ಅಚ್ಚರಿ ಮೂಡಿಸಿದ ಪೊಲೀಸ್‌ ಡಾಗ್‌ ಸ್ಕ್ವಾಡ್‌ ಜಾಣ್ಮೆ


Team Udayavani, Apr 14, 2018, 9:25 AM IST

Squad-13-4.jpg

ಬದಿಯಡ್ಕ: ನವಜೀವನ ಪ್ರೌಢ ಶಾಲೆ ಬದಿಯಡ್ಕದಲ್ಲಿ ಪ್ರಾರಂಭವಾಗಿರುವ ಸ್ಕೂಲ್‌ ಪೊಲೀಸ್‌ ಕೆಡೆಟ್‌ ಕಾಸರಗೋಡು ಜಿಲ್ಲಾ ಶಿಬಿರ ಸರ್ಗ ಕಾಹಳಂ-2018 ವಿವಿಧ ಉಪಯುಕ್ತ ಮಾಹಿತಿ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮುಂದುವರಿಯುತ್ತಿದೆ. ಅಜಿತ್‌ ಕುಮಾರ್‌ ಕಳನಾಡು ಅವರು ವ್ಯಕ್ತಿತ್ವ ವಿಕಸನ ತರಗತಿಯಲ್ಲಿ ಪ್ರಕೃತಿ ಹಾಗೂ ತಂದೆ ತಾಯಂದಿರು ಹಾಗೂ ಹಿರಿಯರನ್ನು ಗೌರವದಿಂದ ಹಾಗೂ ಪ್ರೀತಿಯಿಂದ ಕಾಣಬೇಕು, ಹಿರಿಯರಿಗೆ ತೋರುವ ಗೌರವ ನಮ್ಮ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಹೇಳಿದರು. ಈ ಶಿಬಿರದಲ್ಲಿ ಅತ್ಯಂತ ಕ್ರಿಯಾತ್ಮಕವಾಗಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡಲಾಯಿತು.

ಅಜಾಗರೂಕತೆ ಹಾಗೂ ಸ್ಪರ್ಧಾ ತ್ಮಕವಾದ ವೇಗ ಉಂಟು ಮಾಡುವ ಅನಾಹುತಗಳ ಬಗ್ಗೆ ಮೋಟಾರ್‌ ವೆಹಿಕಲ್ಸ್‌ ಇನ್‌ಸ್ಪೆಕ್ಟರ್‌ ಪ್ರಸಾದ್‌ ಮಾಹಿತಿ ಒದಗಿಸಿದರು. ಸಾರಿಗೆ ನಿಯಮಗಳು, ಸೀಟ್‌ ಬೆಲ್ಟ್ ಹಾಗೂ ಹೆಲ್ಮೆಟ್‌ಗಳ ಅಗತ್ಯವನ್ನು ಸರಳವಾಗಿ, ಸುಲಭದಲ್ಲಿ ಮನದಟ್ಟಾಗುವಂತೆ ವಿವರಿಸಿದರು. ಅಂತೆಯೇ ಪೊಲೀಸ್‌ ಚೆಕ್ಕಿಂಗ್‌ನ ಅಗತ್ಯ ಹಾಗೂ ಚಾಲಕರ ಸಹಕಾರದ ಮಹತ್ವವನ್ನು ವಿವರಿಸಿದರು. ವಾಹನ ಚಲಾವಣೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ವೇಗ ನಿಯಂತ್ರಣದ ಕುರಿತಾದ ಮಾಹಿತಿಯನ್ನು ನೀಡಿದರು. ಆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಯುವಜನಾಂಗ ಎದುರಿಸುವ ಸಮಸ್ಯೆಗಳು ಹಾಗೂ ಮಾಧ್ಯಮಗಳ ಸ್ವಾಧೀನತೆಯು ಎಂಬ ವಿಷಯದ ಕುರಿತು ಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ಶ್ರೀನಾಥ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಮೊಬೈಲ್‌ ಮೊದಲಾದ ಇಲೆಕ್ಟ್ರೋನಿಕ್‌ ಮಾಧ್ಯಮಗಳ ದುರುಪಯೋಗ ಹಾಗೂ ಅಪ್ರಾಪ್ತರಲ್ಲಿ ಅದು ಸೃಷ್ಟಿಸುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಸೈಬರ್‌ ಮತ್ತು ಇತರ ಮೋಸದ ಜಾಲದ ಬಗ್ಗೆ ಮಕ್ಕಳಲ್ಲಿ ಎಚ್ಚರ ಮೂಡಿಸಲಾಯಿತು. ಯುವಜನರು ಎದುರಿಸುವ ಖನ್ನತೆ ಹಾಗೂ ಮಾನಸಿಕ ವಿಭ್ರಾಂತಿಯಿಂದ ಹೇಗೆ ದೂರ ಉಳಿಯಬಹುದು ಇಲ್ಲವೇ ಹೊರಬರಬಹುದು ಎಂಬ ವಿಷಯದ ಕುರಿತು ಡಾ| ಕೃಷ್ಣ ಹಾಗೂ ಡಾ| ಸುನಿಲ್‌ ಮಾಹಿತಿ ನೀಡಿದರು. ಮಕ್ಕಳಲ್ಲಿ ಉಂಟಾಗುವ ಮಾನಸಿಕ ತೊಂದರೆಗಳು, ಖನ್ನತೆ, ಸ್ವಭಾವ ರೂಪೀಕರಣದ ಮೇಲೆ ಇದರಿಂದಾಗುವ ಪರಿಣಾಮಗಳ ಕುರಿತು ಸ್ಪಷ್ಟ ಮಾಹಿತಿಯನ್ನು ನೀಡಲಾಯಿತು.


ಚುರುಕಿನ ಡಾಗ್‌ ಸ್ಕ್ವಾಡ್‌

ಕಾಸರಗೋಡು ಡಾಗ್‌ ಸ್ಕ್ವಾಡ್‌ ನ‌ ನಾಲ್ಕು ಪೊಲೀಸ್‌ ನಾಯಿಗಳ ಉಪ ಸ್ಥಿತಿಯು ಶಿಬಿರಾರ್ಥಿಗಳಿಗೆ ನೂತನ ಅನುಭವ ನೀಡಿತು. ಕೇರಳ ರಾಜ್ಯ ಚಿನ್ನದ ಪದಕ ವಿಜೇತ ಬಸ್ಸಿ, ರೂನಿಗಳೆಂಬ ನಾಯಿಗಳ ಅನ್ವೇಷಣಾ ರೀತಿಗಳು, ಅಪರಾಧಿಗಳನ್ನು ಗುರುತಿಸುವಲ್ಲಿ ತೋರುವ ಜಾಣ್ಮೆ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತು. ನಾಯಿಗಳ ಪೆರೇಡ್‌ ಕೂಡ ಕುತೂಹಲಕಾರಿಯಾಗಿತ್ತು. ಒಟ್ಟಿನಲ್ಲಿ ಮಾಹಿತಿ ಪೂರ್ಣ ಹಾಗೂ ಸ್ಮರಣೀಯ ಶಿಬಿರವಾಗಿ ಸರ್ಗ ಕಾಹಳಂ-2018 ಮುಂದುವರಿಯುತ್ತಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.