ಪಯಸ್ವಿನಿ ಹೊಳೆಯ ಸೇತುವೆ ಶಿಥಿಲ


Team Udayavani, May 17, 2019, 6:10 AM IST

payasvini

ಅರಂತೋಡು: ಅರಂತೋಡು-ತೊಡಿಕಾನ ಸಂಪರ್ಕದ ಪಯಸ್ವಿನಿ ಹೊಳೆಗೆ ಅಡ್ಡಲಾಗಿ ನಿರ್ಮಿಸಿದ ಸೇತುವೆಯ ಪಿಲ್ಲರ್‌ಗಳು ಶಿಥಿಲಗೊಂಡಿದ್ದು, ಅಪಾಯದ ಮುನ್ಸೂಚನೆ ಇದೆ.

ಸೇತುವೆ ಒಟ್ಟು ಆರು ಪಿಲ್ಲರ್‌ಗಳನ್ನು ಹೊಂದಿದೆ. ಇದರಲ್ಲಿ ಮಧ್ಯದ ಮೂರು ಪಿಲ್ಲರ್‌ಗಳು ಶಿಥಿಲಗೊಂಡಿದೆ. ಕಳೆದ ಆಗಸ್ಟ್‌ ತಿಂಗಳಿನಲ್ಲಿ ಕೊಡಗಿನಲ್ಲಿ ಸಂಭವಿಸಿದ ಜಲಪ್ರಳಯದಿಂದ ದೊಡ್ಡ ದೊಡ್ಡ ಮರಗಳು ಹಾಗೂ ಕಲ್ಲುಗಳು ಬಂದು ಗುದ್ದಿದ ಪರಿಣಾಮ ಪಿಲ್ಲರ್‌ಗಳು ಶಿಥಿಲಗೊಂಡಿವೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಶಬ್ದ ಕೇಳಿಸುತ್ತದೆ
ಸೇತುವೆ ಸ್ಲಾಬ್‌ ಕೆಲವೆಡೆ ಒಡೆದು ಹೋಗಿದೆ. ಮೇಲಿನಿಂದ ವಾಹನಗಳು ಸಂಚರಿಸುವಾಗ ಸೇತುವೆಯ ಕೆಳಗಡೆ ನಿಂತರೆ ಗಡ ಗಡ ಎನ್ನುವ ಶಬ್ದ ಕೇಳುತ್ತದೆ.

ಈ ಸೇತುವೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದ ಸಂಪರ್ಕ ಕಲ್ಪಿಸುತ್ತಿದೆ. ದಿನನಿತ್ಯ ಈ ಸೇತುವೆ ಮೂಲಕ ನೂರಾರು ಭಕ್ತರು, ಉತ್ಸವಾದಿ ಸಮಯದಲ್ಲಿ ಸಾವಿರಾರು ಭಕ್ತರು, ಗ್ರಾಮಸ್ಥರು ತೆರಳುತ್ತಾರೆ.

ಸುಮಾರು 25 ವರ್ಷಗಳ ಹಿಂದೆ ತೊಡಿಕಾನ ಗ್ರಾಮದವರ ಬಹುಕಾಲದ ಬೇಡಿಕೆಯಂತೆ ಪಯಸ್ವಿನಿ ಹೊಳೆಗೆ ಅರಂತೋಡು ಸಮೀಪ ಸೇತುವೆ ನಿರ್ಮಾಣ ಮಾಡಲಾಯಿತು. ಇದು ತೊಡಿಕಾನ – ಅರಂತೋಡು ಗ್ರಾಮ ಸಂಪರ್ಕಕ್ಕೆ ವರದಾನವಾಗಿ ಪರಿಣಮಿಸಿತು.

ದೋಣಿ ಮೂಲಕ ಸಂಚಾರ
ಅರಂತೋಡಿನಲ್ಲಿ ಪಯಸ್ವಿನಿ ಹೊಳೆಗೆ ಸೇತುವೆ ನಿರ್ಮಾಣವಾಗುವುದಕ್ಕೆ ಮೊದಲು ತೊಡಿಕಾನ ಗ್ರಾಮದವರು ಹಾಗೂ ಅರಂತೋಡು ಭಾಗದ ಜನರು ಈ ಹೊಳೆಯನ್ನು ಮಳೆಗಾಲದಲ್ಲಿ ದೋಣಿ ಮೂಲಕ ದಾಟಿಕೊಂಡು ಬರುತ್ತಿದ್ದರು. ತೊಡಿಕಾನ ಗ್ರಾಮದವರು ಆ ಸಮಯದಲ್ಲಿ ಅರಂತೋಡು ಸಹಕಾರಿ ಬ್ಯಾಂಕ್‌ನಿಂದ ರೇಷನ್‌ ಅನ್ನು ಹೊಳೆಯ ಮೂಲಕ ತಲೆ ಹೊರೆಯಲ್ಲಿ ಹೊತ್ತುಕೊಂಡು ದೋಣಿ ಮೂಲಕ ಸಾಗುತ್ತಿದ್ದರು.

ಈ ಸೇತುವೆ ಅರಂತೋಡು- ತೊಡಿಕಾನ ಸಂಪರ್ಕದ ಅತ್ಯಗತ್ಯ ಸೇತುವೆಯಾಗಿದ್ದು, ಸೇತುವೆ ಕುಸಿದರೆ ಎರಡು ಗ್ರಾಮಗಳ ಸಂಪರ್ಕಕ್ಕೆ ಸಮಸ್ಯೆಯಾಗಲಿದ್ದು, ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತತ್‌ಕ್ಷಣ ಗಮನಹರಿಸಿ ಅರಂತೋಡು-ತೊಡಿಕಾನ ಸಂಪರ್ಕದ ಪಯಸ್ವಿನಿ ಹೊಳೆಗೆ ನಿರ್ಮಿಸಲಾದ ಸೇತುವೆ ಶಿಥಿಲಗೊಂಡಿದೆ. ಸಂಬಂಧಪಟ್ಟ ಇಲಾಖೆ ತತ್‌ಕ್ಷಣ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಅಪಾಯ ಎದುರಾಗುವ ಸಾಧ್ಯತೆ ಇದೆ.
 - ತಾಜುದ್ದೀನ್‌ಅರಂತೋಡು, ಸ್ಥಳಿಯರು

ಪತ್ರ ಬರೆಯುತ್ತೇವೆ
ಸೇತುವೆಯ ಪಿಲ್ಲರ್‌ಗಳಿಗೆ ಹಾನಿಯಾಗಿರುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯುತ್ತೇವೆ. ಈ ಸೇತುವೆ ಅರಂತೋಡು ಮತ್ತು ತೊಡಿಕಾನ ಗ್ರಾಮಗಳ ಸಂಪರ್ಕದ ಕೊಂಡಿಯಾಗಿದೆ.
– ಶಿವಾನಂದ ಕುಕ್ಕುಂಬಳ ಉಪಾಧ್ಯಕ್ಷರು, ಅರಂತೋಡು ಗ್ರಾಮ ಪಂಚಾಯತ್‌

– ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.