ಕಪಟ ಎಡ-ಐಕ್ಯರಂಗಕ್ಕೆ ಜನ ಉತ್ತರ ನೀಡಿ: ರವೀಶ ತಂತ್ರಿ


Team Udayavani, Mar 30, 2019, 6:30 AM IST

kapata

ಹೊಸಂಗಡಿ: ದೇಶದಲ್ಲಿ ಮೋದಿ ಮತ್ತೆ ಪ್ರಧಾನಿ ಪಟ್ಟ ಏರುವಾಗ ಒಂದು ಮೆಟ್ಟಿಲು ಈ ಕಾಸರಗೋಡು ಲೋಕಸಭಾ ಕ್ಷೇತ್ರವಾಗಲಿದೆ. ಕೇರಳದಲ್ಲಿ ಪರಸ್ಪರ ಕಚ್ಚಾಡುವ ಎಡರಂಗದ ಪ್ರಧಾನಿ ಅಭ್ಯರ್ಥಿ ರಾಹುಲ್‌ ಗಾಂಧಿಯಾಗಿರುವಾಗ ಕೇರಳದಲ್ಲಿ ಈ ಎರಡು ಒಕ್ಕೂಟ ಸ್ಪರ್ಧಿಸುವ ಔಚಿತ್ಯ ಏನು ಎಂದು ಬಿಜೆಪಿ ಕಾಸರಗೋಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ರವೀಶ ತಂತ್ರಿ ಪ್ರಶ್ನಿಸಿದರು.

ಜನತೆಯ ಆಶೀರ್ವಾದ ಇದ್ದರೆ ತಂತ್ರಿ ಮಂತ್ರಿಯಾದರೂ ಅಚ್ಚರಿ ಪಡಬೇಕಿಲ್ಲ ಎಂದು ಅವರು ಗೆಲುವಿನ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೈವಳಿಕೆ, ಎಣ್ಮಕಜೆ ಪಂಚಾಯತ್‌ಗಳಲ್ಲಿ ಜಂಟಿ ಆಡಳಿತ ನಡೆಸುವ ಎಡರಂಗ, ಐಕ್ಯರಂಗಕ್ಕೆ ರಾಜಕೀಯ ನೈತಿಕತೆ ಇಲ್ಲ ಎಂದು ಅವರು ಆರೋಪಿಸಿದರು.

ಮಂಜೇಶ್ವರ ವಿಧಾನಸಭಾ ವ್ಯಾಪ್ತಿಯಲ್ಲಿ ನಡೆದ ಚುನಾವಣಾ ಪ್ರಚಾರ ಮತಯಾಚನೆ ಯಲ್ಲಿ ವಿವಿಧ ಕಡೆ ಅವರು ಮತಯಾಚಿಸಿ ಮಾತನಾಡಿದರು.
ಪೆರ್ಲದಲ್ಲಿ ಬಿಜೆಪಿ ಹಿರಿಯ ನೇತಾರ ಟಿ.ಆರ್‌.ಕೆ. ಭಟ್‌ ಅವರ ಮನೆಯಿಂದ ಪ್ರಚಾರ ಆರಂಭಿಸಿ ಪೆರ್ಲ ಪೇಟೆ, ಸೀತಾಂಗೋಳಿ, ಪೆರ್ಮುದೆ, ಬಾಯಾರುಪದವು, ಮೀಯಪದವು, ಮಜೀರ್ಪಳ್ಳ, ಹೊಸಂಗಡಿ, ಮಲಂಗೈ ಪೇಟೆಗಳಲ್ಲಿ ವಿವಿಧ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸಿದರು.

ಮಂಡಲಾಧ್ಯಕ್ಷ ಸತೀಶ್ಚಂದ್ರ ಭಂಡಾರಿ ಕೆ., ಪ್ರಧಾನ ಕಾರ್ಯದರ್ಶಿ ಆದರ್ಶ್‌ ಬಿ.ಎಂ., ಎಂ. ಮುರಳೀಧರ್‌ ಯಾದವು, ಮುಖಂಡರಾದ ಪುಷ್ಪಾ ಅಮ್ಮೆಕಳ, ರೂಪವಾಣಿ ಭಟ್‌, ಸುಬ್ರಹ್ಮಣ್ಯ ಭಟ್‌, ಹರಿಶ್ಚಂದ್ರ ಎಂ., ಮಣಿಕಂಠ ರೈ, ಸತ್ಯಶಂಕರ ಭಟ್‌, ಗೋಪಾಲ್‌ ಶೆಟ್ಟಿ ಅರಿಬೈಲ್‌, ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ್‌, ಪ್ರಜಿತ್‌, ಚಂದ್ರಕಾಂತ್‌, ಧನರಾಜ್‌, ಸುಮಿತ್‌ ರಾಜ್‌, ವಲ್ಸ್‌ ರಾಜ್‌, ಸದಾಶಿವ ಚೇರಲ್‌ ಮೊದಲಾದವರು ಅವರ ಜತೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಂಬಾರು ಸದಾಶಿವ ದೇವಸ್ಥಾನ, ಮಂಜೇಶ್ವರ ಅನಂತೇಶ್ವರ ದೇವಸ್ಥಾನ, ಬಜಕೂಡ್ಲು ದೇವಸ್ಥಾನಗಳಿಗೆ ಭೇಟಿ ನೀಡಿದರು ಹಾಗೂ ವರ್ಕಾಡಿಯಲ್ಲಿ ಹಾಗೂ ಮಂಜೇಶ್ವರ ಹೊಸಬೆಟ್ಟುನಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆಯನ್ನು ನೆರವೇರಿಸಿದರು.

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನಿವಾಸಕ್ಕೆ ಭೇಟಿ ನೀಡಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಂದಿಸಿ, ಕನ್ನಡದ ಉಳಿಯುವಿಕೆಗೆ ಸಂಕಲ್ಪಗೈದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.