ಪಳ್ಳತ್ತೂರು ಸೇತುವೆ ಕಾಮಗಾರಿ ಆರಂಭ; ಸುಗಮ ಸಂಚಾರ‌ ನಿರೀಕ್ಷೆ


Team Udayavani, Apr 19, 2018, 6:20 AM IST

17mul1-Pallathuru.jpg

ಮುಳ್ಳೇರಿಯ: ಬಹುಕಾಲದ ಬೇಡಿಕೆಯ, ನಿರೀಕ್ಷೆಯ ಪಳ್ಳತ್ತೂರು ಸೇತುವೆಯ ಕಾಮಗಾರಿ ಆರಂಭಗೊಂಡಿದ್ದು ಮುಂದಿನ ವರ್ಷಗಳಲ್ಲಿ ಸುಗಮ ಸಂಚಾರದ ನಿರೀಕ್ಷೆಯಲ್ಲಿದ್ದಾರೆ ಜನರು.

ದೇಲಂಪಾಡಿ ಗ್ರಾ. ಪಂ.ಗೆ ಸೇರಿರುವ ಪಳ್ಳತ್ತೂರು ಸೇತುವೆಯ ಮೂಲಕ ಸಂಚಾರ ದುಸ್ತರವೂ, ಪ್ರಾಣಾಪಾಯಕ್ಕೆ ಸಾಕ್ಷಿಯಾಗಬೇಕಾಗುತ್ತಿದ್ದರೂ ನೂತನ ನಿರ್ಮಾಣ ಮರೀಚಿಕೆಯಾಗಿತ್ತು. ಆದರೆ ವರ್ಷಗಳಿಂದ ಮೀನಮೇಷ ಎಣಿಸುತ್ತಿದ್ದ ನಿರ್ಮಾಣ ಕಾಮಗಾರಿಗಿದ್ದ ಎಲ್ಲ ಅಡಚಣೆಗಳು ದೂರವಾಗಿವೆ. ಸೇತುವೆ ನಿರ್ಮಾಣ ಹಾಗೂ ಕೊಟ್ಯಾಡಿಯ ವರೆಗಿನ ಸಂಪರ್ಕರಸ್ತೆಯ ನಿರ್ಮಾಣಕ್ಕಾಗಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಿಂದ ಲೋಕೋಪಯೋಗಿ ಇಲಾಖೆ 7.58 ಕೋಟಿ ರೂಪಾಯಿಯನ್ನು ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆಯ ನಂತರ ತ್ವರಿತ ಕಾಮಗಾರಿ ನಡೆಯು ತ್ತಿದೆ. ಕಳೆದ ವರ್ಷದ ಫೆ. 17ರಂದು ಸೇತುವೆ ನಿರ್ಮಾಣಕ್ಕೆ ಆಡಳಿತಾನುಮತಿ ಲಭಿಸಿದ್ದರೂ ತಾಂತ್ರಿಕ ಅಡಚಣೆ ಕಾಮಗಾರಿ ಆರಂಭದ ಅಗತ್ಯ ಕ್ರಮಗಳಿಗೆ ಅಡ್ಡಿಯಾಗಿತ್ತು.

ಕರ್ನಾಟಕಕ್ಕೆ ಸೇರಿದ ಈಶ್ವರಮಂಗಲ, ಪುತ್ತೂರು ಮೊದಲಾದ ಪ್ರದೇಶಗಳಿಗೆ ಇದು ಸಂಪರ್ಕ ಕಲ್ಪಿಸುತ್ತಿದೆ. ಈ ರಸ್ತೆಯ ಮೂಲಕ ಕೊಟ್ಯಾಡಿ, ಅಡೂರು ಪ್ರದೇಶಗಳಿಗೆ ಖಾಸಗಿ, ಕರ್ನಾಟಕ ಸರಕಾರಿ ಬಸ್‌ಗಳು, ಇತರ ವಾಹನ ಗಳು ನಿತ್ಯವೂ ಓಡಾಟ ನಡೆಸುತ್ತಿವೆ. ಆದರೆ ಸೇತುವೆ ದುರವಸ್ಥೆಯು ಸಂಚಾರವನ್ನು   ಮೊಟಕುಗೊಳಿಸುತ್ತಿದೆ. ಇದರಿಂದಾಗಿ ನಿತ್ಯವೂ ಈ ರಸ್ತೆಯನ್ನು ಆಶ್ರಯಿಸಿರುವ ವಿದ್ಯಾರ್ಥಿಗಳು, ಕಾರ್ಮಿಕರು ಮೊದಲಾದವರು ತೊಂದರೆ ಅನುಭವಿಸಬೇಕಾಗುತ್ತಿದೆ. ಇಲ್ಲೊಂದು ದೊಡ್ಡ ಸೇತುವೆ ನಿರ್ಮಾಣಕ್ಕೆ ಒತ್ತಾಯ ಹಲವು ವರ್ಷ ಗಳಿಂದ ಕೇಳಿಬರುತ್ತಿದೆ. ಆದರೆ ಅದನ್ನು ಕಿವಿಗೆ ಹಾಕಿಕೊಳ್ಳುವವರು ಯಾರೂ ಇರಲೇ ಇರಲಿಲ್ಲ.

ಕರ್ನಾಟಕಕ್ಕೆ ಸೇರಿದ ರಸ್ತೆಯ ಭಾಗವನ್ನು ಕರ್ನಾಟಕ ಸರಕಾರ ಎರಡು ವರ್ಷಗಳ ಹಿಂದೇಯೇ ಮೆಕಾxಂ ಮಾದರಿಯ ಟಾರಿಂಗ್‌ ನಡೆಸಿ ಸುಸಜ್ಜಿತಗೊಳಿಸಿದೆ. ಆದರೆ ಕೇರಳಕ್ಕೆ ಸೇರಿದ ರಸ್ತೆಯ ಭಾಗ ಮಾತ್ರ ಈ ತನಕ ಶೋಚನೀಯವಾಗಿಯೇ ಉಳಿದಿತ್ತು. ಎರಡು ರಾಜ್ಯಗಳನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಇನ್ನು ಮುಂದಿನ ದಿನಗಳಲ್ಲಿ ಸಾಧ್ಯವಾಗಲಿದೆ ಎನ್ನುವುದು ಎಲ್ಲರಿಗೂ ಸಂತಸ ತರಬಲ್ಲುದು.ಪ್ರಸ್ತುತ ಒಂದು ವರ್ಷ ಕಾಲ ಸಂಚಾರದಲ್ಲಿ ಸಮಸ್ಯೆ ಎದುರಾದರೂ ಇಲ್ಲಿನ ಎಲ್ಲ ಸಮಸ್ಯೆಗಳು ಪರಿಹಾರವಾಗಲಿದ್ದು ಅದಕ್ಕಾಗಿ ತಾಳ್ಮೆಯಿಂದ ಕಾಯಬೇಕಾಗಿದೆ.

ಎಎಸ್‌ಐ ಬಲಿ ಪಡೆದ ಸೇತುವೆ
ಕೊಟ್ಯಾಡಿಯಿಂದ ಒಂದು ಕಿಲೋ ಮೀಟರ್‌ ದೂರದಲ್ಲಿರುವ ಪಳ್ಳತ್ತೂರು ಕಿರು ಸೇತುವೆ ತೀರಾ ಜರ್ಜರಿತವಾದ ಮುಳುಗು ಸೇತುವೆ. 1997ರಲ್ಲಿ ದೇಲಂಪಾಡಿ ಗ್ರಾಮ ಪಂಚಾಯತ್‌ ವತಿಯಿಂದ ಪ್ರಸ್ತುತ ಸೇತುವೆಯನ್ನು ನಿರ್ಮಿಸಲಾಗಿತ್ತು. ಆದರೆ ಇಬ್ಬದಿಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ಇದರ ಮೂಲಕ ಸಂಚಾರ ನಡೆಸಲಾಗುತ್ತಿತ್ತು. ಜೋರಾಗಿ ಮಳೆ ಸುರಿದರೆ ಸೇತು ವೆ ಮೇಲೆ ನೀರು ಹರಿದು ಸಂಚಾರ ಮೊಟಕುಗೊಳ್ಳುತ್ತಿತ್ತು. ಪ್ರಯತ್ನಪೂರ್ವಕವಾಗಿ ದಾಟುವ ಪ್ರಯತ್ನ ಮಾಡಿದರೆ ಸಂಚಾರ ಕಟ್ಟಿಟ್ಟಬುತ್ತಿ. ಇಂತಹ ಪ್ರಯತ್ನ ಜೀವಹಾನಿಗೂ ಕಾರಣವಾದುದು ದುದೆ„ìವ. ಕುಂಬಳೆ ಎಎಸ್‌ಐ ನಾರಾಯಣ ನಾಯ್ಕ ಬೆ„ಕ್‌ ಸಮೇತ ನೀರು ಪಾಲಾದುದು ವರ್ಷದ ಹಿಂದಿನ ನಡುಕ ಹುಟ್ಟಿಸುವ ವಿಚಾರ. ಜನರ ಸತತ ಒತ್ತಾಯ, ಅ ಧಿಕೃತರ ಪ್ರಯತ್ನದ ಫಲವಾಗಿ ಸೇತುವೆ ಸಾಕಾರಗೊಳ್ಳಲಿದೆ.

ಕಾಮಗಾರಿ ಚುರುಕು
ಕರಾರಿನಂತೆ ಎರಡು ವರ್ಷದಲ್ಲಿ ಇದು ಪೂರ್ತಿಗೊಳಿಸಬೇಕು. ಈಗಾಗಲೇ ಪಿಲ್ಲರ್‌ಗಳನ್ನು ಹಾಕುವ ಕೆಲಸ ಆರಂಭಗೊಂಡಿದೆ. ಇಲ್ಲಿನ ತೋಡಿನ ಮೂಲಕ ನೀರು ಹರಿಯುವ ಕಾರಣ ಮಳೆಗಾಲ ಆರಂಭವಾಗುವುದಕ್ಕಿಂತ ಮುಂಚಿತವಾಗಿ ತಳಮಟ್ಟದ ತನಕ ಪಿಲ್ಲರ್‌ಗಳನ್ನು ಹಾಕಿದರೆ ಮುಂದಿನ ಕೆಲಸ ಸುಗಮವಾಗಬಹುದು. ಹೀಗಾಗಿ ಪಿಲ್ಲರ್‌ಗೆ ರಂಧ್ರ ಕೊರೆಯುವ ಕಾಮಗಾರಿ ಎಡೆಬಿಡದೆ ಮುಂದುವರಿದಿದೆ. ಅಗತ್ಯ ವಸ್ತುಗಳನ್ನು ಇಲ್ಲಿ ರಾಶಿಹಾಕಲಾಗಿದೆ.

ಸಂಚಾರಕ್ಕೆ ಅಡಚಣೆ
ಇಕ್ಕಟ್ಟು ಪ್ರದೇಶವಾದ ಕಾರಣ ಸೇತುವೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಬೇಕಾದರೆ ಈ ಮೂಲಕ ಸಾಗುವ ವಾಹನಗಳನ್ನು ತಡೆ ಹಿಡಿಯು ವುದು ಅನಿವಾರ್ಯವಾಗಿತ್ತು. ಹೀಗಾಗಿ ಮಾರ್ಚ್‌ ತಿಂಗಳ ಮಧ್ಯದಲ್ಲಿಯೇ ವಾಹನಗಳ ಸಂಚಾರವನ್ನು ನಿಲ್ಲಿಸಲಾಗಿದೆ. ಕೇವಲ ಸಮೀಪದ ತೋಟದ ಮೂಲಕ ಕಾಲ್ನಡಿಗೆಯಲ್ಲಿ ಮಾತ್ರಾ ಜನರು ಸಾಗಬೇಕಾಗಿದೆ. ಮಳೆಗಾಲದಲ್ಲಿ ಕಾಲ್ನಡಿಗೆಯೂ ಕಷ್ಟಕರವಾಗಬಹುದು. ವಾಹನಗಳ ಮೂಲಕ ಸಾಗುವವರು ಕೊಟ್ಯಾಡಿ-ಗಾಳಿಮುಖ-ಕರ್ನೂರು ಮೂಲಕ ಸಾಗಬಹುದಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.