ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ


Team Udayavani, May 31, 2023, 6:30 AM IST

ಆದೂರಿನ ಮನೆಯ ಮೇಲೆ ಪೊಲೀಸರ ದಾಳಿ: ಬೃಹತ್‌ ಪ್ರಮಾಣದ ಸ್ಫೋಟಕ ವಸ್ತು ವಶಕ್ಕೆ

ಕಾಸರಗೋಡು: ಅಬಕಾರಿ ಇಲಾಖೆಯ ವಿಶೇಷ ತಂಡ ಮತ್ತು ಆದೂರು ಪೊಲೀಸರು ಮಂಗಳ ವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕಾರು ಮತ್ತು ಮನೆಯೊಂದರಿಂದ ಬೃಹತ್‌ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮುಳಿಯಾರು ಪಂಚಾಯತ್‌ನ ಕೆಟ್ಟುಂಗಲ್‌ ಕೋಲಾಚಿಯಡ್ಕದ ಮೊಹಮ್ಮದ್‌ ಮುಸ್ತಫ (30) ಎಂಬಾತನನ್ನು ಬಂಧಿಸಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸ್ಫೋಟಕ ವಸ್ತುಗಳಲ್ಲಿ ಸುಮಾರು 2,800 ಜಿಲೆಟಿನ್‌ ಸ್ಟಿಕ್‌, 6 ಸಾವಿರ ಡಿಟೋನೇಟರ್‌ ಮತ್ತು 300 ಏರ್‌ ಕ್ಯಾಪ್‌ ಒಳಗೊಂಡಿವೆ. ಆದೂರು ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು ಎಕ್ಸೈಸ್‌ ಎನ್‌ಫೋರ್ಸ್‌ಮೆಂಟ್‌ ಆ್ಯಂಡ್‌ ಆ್ಯಂಟಿ ನಾರ್ಕೋಟಿಕ್ಸ್‌ ಸ್ಪೆಷಲ್‌ ಸ್ಕ್ವಾಡ್‌ನ‌ ಸರ್ಕಲ್‌ ಇನ್‌ಸ್ಪೆಕ್ಟರ್‌ ಶಂಕರ್‌ ಜಿ.ಎ. ನೇತೃತ್ವದ ತಂಡ ಮಾದಕ ವಸ್ತು ಸಾಗಾಟ ಸಂಬಂಧ ಚೆರ್ಕಳ ಕೆಟ್ಟುಂಗಲ್‌ನ ಕೋಲಾಚಿಯಡ್ಕದಲ್ಲಿ ಸೋಮವಾರ ರಾತ್ರಿ ವಾಹನ ತಪಾ ಸಣೆಯಲ್ಲಿ ತೊಡ ಗಿದ್ದಾಗ ಆ ದಾರಿಯಲ್ಲಿ ಬಂದ ಡಸ್ಟರ್‌ ಕಾರನ್ನು ತಡೆದು ನಿಲ್ಲಿಸಿ ತಪಾ ಸಣೆ ಗೊಳಪಡಿಸಿದಾಗ ಸ್ಫೋಟಕ ಪತ್ತೆಯಾಯಿತು. ಕಾರಿನಲ್ಲಿದ್ದ ಮೊಹಮ್ಮದ್‌ ಮುಸ್ತಫ ನನ್ನು ತತ್‌ಕ್ಷಣ ಕಾರು ಸಹಿತ ವಶಕ್ಕೆ ತೆಗೆದುಕೊಳ್ಳ ಲಾಯಿತು. ಅನಂತರ ಆದೂರು ಪೊಲೀಸರ ನೆರವಿ ನೊಂದಿಗೆ ಆರೋಪಿಯ ಮನೆಗೆ ತೆರಳಿ ಪರಿಶೀಲಿಸಿ ಅಲ್ಲಿಂದಲೂ ಬೃಹತ್‌ ಪ್ರಮಾಣದ ಸ್ಫೋಟಕ ವಶಪಡಿಸಿಕೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಅಬಕಾರಿ ಸ್ಪೆಷಲ್‌ ಸ್ಕ್ವಾಡ್‌ನ‌ ಇನ್‌ಸ್ಪೆಕ್ಟರ್‌ ರಾಧಾಕೃಷ್ಣನ್‌ ಪಿ.ಜೆ, ಪ್ರಿವೆಂಟಿವ್‌ ಆಫೀಸರ್‌ಗಳಾದ ಸುರೇಶ್‌ ಬಾಬು ಕೆ, ಉಣ್ಣಿಕೃಷ್ಣನ್‌ ಕೆ, ಸಿವಿಲ್‌ ಎಕ್ಸೈಸ್‌ ಅಧಿಕಾರಿಗಳಾದ ಅಜೇಶ್‌ ಕೆ., ಹಮೀದ್‌ ಎಂ., ಅಬಕಾರಿ ವಾಹನ ಚಾಲಕ ದಿಜಿತ್‌ ಪಿ.ವಿ. ಮತ್ತು ಕ್ರಿಸ್ಟಿನ್‌ ಎ.ಎ. ಮೊದಲಾದವರಿದ್ದರು.

ನರ ಕತ್ತರಿಸಿ ಆಸ್ಪತ್ರೆ ಸೇರಿದ ಆರೋಪಿ!
ಬಂಧಿತ ಆರೋಪಿ ಮೊಹಮ್ಮದ್‌ ಮುಸ್ತಫನನ್ನು ಆತನ ಮನೆಗೆ ಕರೆದೊಯ್ದು ಅಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತನ್ನ ಕೈಯ ನರವನ್ನು ಕತ್ತರಿಸಿಕೊಂಕು ಆತ್ಮಹತ್ಯೆ ಯತ್ನಿಸಿದನು. ಪೊಲೀಸರು ಆತನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕರ್ನಾಟಕದ ಕಗ್ಗಲ್ಲು ಕೋರೆಗೆ ಪೂರೈಸಲು ತಾನು ಈ ಸ್ಫೋಟಕ ವಸ್ತುಗಳನ್ನು ತಂದಿದ್ದೇನೆಂದು ಆತ ವಿಚಾರಣೆ ವೇಳೆ ಪೊಲೀಸರಲ್ಲಿ ಹೇಳಿದ್ದಾನೆ. ಆದರೆ ಕರ್ನಾಟಕಕ್ಕೆ ಸಾಗಿಸುವ ಮಾಲನ್ನು ತನ್ನ ಮನೆಯಲ್ಲಿ ತಂದಿರಿಸಿರುವುದರ ಉದ್ದೇಶವಾದರೂ ಏನು ಎಂಬ ಪ್ರಶ್ನೆಗೆ ಉತ್ತರ ಲಭಿಸಿಲ್ಲ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.