ವೃದ್ಧ ಮಂದಿರದಲ್ಲಿ ತಂಗಿದ್ದ ಮಹಿಳೆ ಸಂಬಂಧಿಕರಿಗೆ ಹಸ್ತಾಂತರ


Team Udayavani, Apr 13, 2019, 3:11 PM IST

Maniyamma

ಬದಿಯಡ್ಕ : ವೃದ್ಧ ಮಂದಿರದಲ್ಲಿ ತಂಗಿದ್ದ ವೃದ್ಧೆಯ ಸಂಬಂಧಿಕರನ್ನು ಪತ್ತೆ ಮಾಡಿ ಅವರ ವಶಕ್ಕೆ ಹಸ್ತಾಂತರಿಸಲಾಗಿದೆ.ಕಾಸರಗೋಡು ಸರಕಾರಿ ವೃದ್ಧಸದನದಲ್ಲಿ ಆಶ್ರಯ ಪಡೆಯುತ್ತಿದ್ದ ಮಣಿಯಮ್ಮ (75) ಈ ರೀತಿ ಸಂಬಂಧಿಕರಿಗೆ ಹಸ್ತಾಂತರಗೊಂಡವರು.

2018 ಡೆಸೆಂಬರ್‌ ತಿಂಗಳಲ್ಲಿ ಪಿಂಕ್‌ ಪೋಲೀಸರ (ಮಹಿಳೆಯರಿಗೆ ಸಹಾಯ ಒದಗಿಸುವ ಮಹಿಳಾ ಪೋಲೀಸ್‌ ದಳ) ಸಹಾಯದಿಂದ ಸರಕಾರಿ ವೃದ್ಧ ಮಂದಿರ ಸೇರಿದ್ದರು. ತಮಿಳುನಾಡಿನಿಂದ ಬಸ್‌ ಮೂಲಕ ಚಿಕ್ಕಮಂಗಳೂರಿನಲ್ಲಿರುವ ಪುತ್ರಿಯ ಮನೆಗೆ ತೆರಳುವ ದಾರಿ ಮಧ್ಯೆ ಕಾಸರಗೋಡಿನಲ್ಲಿ ಇಳಿದ ಮೂಲಕ ಅವರು ಯಾತ್ರೆಯಿಂದ ಕಳಚಿಕೊಂಡಿದ್ದರು. ನಂತರ ಅನಾಥ ಸ್ಥಿತಿಯಲ್ಲಿ ಕಂಡು ಬಂದ ಅವರನ್ನು ಪಿಂಕ್‌ ಪೋಲೀಸರು ವೃದ್ಧ ಮಂದಿರಕ್ಕೆ ಸೇರ್ಪಡೆಗೊಳಿಸಿದ್ದರು.

ತಮ್ಮ ಊರಿನ ಬಗ್ಗೆ , ಸಂಬಂಧಿಕರ ಬಗ್ಗೆ ಮಾಹಿತಿ ನೀಡಲು ಸಾಧ್ಯವಾಗದಷ್ಟು ದುರ್ಬಲರಾದ ಹಿನ್ನಲೆಯಲ್ಲಿ ಇವರ ವಿಳಾಸ ಪತ್ತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಷ್ಟ ಸಾಧ್ಯವಾಗಿತ್ತು. ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರ ಮತ್ತು ವೃದ್ಧ ಮಂದಿರದ ಅಧಿಕಾರಿಗಳು ನಡೆಸಿದ ಯತ್ನದ ಫಲವಾಗಿ ತಮಿಳುನಾಡಿನ ತಿಟ್ಟುಗಟ್ಟಿ ಪೋಲೀಸರ ಸಹಾಯದಿಂದ ನಡೆದ ತನಿಖೆಯಲ್ಲಿ ಮಣಿಯಮ್ಮ ಅವರ ವಿಳಾಸ ಮತ್ತು ಸಂಬಂಧಿಕರ ಪತ್ತೆಯಾಗಿತ್ತು.

ಮಣಿಯಮ್ಮ ಅವರನ್ನು ಸಂಬಂಧಿಕರಿಗೆ ಒಪ್ಪಿಸುವ ಸಂಬಂಧ ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರ ಕಚೇರಿಯಲ್ಲಿ ಸಭೆ ನಡೆಯಿತು. ಜಿಲ್ಲಾ ನ್ಯಾಯಮೂರ್ತಿ ಎಸ್‌. ಮನೋಹರ್‌ ಕಿಣಿ ಅವರು ಮಣಿಯಮ್ಮ ಅವರನ್ನು ಪುತ್ರಿಗೆ ಹಸ್ತಾಂತರಿಸಿದ್ದಾರೆ.

ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶನ್‌ ಪಿ.ಟಿ., ವೃದ್ಧ ಮಂದಿರ ವರಿಷ್ಠಾಧಿಕಾರಿ ಪಂಕಜಾಕ್ಷನ್‌ ಪಿ.ಎಂ. ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.