರಕ್ಷಣಾ ಕಾರ್ಯದ ಕುರಿತಾಗಿ ತರಬೇತಿ ನೀಡಲಾಗುವುದು.

ಕೂಡಲೇ ಅರ್ಜಿ ಸಲ್ಲಿಸಿ
ಪರಂಪರಾಗತ ಮೀನುಗಾರಿಕಾ ದೋಣಿಯ ಮಾಲಕ ಮತ್ತು ಇಬ್ಬರು ಕಾರ್ಮಿಕರು ಒಳಗೊಂಡ ಗ್ರೂಪ್‌, ಮೆಕನೈಸ್ಡ್ ವಿಭಾಗದಲ್ಲಿ ಚಾಲಕ, ಮಾಲಕ, ಪ್ರತಿನಿಧಿಗಳನ್ನೊಳಗೊಂಡ ಗ್ರೂಪ್‌ ಅರ್ಜಿ ಸಲ್ಲಿಸಬೇಕು. ದೋಣಿ ಅಥವಾ ಬೋಟ್‌ಗಳ ಮಾಲಕರಿಗೆ ಮೀನುಗಾರಿಕೆಯ ಬಗ್ಗೆ ಯಾವುದೇ ಅನುಭವಗಳಿಲ್ಲದಿದ್ದಲ್ಲಿ ಅವರ ಬದಲಿಯಾಗಿ ಅನುಭವಿ ಮೀನು ಕಾರ್ಮಿಕರನ್ನು ಸೇರಿಸಿಕೊಳ್ಳಬಹುದು. ಈ ಬಗ್ಗೆ ಅರ್ಜಿಯಲ್ಲಿ ಪ್ರತ್ಯೇಕವಾಗಿ ಸೂಚನೆಯನ್ನು ನೀಡಬೇಕು. ಅರ್ಜಿ ನಮೂನೆಗಳು ಫಿಶರೀಸ್‌ ಇಲಾಖೆಯ ಜಿಲ್ಲಾ ಕಚೇರಿ, ಫಿಶರೀಸ್‌ ಸ್ಟೇಶನ್‌ಗಳು, ಮತ್ಸ್ಯ ಭವನಗಳಲ್ಲಿ ಲಭಿಸುವುವು. ಅರ್ಜಿಯನ್ನು ನ. 15ರ ಸಂಜೆ 5 ಗಂಟೆಯವರೆಗೆ ಸ್ವೀಕರಿಸಲಾಗುವುದು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.