ವಿದೇಶಕ್ಕೆ ತೆರಳುವ ಕಾಸರಗೋಡಿನ ಯುವಕನ ಮೂಲಕ ಮಾದಕವಸ್ತು ಸಾಗಿಸಲೆತ್ನ : ಓರ್ವನ ವಿರುದ್ಧ ಕೇಸು


Team Udayavani, May 21, 2019, 4:21 PM IST

purse

ಬ್ರೌನ್ ಶುಗರ್ ಇದ್ದ ಪರ್ಸ್

ಬದಿಯಡ್ಕ: ವಿದೇಶಕ್ಕೆ ತೆರಳುವ ಯುವಕನ ಮೂಲಕ ಉಪಾಯದಿಂದ ಮಾದಕ ವಸ್ತು ಕಳುಹಿಸಿ ಕೊಡಲೆತ್ನಿಸಿದ ಘಟನೆ ಪೆರ್ಲ ಬಳಿ ನಡೆದಿದೆ. ಈ ಬಗ್ಗೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆಗೆ ಚಾಲನೆ ನೀಡಿದ್ದಾರೆ.ಪ್ರಕರಣ ಸಂಬಂಧ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ.

ಪೆರ್ಲ ಬಳಿಯ ಅಮೆಕ್ಕಳ ನಿವಾಸಿ ಸೂಫಿ ಎಂಬವರು ನೀಡಿದ ದೂರಿನಂತೆ ಅಮೆಕ್ಕಳ ನಿವಾಸಿಯಾಗಿರುವ ಔಹಾರ್‌ ಎಂಬಾತನ ವಿರುದ್ಧ ಕೇಸು ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸೂಫಿಯವರ ಪುತ್ರ ಕಬೀರ್‌ ಪಿ.ಕೆ. ರಜಾ ಅವಧಿಯ ಬಳಿಕ ನಿನ್ನೆ ಮತ್ತೆ ಕತಾರ್ ಗೆ ತೆರಳಿದ್ದಾರೆ. ಇವರು ಕತಾರ್ ಗೆ ತೆರಳುವುದನ್ನರಿತು ಅಮೆಕ್ಕಳದ ಔಹಾರ್‌ ನಿನ್ನೆ ಬೆಳಿಗ್ಗೆ ಕಬೀರ್‌ನನ್ನು ಭೇಟಿಯಾಗಿ ಅವರಲ್ಲಿ ಒಂದು ಡೈರಿ ನೀಡಿದ್ದು, ಅದನ್ನು ಕತಾರ್ ನಲ್ಲಿರುವ ಖಬೀರ್‌ನ ಅಣ್ಣನಿಗೆ ನೀಡುವಂತೆ ತಿಳಿಸಿದ್ದನು. ಕಬೀರ್‌ ಕತಾರ್ ಗೆ ಕೊಂಡೊಯ್ಯಲಿರುವ ಸಾಮಾಗ್ರಿಗಳನ್ನು ಸಿದ್ಧ ಪಡಿಸುತ್ತಿದ್ದಾಗ ಔಹರ್‌ ನೀಡಿದ ಡೈರಿಯನ್ನು ಮನೆಯವರು ತೆರೆದು ನೋಡಿದ್ದು, ಈ ವೇಳೆ ಅದರ ಪುಟಗಳೆಡೆಯಲ್ಲಿ ಬಿಳಿ ಹುಡಿಯನ್ನು ಅಂಟಿಸಿರುವುದು ಕಂಡುಬಂದಿದೆ. ಅದನ್ನು ಪರಿಶೀಲಿಸಿದಾಗ ಅದು ಮಾದಕ ವಸ್ತುವಾದ ಬ್ರೌನ್‌ ಶುಗರ್‌ ಎಂದು ತಿಳಿದು ಬಂತು. ಈ ಮಧ್ಯೆ ಕಬೀರ್‌ ನಿನ್ನೆ ಸಂಜೆ ಕತಾರ್ ಗೆ ತೆರಳಿದ್ದಾರೆ. ಡೈರಿಯಲ್ಲಿ ಅಂಟಿಸಿರುವುದು ಬ್ರೌನ್‌ ಶುಗರ್‌ ಆಗಿರುವುದರಿಂದ ಡೈರಿಯನ್ನು ಅವರು ಕೊಂಡೊಯ್ಯಲಿಲ್ಲ. ಕಬೀರ್‌ ಗಲ್ಫ್ ಗೆ ತೆರಳಿದ ಬಳಿಕ ಅವರ ತಂದೆ ಸೂಫಿ ಬ್ರೌನ್‌ ಶುಗರ್‌ ಒಳಗೊಂಡ ಡೈರಿಯನ್ನು ಬದಿಯಡ್ಕ ಠಾಣೆಗೆ ಕೊಂಡೊಯ್ದು ಘಟನೆ ಬಗ್ಗೆ ದೂರು ನೀಡಿದ್ದಾರೆ.

ಇದರಂತೆ ಔಹರ್‌ನ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಔಹರ್‌ನ ಪತ್ತೆಗಾಗಿ ಪೊಲೀಸರು ಆತನ ಮನೆಗೂ ದಾಳಿ ನಡೆಸಿದ್ದು, ಆದರೆ ಆತ ಪತ್ತೆಯಾಗಲಿಲ್ಲ. ಆತನಿಗಾಗಿ ಶೋಧ ಮುಂದುವರಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.