ರೈಲು ಮಾರ್ಗ ವಿರೋಧಿಸುವವರ ವಿರುದ್ಧ ಹೋರಾಟ : ಎಚ್ಚರಿಕೆ


Team Udayavani, Mar 17, 2018, 11:30 AM IST

OKKALIGA-16-3.jpg

ಮಡಿಕೇರಿ: ಕೊಡಗಿನಲ್ಲಿ ರೈಲು ಮಾರ್ಗ ಮತ್ತು ಹೆದ್ದಾರಿ ವಿಸ್ತರಣೆ ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸುವವರ ಅಭಿವೃದ್ಧಿ ವಿರೋಧಿ ಮನೋಸ್ಥಿತಿಯ ಪರಿಸರವ್ಯಾದಿಗಳು ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಒಕ್ಕಲಿಗರ ಸಂಘ, ಯೋಜನೆಗಳಿಗೆ ತಡೆಯೊಡ್ಡುವವರ ವಿರುದ್ಧ ತೀವ್ರ ರೀತಿಯ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಜಿಲ್ಲಾ ಒಕ್ಕಲಿಗರ ಸಂಘಧ ಅಧ್ಯಕ್ಷ ಎಸ್‌.ಎಂ.ಚೆಂಗಪ್ಪ ಮಾತನಾಡಿ, ಕೊಡಗಿಗೆ ರೈಲು ಮಾರ್ಗ ಬರುವುದನ್ನುಶೇಕಡಾ 90ಕ್ಕೂ ಹೆಚ್ಚುಜನ ಸ್ವಾಗತಿಸುತ್ತಿದ್ದಾರೆ. ಆದರೆ ಪರಿಸರವಾದಿಗಳು ಹಾಗೂ ಅವರೊಂದಿಗೆ ಕೈಜೋಡಿಸಿರುವ ಕೆಲವರು ವಿನಾಕಾರಣ ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು. ರೈಲ್ವೆ ಯೋಜನೆ ಪರ ಇರುವವರೊಂದಿಗೆ ಚರ್ಚೆ ನಡೆಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಂಘ ಕಾರ್ಯ ನಿರ್ವಹಿಸಲಿದೆ. ರೈಲು ಯೋಜನೆ ಬೇಕು ಎನ್ನುವವರು ನಮ್ಮೊಡನೆ ಕೈ ಜೋಡಿಸಲಿ ಎಂದು ಮನವಿ ಮಾಡಿದರು.

ಸಂಘದ ನಿರ್ದೇಶಕ ವಿ.ಪಿ.ಶಶಿಧರ್‌ ಮಾತನಾಡಿ, ರೈಲು ಮಾರ್ಗವನ್ನು ವಿರೋಧಿಸುತ್ತಿರುವ ಪರಿಸರವ್ಯಾದಿಗಳಿಗೆ ಜಿಲ್ಲೆಯ ಜನ ಬಲ ತುಂಬಲು ಮುಂದಾದರೆ ಮುಂದೊಂದು ದಿನ ಜನತೆಯೇ ತಮ್ಮ ಬಲವನ್ನು ಕಳೆದುಕೊಳ್ಳಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಜನತೆ ಪರಿಸರವ್ಯಾದಿಗಳಷಡ್ಯಂತ್ರಕ್ಕೆಬಲಿಯಾಗಬಾರದು ಎಂದರು.  ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಪರಿಸರವಾದಿಗಳು ಮಾಡಿದರೆ ಇದರ ವಿರುದ್ಧ ಬೃಹತ್‌ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ತಲ್ಚೆàರಿ-ಮೈಸೂರು ರೈಲು ಮಾರ್ಗದ ಯೋಜನೆ ವಿಚಾರದಲ್ಲಿ ದಕ್ಷಿಣ ಕೊಡಗಿನ ಜನರ ಭಾವನೆಗೆ ಗೌರವ ನೀಡುವುದಾಗಿ ಸ್ಪಷ್ಟಪಡಿಸಿದ ಅವರು, ಕುಶಾಲನಗರದವರೆಗೂ ರೈಲು ಮಾರ್ಗ ಬೇಡ ಎನ್ನುವವರ ಸಂಖ್ಯೆ ಹುಟ್ಟಿಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಕೊಡಗಿನ ಅಭಿವೃದ್ಧಿಗೆ ಯಾವ ಯೋಜನೆ ತಂದರೂ ಬೇಡ ಎನ್ನುವವರ ದೊಡ್ಡ ಪರಂಪರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆೆ. ರೈಲು, ಹೆದ್ದಾರಿ ಸೇರಿದಂತೆ ಎಲ್ಲಾ ಅಭಿವೃದ್ಧಿ ಯೋಜನೆಗಳಿಗೂ ವಿರೋಧ ವ್ಯಕ್ತವಾಗುತ್ತಿದೆ. ಕೊಡಗು ಜಿಲ್ಲೆಗೆ ರೈಲು ಮಾರ್ಗವೇ ಬೇಡ ಎನ್ನುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟು ಮಾಡಲಾಗುತ್ತಿದೆ ಎಂದು ಶಶಿಧರ್‌ ಆರೋಪಿಸಿದರು. 

ರೈಲು ಮಾರ್ಗದ ಬೇಡಿಕೆ ಗುಂಡೂರಾವ್‌ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಿಂದಲೂ ಕೇಳಿ ಬರುತ್ತಿದೆ. ರೈಲುಮಾರ್ಗಕ್ಕೆ ಕುಶಾಲನಗರದವರೆಗೂ ಸರ್ವೇ ಕಾರ್ಯವು ನಡೆದಿತ್ತು. ಕೊಡಗಿಗೆ ರೈಲ್ವೆ ಮಾರ್ಗವಾದರೆ ಆದರಿಂದ ಪ್ರವಾಸೋದ್ಯಮಕ್ಕೂಹೆಚ್ಚಿನ ಅನುಕೂಲವಾಗಲಿದೆ. ಆದರೆ ರೈಲು ಮಾರ್ಗವನ್ನು ವಿರೋಧಿಸುವ ಮೂಲಕ ಕೊಡಗನ್ನು ಅಪಖ್ಯಾತಿಗೆ ಗುರಿ ಮಾಡಲಾಗುತ್ತಿದೆ ಎಂದು ಶಶಿಧರ್‌ ಟೀಕಿಸಿದರು. ಕೆಲವು ಪರಿಸರವ್ಯಾದಿಗಳು ಕುಶಾಲನಗರದವರೆಗೂರೈಲು ಮಾರ್ಗ ಬೇಡ ಎಂದು ಹೋರಾಟ ನಡೆಸುತ್ತಿದ್ದಾರೆ. ಇಲ್ಲಿ ಸ್ಥಳೀಯರೇ ರೈಲು ಮಾರ್ಗವನ್ನು ಸ್ವಾಗತಿಸುವಾಗ ಪರಿಸರವಾದಿಗಳು ರೈಲು ಮಾರ್ಗ ವಿರೋಧಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ರೈಲು ಮಾರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಸಮಾನ ಮನಸ್ಕರೊಂದಿಗೆ ಚರ್ಚೆ ನಡೆಸಿಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಕಾರ್ಯವನ್ನು ಕೂಡ ಮಾಡಲಾಗುತ್ತದೆ.ರೈಲು ಮಾರ್ಗವನ್ನು ತಡೆಯುವ ಹುನ್ನಾರವನ್ನು ಪರಿಸರವಾದಿಗಳು ಮುನ್ನಡೆಸಿದ್ದೇ ಆದರೆ ಹೋರಾಟದ ಕಿಚ್ಚು ಹೆಚ್ಚಾಗುತ್ತದೆ ಎಂದರು.  ರೈಲುಮಾರ್ಗ ಬರುವ ಮೊದಲೇ ಕಾವೇರಿ ನದಿ ಮತ್ತು ಮರ ಹನನದ ಕಾರಣ ನೀಡಿ ರೈಲ್ವೆ ಮಾರ್ಗವನ್ನುವಿರೋಧಿಸುವುದು ಸೂಕ್ತವಲ್ಲ. ಪರಿಸರವನ್ನು ಉಳಿಸಲು ಪರಿಸರವಾದಿಗಳು ವೈಜ್ಞಾನಿಕ ಚಿಂತನೆ ಮಾಡಲಿ. ಪರಿಸರಕ್ಕೆ ಹಾನಿಯಾಗದಂತೆಯೋಜನೆ ರೂಪಿಸಲು ಇಂದಿನ ಅಭಿವೃದ್ಧಿಯ ಯುಗದಲ್ಲಿ ಸಾಕಷ್ಟು ವ್ಯವಸ್ಥೆಗಳಿವೆ ಎಂದು ವಿ.ಪಿ.ಶಶಿಧರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ವಿ.ಪಿ.ಸುರೇಶ್‌, ಶಿವಯ್ಯ, ನಿರ್ದೇಶಕ ಪೊನ್ನಪ್ಪ ಹಾಗೂ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ‌ ಎ.ಆರ್‌.ಮುತ್ತಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.