ಸುಳ್ಯಮೆ : ಮಾದಕ ವಸ್ತು ವಿರೋಧಿ ದಿನಾಚರಣೆ
Team Udayavani, Jul 7, 2017, 3:50 AM IST
ಕುಂಬಳೆ: ರೂಪಕಲಾ ಗ್ರಂಥಾಲಯ ಸುಳ್ಯಮೆ ಇದರ ಆಶ್ರಯದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಜರಗಿಸಲಾಯಿತು. ಕಾರ್ಯಕ್ರಮವನ್ನು ವರ್ಕಾಡಿ ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಸಾಮಾನಿ ಉದ್ಘಾಟಿಸಿದರು.
ಕೊಡ್ಲಮೊಗರು ಶ್ರೀ ವಾಣಿವಿಜಯ ವಿದ್ಯಾಲಯದ ಅಧ್ಯಾಪಿಕೆ ಕೃಷ್ಣವೇಣಿ ಬಿ. ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿ ಮಾತನಾಡಿ, ನಮ್ಮ ಮಕ್ಕಳಲ್ಲಿ ಪ್ರೀತಿಯ ಕೊರತೆ, ಮನೆಯಲ್ಲಿ ಹೆತ್ತವರೊಳಗೆ ಕಲಹ, ಪರಸ್ಪರ ಆತ್ಮವಿಶ್ವಾಸದ ಕೊರತೆ ಇರುವ ಮಕ್ಕಳು ಬೇಗನೆ ಮಾದಕ ವಸ್ತುಗಳ ದಾಸರಾಗುತ್ತಾರೆ. ಅಲ್ಲದೆ ವಿವಿಧ ರೀತಿಯ ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ ಎಂಬುದಾಗಿ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರವಾಗಿ ವಿವರಿಸಿದರು. ಗ್ರಂಥಾಲಯದ ಅಧ್ಯಕ್ಷ ಉದಯ ಶೆಟ್ಟಿ, ರೂಪಕಲಾ ಕರ್ಷಕ ಸಮಿತಿಯ ಮಾಜಿ ಅಧ್ಯಕ್ಷ ಮೊಹಮ್ಮದ್ ಎಸ್ ಉಪಸ್ಥಿತರಿದ್ದರು. ಗ್ರಂಥಾಲಯದ ಕಾರ್ಯದರ್ಶಿ ಆಶಾ ದಿಲೀಪ್ ಸ್ವಾಗತಿಸಿದರು. ಉಪಾಧ್ಯಕ್ಷ ರವೀಂದ್ರ ಮಾಂಡೇಲು ವಂದಿಸಿದರು. ಸದಸ್ಯೆ ಫೌಝಿಯಾಬಾನು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ
Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ
Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ