Kasaragod: ಇಂದು ಖಾಸಗಿ ಬಸ್ ಮುಷ್ಕರ
Team Udayavani, Oct 31, 2023, 12:37 AM IST
ಕಾಸರಗೋಡು: ಖಾಸಗಿ ಬಸ್ ಮಾಲಕರ ಸಂಘಟನೆಯ ಅಧ್ಯಕ್ಷ ಕೆ.ಕೆ. ಥಾಮಸ್ ಅವರ ನಿರಾಹಾರ ಸತ್ಯಾಗ್ರಹಕ್ಕೆ ಸಂಬಂಧಿಸಿ ನಡೆದ ಚರ್ಚೆಯ ಸಂದರ್ಭ ಸಾರಿಗೆ ಸಚಿವರು ನೀಡಿದ್ದ ಭರವಸೆಗಳನ್ನು ಜಾರಿಗೊಳಿಸದೆ ಏಕಪಕ್ಷೀಯವಾಗಿ ಬಡವರಿಗೆ ಉಚಿತ ಪ್ರಯಾಣ ಘೋಷಿಸಿರುವ ಕ್ರಮವನ್ನು ವಿರೋಧಿಸಿ ಅ. 31ರಂದು ರಾಜ್ಯವ್ಯಾಪಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲು ಬಸ್ ಮಾಲಕರ ಸಂಘ ತೀರ್ಮಾನಿಸಿದೆ.
ಜಂಟಿ ಮುಷ್ಕರ ಸಮಿತಿ ಮುಂದಿಟ್ಟ ಬೇಡಿಕೆ ಗಳನ್ನು ಆಂಗೀಕರಿಸದಿದ್ದರೆ ನ. 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವು ದೆಂದು ತಿಳಿಸಲಾಗಿದೆ.
ವಿದ್ಯಾರ್ಥಿ ಪ್ರಯಾಣ ದರವನ್ನು ಹೆಚ್ಚಿಸ ಬೇಕೆಂದು ಹಲವು ವರ್ಷಗಳಿಂದ ನಿರಂತರ ಬೇಡಿಕೆ ಮುಂದಿಡುತ್ತಿದ್ದರೂ ಸರಕಾರ ಈವರೆಗೂ ಹೆಚ್ಚಳ ಮಾಡಿಲ್ಲ ಎಂಬುದು ಬಸ್ ಮಾಲಕರ ಪ್ರಮುಖ ಆರೋಪ.
ಬಸ್ಗಳಲ್ಲಿ ಕೆಮರಾ, ಸೀಟ್ ಬೆಲ್ಟ್ ಕಡ್ಡಾಯ ಅಳವಡಿಸ ಬೇಕು ಎಂಬ ನಿಯಮನ್ನು ಕೈಬಿಡ ಬೇಕು. 140 ಕಿ.ಮೀ. ದೂರಮಿತಿ ನೋಡದೆ ಎಲ್ಲ ಬಸ್ಗಳ ಪರವಾನಿಗೆ ನವೀಕರಿಸಬೇಕು ಮೊದಲಾದ ಬೇಡಿಕೆಗಳನ್ನು ಸಂಘವು ಮುಂದಿರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ