ಅಧ್ಯಕ್ಷರಾಗಿ ರಮೇಶ್‌, ಸಂಚಾಲಕರಾಗಿ ಮಹೇಶ್‌, ಮೋನಪ್ಪ ಆಯ್ಕೆ

ಮತ್ತೆ ಕಲ್ಯಾಣ ಜನಾಂದೋಲನದ ಪೂರ್ವಭಾವಿ ಸಭೆ

Team Udayavani, Jul 3, 2019, 1:05 AM IST

01KSDE5

ಮಡಿಕೇರಿ: ಜಾತ್ಯತೀತ, ಉತ್ತಮ, ಪ್ರಜ್ಞಾವಂತ ಸಮಾಜ ನಿರ್ಮಾಣಕ್ಕಾಗಿ ರೂಪುಗೊಂಡಿರುವ ಮತ್ತೇ ಕಲ್ಯಾಣ ಜನಾಂದೋಲನ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್‌, ಸಂಚಾಲಕರಾಗಿ ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಮಹೇಶ್‌ ಹಾಗೂ ಸಂಯೋಜಕರಾಗಿ ಮೋನಪ್ಪ ಆಯ್ಕೆಯಾಗಿದ್ದಾರೆ. ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು.

ಬಸವಣ್ಣನವರ ತತ್ವ, ಆದರ್ಶ, ಚಿಂತನೆಯನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯ, ಹೊಸ ದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶ್ರೀ ಮಠ ಮತ್ತೇ ಕಲ್ಯಾಣ ಎಂಬ ಜನಾಂದೋಲನ ರಾಜ್ಯಾದ್ಯಂತ ರೂಪಿಸಿದೆ. ಅಗಸ್ಟ್‌ 5 ರಂದು ಮಡಿಕೇರಿ ನಗರದಲ್ಲಿ ಕಾರ್ಯಕ್ರಮ ನಡೆಯಲಿದ್ದು. ಕಾರ್ಯಕ್ರಮ ಯಾವ ರೀತಿ ಮೂಡಿಬರಬೇಕೆಂಬ ಬಗ್ಗೆ ಚರ್ಚಿಸಯಾಯಿತು.

ಟಿ.ಪಿ.ರಮೇಶ್‌ ಮಾತನಾಡಿ, ಕಾರ್ಯಕ್ರಮಕ್ಕೆ ಪೂರಕವಾಗಿ ಸಮಿತಿ ರಚಿಸಿ ಆ ಮೂಲಕ ಜವಾಬ್ದಾರಿ ನೀಡಿ. ನಂತರ ಆರ್ಥಿಕ ಕ್ರೋಡಿಕರಣ ಮಾಡಬೇಕಿದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಜಾತಿ, ಧರ್ಮ ಬದಿಗೊತ್ತಿ ಸಹಕಾರ ನೀಡುತ್ತಾರೆ. ಜಿಲ್ಲೆಯ ಸಮಾಜಮುಖೀ ಸಂಘಟನೆಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ನಡೆದರೆ ಯಶಸ್ಸು ಸಾಧ್ಯ ಎಂದು ಸಲಹೆ ನೀಡಿದರು.

ಕಿರಿಕೊಡ್ಲಿ ಮಠದ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಅವರು ಮಾತನಾಡಿ, 12ನೇ ಶತಮಾನದಲ್ಲಿ ಮೂಡಿದ ಚಿಂತನೆಯನ್ನು 21ನೇ ಶತಮಾನದಲ್ಲಿ ಸಕಾರಗೊಳಿಸುತ್ತಿದ್ದೇವೆ ಎಂದರು.

ಕಾರ್ಯಕ್ರಮ ಪೂರ್ವ ವ್ಯವಸ್ಥಿತವಾಗಿ ಆಯೋಜನೆ ಮಾಡಿದರೆ ಯಶಸ್ಸು ದೊರಕುತ್ತದೆ. ಕಾರ್ಯಕ್ರಮದ ಉದ್ದೇಶ ಈಡೇರುತ್ತೆ. ಈ ನಿಟ್ಟಿನಲ್ಲಿ ಮಠ ಕೂಡ ಸಹಕಾರ ನೀಡುತ್ತೆ ಎಂದರು.

ಸಾಮಾಜಿಕ ಹೋರಾಟಗಾರ ಅಮಿನ್‌ ಮೊಹ್ಸಿನ್‌ ಮಾತನಾಡಿ, ಸಮಾಜದಲ್ಲಿ ಇನ್ನೂ ಕೂಡ ಜಾತಿ ವ್ಯವಸ್ಥೆ ಇದೆ. ಇದನ್ನು ಹೋಗಲಾಡಿಸಿ ಸುಸ್ಥಿರ ಸಮಾಜಕ್ಕೆ ಈ ರೀತಿಯ ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ. ಸಹೋದರ ಸಮಾಜ ಕಟ್ಟಲು ಈ ಆಂದೋಲನ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

ಶರಣ್ಯ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಮಹೇಶ್‌ ಅವರುಮಾತನಾಡಿ, ಸರ್ವಧರ್ಮಿಯರು, ವಿವಿಧ ಸಂಘಟನೆಗಳನ್ನು ಒಂದುಗೂಡಿಸಿ ಮಾತ್ತೂಂದು ಸಭೆ ನಡೆಸಿ. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮತ್ತೂಂದು ಸುತ್ತಿನ ಮಾತುಕಥೆ ನಡೆಸಿ. ಕಾರ್ಯಕ್ರಮದ ಸದುದ್ದೇಶ ಈಡೇರಿಸುತ್ತೇವೆ ಎಂದುಚ ಹೇಳಿಳಿದರು.

ಜುಲೈ 6 ರಂದು ಅಂಬೇಡ್ಕರ್‌ ಭವನದಲ್ಲಿ ವಿವಿಧ ಸಂಘಟನೆಗಳ ಸಭೆಯನ್ನು ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯಲ್ಲಿ ಶಿರಿಗಡಲೆ ಮಠದ ಇಮ್ಮಡಿ ಶಿವಲಿಂಗ ಸ್ವಾಮಿ, ದಲಿತ ಸಂಘರ್ಷ ಸಮಿತಿಯ ಮುಖಂಡ ವೀರಭದ್ರಯ್ಯ, ಕಾರ್ಯಕ್ರಮದ ಪ್ರಮುಖ ಮೊಣ್ಣಪ್ಪ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು

ಕಾರ್ಯಕ್ರಮವಲ್ಲ. ಸಾಣೇಹಳ್ಳಿ ಮಠದ ಪರವಾಗಿ ಆಗಮಿಸಿದ ಆಂದೋಲನದ ಪ್ರಮುಖ ಮಹೇಶ್‌ ಚಟ್ನಳ್ಳಿ ಮಾತನಾಡಿ, ಇದು ಕೇವಲ ಕಾರ್ಯಕ್ರಮವಲ್ಲ. ಸಮಾಜ ಮುಖೀ ಕಾರ್ಯ. ಬಸವಣ್ಣನವರ ಚಿಂತನೆಯನ್ನು ಸಕಾರಗೊಳಿಸಿ. ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಇದು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಜಾತಿ, ಧರ್ಮ ಎನ್ನದೇ ಎಲ್ಲಾರು ಒಂದಾಗಿ. ಈ ಕಾರ್ಯಕ್ರಮ ಮಾಡಬೇಕು. ಉದ್ದೇಶವನ್ನು ಈಡೇರಿಸಿಬೇಕು. ಕಾರ್ಯಕ್ರಮಕ್ಕೆ ಪೂರಕವಾಗಿ ಸಂಪನ್ಮೂಲ ವ್ಯಕ್ತಿಗಳಿಂದ ಯುವಜನತೆಯೊಂದಿಗೆ ಸಂವಾದ ನಡೆಸಲಾಗುವುದು. ಆ ಮೂಲಕ ಸಮಾಜದ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು. ನಗರದ ಮುಖ್ಯ ಬೀದಿಗಳಲ್ಲಿ ಸಾಮರಸ್ಯ ನಡಿಗೆ ಮೂಲಕ ಸಂದೇಶ ಸಾರಲಾಗುವುದು. ಜಿಲ್ಲಾ ಮಟ್ಟದ ಸಮಿತಿ ಪೂರಕ ಬೆಂಬಲ ನೀಡಬೇಕೆಂದರು .

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.