ಭತ್ತ ಕೃಷಿ ; ಬತ್ತದ ಉತ್ಸಾಹಕ್ಕೆ ಬೇಕು ಪ್ರೋತ್ಸಾಹ


Team Udayavani, Jul 10, 2017, 3:45 AM IST

green-revolution-in-india.jpg

ಸಾಂಪ್ರದಾಯಿಕ ಆಹಾರ ಕೃಷಿಯೊಂದಿಗೆ ಬೆಳೆದು ಬಂದ ಮಲೆನಾಡು ಜನರ ಬದುಕು ಇಂದು ವಿವಿಧ ಕಾರಣಗಳಿಂದಾಗಿ ಆಹಾರದ ಬಟ್ಟಲಿನಿಂದ ವಾಣಿಜ್ಯ ಬಾಣಲೆಗೆ ಬಿದ್ದಿದೆ. ಆರ್ಥಿಕ ಮೂಲದ ಉದ್ದೇಶದಿಂದ ವಾಣಿಜ್ಯ ಬೆಳೆಯ ಮೇಲಿನ ಆಸಕ್ತಿ ಅನಿವಾರ್ಯವಾದರೂ ಆಹಾರ ವಸ್ತುಗಳ ಬೆಲೆ ಏರಿಕೆಯಿಂದ ಆ ಕೃಷಿಯನ್ನು ಉಳಿಸಿಕೊಳ್ಳುವುದೂ ಅನಿವಾರ್ಯವಾಗಿದೆ.

ಅಲ್ಲಲ್ಲಿ ಉಳಿದುಕೊಂಡಿರುವ ಸಾಂಪ್ರದಾಯಿಕ ಭತ್ತ ಕೃಷಿಯ ಜತೆಗೆ, ವಾಣಿಜ್ಯ ಬೆಳೆ ಅಡಿಕೆ ಇಲ್ಲಿನ ಜನರ ಜೀವನಕ್ಕೆ ಆಧಾರ. ಇದರ ಜತೆಗೆ ತೆಂಗು, ಕೋಕೋ, ಕಾಳುಮೆಣಸು ಈ ಭಾಗದ ಜನರ ಉಪಬೆಳೆ. ರಬ್ಬರ್‌ ದ್ವಿತೀಯ ಪ್ರಮುಖ ವಾಣಿಜ್ಯ ಬೆಲೆ. ಶೇ. 60ರಷ್ಟು ಕೃಷಿಕರು ಅಡಿಕೆಯನ್ನೇ ಮುಖ್ಯ ವಾಣಿಜ್ಯ ಬೆಳೆಯನ್ನಾಗಿಸಿಕೊಂಡಿದ್ದಾರೆ.

ಯಾವುದು, ಎಷ್ಟು ?
ಪುತ್ತೂರು ಹಾಗೂ ಸುಳ್ಯ ಉಭಯ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 20,000 ಹೆಕ್ಟೇರ್‌ ಪ್ರದೇಶಗಳಲ್ಲಿ ಮುಖ್ಯ ವಾಣಿಜ್ಯ ಬೆಳೆಯಾದ ಅಡಿಕೆಯನ್ನು ಬೆಳೆಯಲಾಗುತ್ತಿದೆ. ಸುಮಾರು 11,000 ಹೆಕ್ಟೇರ್‌ ಪ್ರದೇಶದಲ್ಲಿ ರಬ್ಬರ್‌ ಬೆಳೆಯಿದೆ. ಸುಮಾರು 6,000 ಹೆಕ್ಟೇರ್‌ ಪ್ರದೇಶಗಳಲ್ಲಿ ತೆಂಗು, ಸುಮಾರು 500 ಹೆಕ್ಟೇರ್‌ ಪ್ರದೇಶಗಳಲ್ಲಿ ಕರಿಮೆಣಸು, ಸುಮಾರು 1,000 ಹೆಕ್ಟೇರ್‌ ಪ್ರದೇಶಗಳಲ್ಲಿ ಕೊಕ್ಕೋ ಬೆಳೆಯನ್ನು ವಾಣಿಜ್ಯ ಬೆಳೆಯಾಗಿ ಬೆಳೆಯಲಾಗುತ್ತಿದೆ.

ಭತ್ತದ ಪ್ರಮಾಣ ಇಳಿಕೆ
2015- 16 ರ ಸಾಲಿನಲ್ಲಿ ಉಭಯ ತಾಲೂಕುಗಳಲ್ಲಿ ಸುಮಾರು 5,000 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಇತ್ತೀಚೆಗೆ ಭತ್ತ ಕೃಷಿಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಪ್ರಸ್ತುತ ಹಿಂಗಾರಿನಲ್ಲಿ ಸುಮಾರು 4,000 ಹೆಕ್ಟೇರ್‌ ಪ್ರದೇಶಕ್ಕೂ ಕಡಿಮೆ ಪ್ರಮಾಣಕ್ಕೆ ಇಳಿದಿದೆ.

ಬೆಲೆ, ಬೆಂಬಲ ಇಲ್ಲ
ಪುತ್ತೂರು ಹಾಗೂ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ವಾಣಿಜ್ಯ ಕೃಷಿಗೆ ಸಂಬಂಧಪಟ್ಟಂತೆ ಹೊಸ ಬೆಳೆಗಳು ಕಾಣಿಸಿಕೊಳ್ಳದಿದ್ದರೂ ಉತ್ಪಾದನೆಯ ಪ್ರಮಾಣದಲ್ಲಿ ಬದಲಾವಣೆಗಳಾಗಿವೆ. ದೈವಗಳಿಗೆ ಬಿಟ್ಟ ಗದ್ದೆಗಳು, ಮನೆಯಲ್ಲಿ ಹೆಚ್ಚು ಸದಸ್ಯರಿರುವ ಕೃಷಿ ಕುಟುಂಬಗಳನ್ನು ಹೊರತಾಗಿ ಈ ತಾಲೂಕಿನಲ್ಲಿ ಯಾರೂ ಭತ್ತದ ಕೃಷಿ ಮಾಡುತ್ತಿಲ್ಲ. ಭತ್ತಕ್ಕೆ ಬೆಲೆಯಿಲ್ಲ ಮತ್ತು ಈ ಕೃಷಿಗೆ ಬೆಂಬಲವಿಲ್ಲ ಎಂಬ ಅರಿವು ಉಂಟಾದಾಗ ತಾಲೂಕಿನಲ್ಲಿ ಕೃಷಿ ಪಲ್ಲಟ ಉಂಟಾಗಿದೆ. ತಾಲೂಕಿನಲ್ಲಿ ರಬ್ಬರ್‌ ಬೆಲೆ, ಅಡಿಕೆ ಬೆಳೆಯ ಪ್ರಮಾಣದಲ್ಲಿ ವಿಸ್ತರಣೆಯಾಗಿದೆ.

ಪ್ರಭಾವ ಕಡಿಮೆ
ನೆರೆಯ ರಾಜ್ಯ ಕೇರಳದ ರಬ್ಬರ್‌ ಕೃಷಿ, ಪುತ್ತೂರು ಹಾಗೂ ಸುಳ್ಯ ತಾಲೂಕಿನ ರೈತರ ಮೇಲೆ ಪ್ರಭಾವ ಬೀರಿ ಇಲ್ಲಿಗೂ ಲಗ್ಗೆಯಿಟ್ಟಿದೆ. ನೇಂದ್ರ ಬಾಳೆ ಕೃಷಿ, ಅನನಾಸು ಸ್ವಲ್ಪ ಮಟ್ಟಿಗೆ ಪ್ರಭಾವ ಬೀರಿದೆಯಾದರೂ ಇದನ್ನು ಮುಂದುವರಿಸಿದವರು ವಿರಳ. ಇನ್ನು ಏಲಕ್ಕಿ, ಶುಂಠಿಯನ್ನು ತೋಟದ ಮಧ್ಯೆ ಮನೆ ಬಳಕೆಯ ಪ್ರಮಾಣಕ್ಕೆ ಮಾತ್ರ ಬೆಳೆಯಲಾಗುತ್ತದೆ.

ಮಾಹಿತಿಯ ಕೊರತೆ
ಭತ್ತದ ಬೆಳೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಮೂಲಕ ಸೌಲಭ್ಯವನ್ನು ನೀಡಲಾಗುತ್ತಿದೆ. ಕೃಷಿ ಅಭಿಯಾನದ ಸಂದರ್ಭದಲ್ಲಿ ಭತ್ತ ಬೆಳೆಯುವಂತೆ ಉತ್ತೇಜನ ನೀಡಲಾಗುತ್ತಿದೆ. ಬಿತ್ತನೆಗೆ ವಿವಿಧ ತಳಿಗಳ ಭತ್ತ, ಗದ್ದೆ ಉಳುಮೆ, ಕೊಯಿಲಿನ ಯಂತ್ರಗಳು ಲಭ್ಯವಿವೆ. ಆದರೆ ಇವು ಕೃಷಿಕರನ್ನು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಪ್ರಯತ್ನ ಅತಿ ಅಗತ್ಯವಾಗಿದೆ.

ಊರು ತುಂಬಾ ಭತ್ತದ ಗದ್ದೆಗಳೇ ಕಾಣುತ್ತಿದ್ದ ಕಾಲವೊಂದಿತ್ತು. ಅನಂತರ ಲಾಭದಾಯಕ ವಾಣಿಜ್ಯ ಕೃಷಿಯತ್ತ ಮನಸ್ಸು ಮಾಡಿದ ರೈತರು ಭತ್ತದ ಕೃಷಿಯಿಂದ ವಿಮುಖರಾದರು. ಭತ್ತವಿದ್ದ ಜಾಗದಲ್ಲಿ ಅಡಕೆ ಗಿಡಗಳು ಮೊಳೆತವು, ರಬ್ಬರ್‌ ತೋಟಗಳು ನೆಲೆಕಂಡುಕೊಂಡವು. ಕೊಕ್ಕೋ, ಕಾಳುಮೆಣಸುಗಳು ಸ್ಥಾನ ಪಡೆದುಕೊಂಡವು. ವಾಣಿಜ್ಯ ಬೆಳೆಗಳತ್ತ ಆಸಕ್ತಿ ಬೆಳೆಸಿಕೊಂಡರು ಪ್ರಸ್ತುತ ಆಹಾರ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಹೀಗಾಗಿ ಇರುವ ಭತ್ತದ ಕೃಷಿಯನ್ನು ಉಳಿಸಿಕೊಳ್ಳುವುದು ರೈತರಿಗೆ ಅನಿವಾರ್ಯವಾಗಿದೆ. 

ಅಸಲು ಅಧಿಕ
ಕೃಷಿಯನ್ನು ಹಿರಿಯರ ಕಾರಣಕ್ಕಾಗಿ ಅಥವಾ ಆಸಕ್ತಿಯಿಂದ ಕೈಗೊಂಡವರು ಕೃಷಿಯಲ್ಲಿ ನಷ್ಟ ಅನುಭವಿಸಲು ಸಿದ್ಧರಿಲ್ಲ. ಮಲೆನಾಡು ಅಡಿಕೆಗೂ ಸೂಕ್ತ ಪ್ರದೇಶ. ಲಾಭದ ಬೆಳೆ ಅಡಿಕೆಯನ್ನು ಬೆಳೆಸಲು ಗದ್ದೆಗಳನ್ನು ಅಡಿಕೆ ತೋಟಗಳನ್ನಾಗಿ ಪರಿವರ್ತಿಸಲಾಗಿದೆ. ಭತ್ತದ ಕೃಷಿಗೆ ಅಸಲೇ ಅಧಿಕವಾಗುತ್ತದೆ.
– ರಘುರಾಮ ಪಾಟಾಳಿ,
 ಕೃಷಿಕ, ಸರವು

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.