ಪ್ಲಸ್‌ ಟು ಫಲಿತಾಂಶ: ಶೇ. 84.33 ತೇರ್ಗಡೆ


Team Udayavani, May 9, 2019, 6:15 AM IST

puc

ಕಾಸರಗೋಡು: ಮಾರ್ಚ್‌ ತಿಂಗಳಲ್ಲಿ ಪರೀಕ್ಷೆ ನಡೆದ ಕೇರಳ ರಾಜ್ಯ ಪ್ಲಸ್‌ ಟು ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ರಾಜ್ಯದಲ್ಲಿ ಶೇ.84.33 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಶೇ.79.12 ಫಲಿತಾಂಶ ಬಂದಿದೆ.

ರಾಜ್ಯದಲ್ಲಿ ಒಟ್ಟು 3,69,238 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3,11,375 ಮಂದಿ ತೇರ್ಗಡೆಯಾಗಿದ್ದಾರೆ.

ಕಳೆದ ವರ್ಷ ಶೇ.83.75 ಫಲಿತಾಂಶ ಬಂದಿತ್ತು. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಅಧಿಕವಾಗಿದೆ. ಕಲ್ಲಿಕೋಟೆ ಜಿಲ್ಲೆ ಅತ್ಯಂತ ಹೆಚ್ಚು ಫಲಿತಾಂಶ ಪಡೆದಿದೆ. ಈ ಜಿಲ್ಲೆಯಲ್ಲಿ ತೇರ್ಗಡೆಯಾದವರ ವಿದ್ಯಾರ್ಥಿಗಳು ಶೇ.87.44. ಪತ್ತನಂತಿಟ್ಟ ಜಿಲ್ಲೆ ಅತ್ಯಂತ ಕಡಿಮೆ ಫಲಿತಾಂಶ ಪಡೆದಿದೆ. ಈ ಜಿಲ್ಲೆಯಲ್ಲಿ ಕೇವಲ ಶೇ.78 ಮಂದಿ ತೇರ್ಗಡೆಯಾಗಿದ್ದಾರೆ. ರಾಜ್ಯದ 79 ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಸರಕಾರಿ ಶಾಲೆಗಳಲ್ಲಿ ಶೇ. 83.36, ಅನುದಾನಿತ ಶಾಲೆಗಳಲ್ಲಿ ಶೇ. 86.36 ಮತ್ತು ಅನುದನ ರಹಿತ‌ ಶಾಲೆಯಲ್ಲಿ ಶೇ. 77.34 ಫಲಿತಾಂಶ ಬಂದಿದೆ. ರಾಜ್ಯದಲ್ಲಿ 14,244 ವಿದ್ಯಾರ್ಥಿಗಳು ಎಲ್ಲವಿಷಯಗಳಲ್ಲಿ ಎ ಪ್ಲಸ್‌ ಸಾಧನೆ ಮಾಡಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಎ ಪ್ಲಸ್‌ ಸಾಧನೆ ಮಾಡಿದ ವಿದ್ಯಾರ್ಥಿಗಳ ಸಂಖ್ಯೆ 1 795. 183 ವಿದ್ಯಾರ್ಥಿಗಳು 1 200 ರಲ್ಲಿ 1 200 ಅಂಕಗಳಿಸಿದ ಸಾಧನೆ ಮಾಡಿದ್ದಾರೆ. ಮಲಪ್ಪುರ ಜಿಲ್ಲೆ ಅತ್ಯಧಿಕ ಸಂಖ್ಯೆಯಲ್ಲಿ ಎ ಪ್ಲಸ್‌ ಪಡೆದ ಸಾಧನೆ ಮಾಡಿದೆ.

ವೊಕೇಶನಲ್ ಹೈಯರ್‌ ಸೆಕೆಂಡರಿ ಎಜುಕೇಶನ್‌ನಲ್ಲಿ ಶೇ.80.07, ಟಿಎಚ್ಎಸ್‌ಇಯಲ್ಲಿ ಶೇ.69.76 ಮತ್ತು ಎಎಚ್ಎಇಯಲ್ಲಿ ಶೇ.93.95 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವೊಕೇಶನಲ್ ಹೈಯರ್‌ ಸೆಕೆಂಡರಿಯಲ್ಲಿ 23 ಶಾಲೆಗಳು ಶೇ. 100 ಸಾಧನೆ ಮಾಡಿವೆೆ. 63 ಮಂದಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್‌ ಪಡೆದಿದ್ದಾರೆ.

ಜೂ. 10-17 ಸೇ ಪರೀಕ್ಷೆ

ಸೇ ಪರೀಕ್ಷೆ ಬರೆಯುವವರು ಮೇ 15ರ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಜೂನ್‌ 10 ರಿಂದ 17ರ ವರೆಗೆ ಸೇ ಪರೀಕ್ಷೆ ನಡೆಯಲಿದೆ. ಪ್ರಾಕ್ಟಿಕಲ್ ಪರೀಕ್ಷೆ ಮೇ 30 ಮತ್ತು 31 ರಂದು ನಡೆಯುವುದು.

ಪುನರ್‌ ಮೌಲ್ಯ ನಿರ್ಣಯ, ಫೋಟೋಕಾಪಿ, ಸೂಕ್ಷ್ಮ ಪರಿಶೋಧನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15. ಪ್ಲಸ್‌ ವನ್‌ ತರಗತಿಗಳು ಜೂನ್‌ 3 ರಂದು ಆರಂಭಗೊಳ್ಳಲಿವೆ.

ಕಾಸರಗೋಡು ಜಿಲ್ಲೆಯ ಲಿಟಿಲ್ ಪ್ಲವರ್‌ ಹೈಯರ್‌ ಸೆಕೆಂಡರಿ ಸ್ಕೂಲ್ ಕಾಂಞಂಗಾಡ್‌, ಮಾರ್ತೋಮಾ ಹೈಯರ್‌ ಸೆಕೆಂಡರಿ ಸ್ಕೂಲ್ ಫಾರ್‌ ಡೆಪ್‌ ಕಾಸರಗೋಡು ಮೊದಲಾದ ಶಾಲೆಗಳು ಶೇ. 100 ಫಲಿತಾಂಶ ಪಡೆದಿವೆೆ.

ಟಾಪ್ ನ್ಯೂಸ್

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.