ಕಳಪೆ ಕಾಮಗಾರಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಹೊಂಡ ಸೃಷ್ಟಿ


Team Udayavani, Jul 19, 2017, 5:00 AM IST

Kumble-18-7.jpg

ಕುಂಬಳೆ: ತಲಪ್ಪಾಡಿ ಕಾಸರಗೋಡು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಲ್ಲಲ್ಲಿ ಹೊಂಡ ಸೃಷ್ಟಿಯಾಗುತ್ತಿದೆ. ಕೋಟಿಗಟ್ಟಲೆ ನಿಧಿ ವ್ಯಯಿಸಿದ ಮೆಕ್‌ಡಾಂ ಡಾಮರೀಕರಣ ಕಳಪೆ ಕಾಮಗಾರಿಯಿಂದಲಾಗಿ ರಸ್ತೆ ಬಿರುಕು ಬಿಡುತ್ತಿದೆ. ರಸ್ತೆಯ ಮೇಲ್ಪದರ ಎದ್ದು ರಸ್ತೆ ಕೆಡುತ್ತಿದೆ. ಕೆಲದಿನಗಳಿಂದ ವಿಪರೀತ ಮಳೆ ಸುರಿದ ಕಾರಣ ರಸ್ತೆಯಲ್ಲಿ ಹೊಂಡವಾಗಿದೆ ಎಂಬುದಾಗಿ ಇಲಾಖೆಯವರು ಮತ್ತು ಗುತ್ತಿಗೆದಾರರು ಇದೀಗ ಸಬೂಬು ನೀಡುತ್ತಿದ್ದರೂ ಕಳಪೆ ಕಾಮಗಾರಿಯಿಂದ ರಸ್ತೆ ಕೆಡುತ್ತಿದೆ ಎಂಬುದು ಸತ್ಯವಾಗಿದೆ.

ಸಾಕಷ್ಟು ಡಾಮರು ಮಿಶ್ರಣದ ಕೊರತೆ, ಸಕಾಲದಲ್ಲಿ ಕಾಮಗಾರಿ ಪೂರೈಸದೆ ಮಳೆ ಸುರಿಯುತ್ತಿರುವಾಗಲೇ ಕಾಮಗಾರಿ ನಡೆಸಿದ ಫಲದಿಂದ ರಸ್ತೆ ಬೇಗನೆ ಕೆಡಲು ಕಾರಣವಾಗಿದೆ. ದಿನದಿಂದ ದಿನಕ್ಕೆ ರಸ್ತೆಯಲ್ಲಿ ಹೊಂಡಗಳ ಸಂಖ್ಯೆ ಅಧಿಕವಾಗಿ ಸಂಚಾರಕ್ಕೆ ತೊಡಕಾಗಲಿದೆ. ಇನ್ನು ಈ ರಸ್ತೆಯ ಹೊಂಡ ಮುಚ್ಚಲು ಲಕ್ಷಗಟ್ಟಲೆ ನಿಧಿಯಲ್ಲಿ ಪೀಸ್‌ ವರ್ಕಿನ ಮೂಲಕ ಪ್ಯಾಚ್‌ ವರ್ಕ್‌ ಯೋಜನೆ ತಯಾರಿಸಿ ಮತ್ತೆ ಈ ರಸ್ತೆಯ ಹೊಂಡ ಮುಚ್ಚಲಿದೆ.


ಆದರೆ ಸರಕಾರದಿಂದ ಕೋಟಿಗಟ್ಟಲೆ ನಿಧಿ ಬಳಸಿದ ಆರಂಭದ ಕಾಮಗಾರಿಯ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲು ಜನರಿಂದ ಮತ ಪಡೆದು ಚುನಾಯಿತರಾದ ಪ್ರತಿನಿಧಿಗಳಿಗೆ ಸಮಯ ಸಿಗುವುದಿಲ್ಲ. ಗುತ್ತಿಗೆದಾರರ ಕಾಂಚಾಣಕ್ಕೆ ಕೈ ಒಡ್ಡಿದ ಅಥವಾ ತಮ್ಮ ಪಕ್ಷಕ್ಕೆ ನಿಧಿ ಸಂಗ್ರಹಿದ ದಾಕ್ಷಿಣ್ಯದಲ್ಲಿ ಕರಾರುದಾರರ ಕಳಪೆ ಕಾಮಗಾರಿಗೆ ತಲೆಬಾಗಲೇ ಬೇಕಾಗುವುದು ಕೆಲ ಚುನಾಯಿತರಿಗೆ ಅನಿವಾರ್ಯವಾಗುವುದು. ಸಾರ್ವಜನಿಕರು ಕಾಮಗಾರಿ ಕಳಪೆಯಾಗಿದೆ ಎಂಬುದಾಗಿ ಇಲಾಖೆಯ ಉನ್ನತ ಅಧಿಕಾರಿಗಳಿಗಾಗಲಿ ವಿಜಿಲೆನ್ಸ್‌ ಇಲಾಖೆಗೆ ದೂರು ಸಲ್ಲಿಸಿದರೂ ಅಧಿಕಾರಿಗಳು ಕಳ್ಳರಿಗೆ ಬೆಳಕು ನೀಡುವ ಸಂಪ್ರದಾಯವೇ ಹೆಚ್ಚಾಗಿ ಇಲ್ಲಿ ನಡೆಯುವುದು.

ಗುತ್ತಿಗೆದಾರರ ಪರವಾದ ತೀರ್ಪಿನಿಂದ ಕಳಪೆ ಕಾಮಗಾರಿ ಸದಾ ಮುಂದುವರಿಯುವುದು. ಆದುದರಿಂದ ಇದೀಗ ಸಾರ್ವಜನಿಕರಿಂದ ದೂರು ವಿರಳವಾಗುತ್ತಿದೆ. ಇದರಿಂದಲಾಗಿ ವರ್ಷಂಪ್ರತಿ ಸರಕಾರದ ಅದೆಷ್ಟೋ ಕೋಟಿಗಟ್ಲೆ ರಾಷ್ಟ್ರೀಯ ನಿಧಿ ಪೋಲಾಗುವುದು. ಇದನ್ನು ಯಾವ ಸರಕಾರ ಅಧಿಕಾರಕ್ಕೇರಿದರೂ ತಡೆಯಲು ಸಾಧ್ಯವಾಗುತ್ತಿಲ್ಲ. ಜನರು ಇನ್ನಷ್ಟು ಜಾಗೃತರಾಗದಷ್ಟು ಕಾಲ ಕಳಪೆ ಕಾಮಗಾರಿಗೆ ಶಾಶ್ವತ ಪರಿಹಾರವೆಂಬುದಿಲ್ಲ.

ಚಿತ್ರ:ವಿದ್ಯಾ ಸ್ಟುಡಿಯೊ ಪೈವಳಿಕೆ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.