“ನಮ್ಮ ಗುರುನಿಷ್ಠೆ ನಮ್ಮನ್ನು ಸದಾ ಕಾಪಾಡುತ್ತದೆ’


Team Udayavani, Apr 24, 2019, 6:25 AM IST

gurugalu

ಕಾಸರಗೋಡು: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಶ್ರೀಮಜ್ಜಗದ್ಗುರು ಶಂಕರಾ ಚಾರ್ಯ ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಶ್ರಯದಲ್ಲಿರುವ ಮುಳ್ಳೇರಿಯ ಹವ್ಯಕ ಮಂಡಲದ ಮಾಸಿಕ ಸಭೆಯು ಮಡಿಕೇರಿಯಲ್ಲಿ ಕೊಡಗು ಹವ್ಯಕ ವಲಯ ಕಾರ್ಯದರ್ಶಿ ಡಾ|ರಾಜಾರಾಮ ಭಟ್‌ ಅವರ ನಿವಾಸದಲ್ಲಿ ಜರಗಿತು.

ದೀಪಜ್ವಲನ, ಧ್ವಜಾರೋಹಣ, ಶಂಖನಾದ, ಗುರುವಂದನೆ, ಗೋಸ್ತುತಿಯೊಂದಿಗೆ ಸಭೆ ಪ್ರಾರಂಭವಾಯಿತು.

ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಭಟ್‌ ಸರ್ಪಮಲೆಯವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಗತಸಭೆಯ ವರದಿ ನೀಡಿದರು. ವಲಯ ಪದಾಧಿಕಾರಿಗಳು ವಲಯ ವರದಿಗಳನ್ನಿತ್ತರು. ವಿಭಾಗ ಪ್ರಧಾನರು ಆಯಾ ವಿಭಾಗಗಳ ವರದಿ ನೀಡಿ ಮಾಹಿತಿಗಳನ್ನಿತ್ತರು. ಸಭೆಯಲ್ಲಿ ಶ್ರೀಮಠದ ಮಾರ್ಗದರ್ಶನದಲ್ಲಿ ಜರಗಿದ ವಿವಿಧ ಸಮಾರಂಭಗಳ ಕುರಿತು ಅವಲೋಕನೆ ಮಾಡಲಾಯಿತು.

ಶ್ರೀ ಮಠದ ಸಕ್ರಿಯ ಕಾರ್ಯಕರ್ತೆ, ಮಹಿಳಾ ಸಬಲೀಕರಣದತ್ತ ವಿಶೇಷ ಕಾರ್ಯಚಟುವಟಿಕೆ, ಸೀತಾಮಾತೆಯ ಆದರ್ಶಗಳನ್ನು ಪಾಲಿಸುತ್ತಾ ಸಾಮಾಜಿಕವಾಗಿ ವಿಶೇಷ ಸಾಧನೆಗೈದ ಮಾತೆಗೆ ಶ್ರೀರಾಮಚಂದ್ರಾಪುರ ಮಠ ರಾಮೋತ್ಸವದ ಸಂದರ್ಭದಲ್ಲಿ ಶ್ರೀ ಸಂಸ್ಥಾನದವರಿಂದ ಪ್ರದಾನಿಸುವ ಶ್ರೀಮಾತಾ ಪ್ರಶಸ್ತಿ ಅನುಗ್ರಹ ಪಡೆದ ಮಹಾಮಂಡ ಲಾಧ್ಯಕ್ಷೆ ಈಶ್ವರಿ ಬೇರ್ಕಡವು ಅವರನ್ನು ಶಾಲು ಹೊದೆಸಿ ಫಲವನ್ನಿತ್ತು ಗೌರವಿಸಲಾಯಿತು.

ಗುರುಗಳ ಆದೇಶವನ್ನನುಸರಿಸಿ ಅದರಂತೆ ನಡೆದರೆ ಉನ್ನತಿ ಪ್ರಾಪ್ತಿಯಾಗುವುದೆಂಬುದಕ್ಕೆ ನಾನೇ ಉದಾಹರಣೆ. ನಮ್ಮ ಗುರುನಿಷ್ಠೆ ನಮ್ಮನ್ನು ಸದಾ ಕಾಪಾಡುತ್ತೆ. ಆದ್ದರಿಂದ ಪೂರ್ಣ ಶರಣಾಗತಿಯೊಂದಿಗೆ ಗುರುಸೇವೆ ಮಾಡಿದಲ್ಲಿ ಗುರುಗಳು ನಮ್ಮನ್ನು ಗುರಿ ತಲಪಿಸುತ್ತಾರೆ.

ಮುಳ್ಳೇರಿಯಾ ಮಂಡಲ ನನ್ನ ಮನೆ. ನನ್ನ ಮನೆ ಮಂದಿಯ ಕಾರ್ಯಕರ್ತರ ಸರ್ವ ಸಹಕಾರದಿಂದ ನನಗೆ ಈ ಪ್ರಶಸ್ತಿ ಬಂದಿದೆ. ಇದು ನಮಗೆಲ್ಲರಿಗೂ ಸಂದ ಪ್ರಶಸ್ತಿ ಎಂಬುದಾಗಿ ಸಮ್ಮಾನಿತರಾದ ಈಶ್ವರಿ ಬೇರ್ಕಡವು ಮಾರ್ಮಿಕ ನುಡಿಗಳನ್ನಾಡಿದರು.

ಪಿಯುಸಿ ವಾಣಿಜ್ಯ ವಿಭಾಗಲ್ಲಿ ಶೇ.96.4 ಅಂಕವನ್ನು ಗಳಿಸಿ ವಿಶೇಷ ಸಾಧನೆ ಮಾಡಿದ ವಿರಾಜಪೇಟೆ ಗುರಿಕ್ಕಾರರಾದ ಕೆ.ಶ್ಯಾಮ ಮತ್ತು ಉಷಾ ದಂಪತಿ ಪುತ್ರಿ ಕೆ.ಪಾವನಿ ಅವರನ್ನು ಶಾಲುಹೊದೆಸಿ ಫಲಪುಷ್ಪ ನೀಡಿ ಅಭಿನಂದಿಸಲಾಯಿತು.

ಮಂಡಲ ಗುರಿಕ್ಕಾರ ಸತ್ಯನಾರಾಯಣ ಭಟ್‌ ಮೊಗ್ರ ಅವರು ಮಹಾ ಪಾದುಕಾ ಪೂಜೆಯ ಯಶಸ್ವಿಗಾಗಿ ಕಾರ್ಯಕರ್ತರನ್ನು ಅಭಿನಂದಿಸಿ ಮುಂದೆಯೂ ಗುರುಸೇವೆಯಲ್ಲಿ ಮುಂಚೂಣಿಯಲ್ಲಿದ್ದು ಕಾರ್ಯ ನಿರತರಾಗೋಣ ಎಂದರು.

ಮಂಡಲಾಧ್ಯಕ್ಷರಾದ ಪ್ರೊ|ಶ್ರೀಕೃಷ್ಣ ಭಟ್‌ ಅವರು ಅಧ್ಯಕ್ಷೀಯ ಮಾತುಗಳನ್ನಾಡಿದರು. ಸಾಮೂಹಿಕ ರಾಮಜಪ, ಶಾಂತಿಮಂತ್ರ, ಧ್ವಜಾವರೋಹಣ ಶಂಖನಾದವಾಗಿ ಸಭೆ ಮುಕ್ತಾಯವಾಯಿತು.

ಭದ್ರಅಡಿಪಾಯ
ಸಭೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಕೀರ್ತಿಗೆ ಭಾಜನರಾದ ಕಾಸರಗೋಡಿನ ಪೆರಡಾಲ ಕಡಪ್ಪು ಶ್ರೀಕೃಷ್ಣ ಶರ್ಮ ಅವರನ್ನು ಶಾಲುಹೊದೆಸಿ ಫಲಪುಷ್ಪ ನೀಡಿ ಅಭಿನಂದಿಸಲಾಯಿತು. ಅಭಿನಂದನೆಗೆ ಧನ್ಯತೆಯಿಂದ ಉತ್ತರಿಸುತ್ತಾ ಶ್ರೀಕೃಷ್ಣ ಶರ್ಮ ಯಾವುದೇ ಕಟ್ಟಡ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಬೇಕು.

ನನ್ನ ಜೀವನದಲ್ಲಿ ಶ್ರೀಭಾರತೀ ವಿದ್ಯಾಪೀಠದ ಮೂಲಕ ನನಗೆ ಈ ಭದ್ರತೆಯು ಲಭಿಸಿದೆ. ಶ್ರೀಸಂಸ್ಥಾನದ ಶ್ರೀರಕ್ಷೆ ನನಗೊದಗಿ ಬಂದುದರಿಂದ ಈ ಸಾಧನೆ ಸಾಧ್ಯವಾಯಿತು. ಮುಂದೆಯೂ ಶ್ರೀಚರಣ ಸೇವಕನಾಗಿರುತೇ¤ನೆ ಎಂದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.