ಗಡಿನಾಡ ಕನ್ನಡಿಗರು ರಾಜಕೀಯ ಬೇಧ ಮರೆತು ಕನ್ನಡಿಗ ಪ್ರತಿನಿಧಿಯನ್ನು ಆರಿಸಬೇಕು: ರವೀಶ ತಂತ್ರಿ


Team Udayavani, Mar 28, 2019, 2:12 PM IST

udayavani3

ಬದಿಯಡ್ಕ : ಪ್ರಪಂಚ ಇದುವರೆಗೆ ಕಾಣದಿರುವ ಅತ್ಯಂತ ಶ್ರೇಷ್ಠ ಪ್ರಧಾನಮಂತ್ರಿ ನರೇಂದ್ರ ಮೋದಿಯರನ್ನು ದೇಶಕ್ಕೆ ನೀಡಿದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹೆಮ್ಮೆಯೆನಿಸುತ್ತದೆ. ಶತ್ರು ರಾಷ್ಟ್ರದಲ್ಲಿಯೂ ನರೇಂದ್ರ ಮೋದಿಯವರ ಅಭಿಮಾನಿಗಳಿದ್ದಾರೆ. ಅಂತಹ ಮಹಾನ್‌ ನಾಯಕ ಮತ್ತೂಮ್ಮೆ ನಮ್ಮನ್ನಾಳಬೇಕು. ಗಡಿನಾಡಿನಲ್ಲಿ ಸದಾ ನೋವುಂಡ ಕನ್ನಡಿಗರು ರಾಜಕೀಯ ಬೇಧ ಮರೆತು ಕನ್ನಡಿಗ ಪ್ರತಿನಿಧಿಯನ್ನು ಆರಿಸಬೇಕು ಎಂದು ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್‌.ಡಿ.ಎ.ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಹೇಳಿದರು.

ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್‌.ಡಿ.ಎ. ಚುನಾವಣಾ ಪ್ರಚಾರ ಕಚೇರಿಯನ್ನು ಬದಿಯಡ್ಕದಲ್ಲಿ ದೀಪಜ್ವಲನೆಗೈದು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲ ಮತ ವಿಭಾಗದ ದೇಶಭಕ್ತರು ಮೋದಿಯವರನ್ನು ಒಪ್ಪಿ ಕೊಂಡಿದ್ದಾರೆ. ಆಡಳಿತದಲ್ಲಿ ನಿಯತ್ತನ್ನು ಕಾಯ್ದು, ವಿಶ್ವಾಸವನ್ನು ನೀಡುವ ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಪ್ರಬಲ ಶಕ್ತಿಯಾಗಿ ಮೂಡಿಬರಲಿದೆ. ತಳಮಟ್ಟದಲ್ಲಿ ಕಾರ್ಯಕರ್ತರು ಕಠಿಣ ಪರಿಶ್ರಮದ ಮೂಲಕ ಮೋದಿಯವರ ಸಾಧನೆಯನ್ನು ಜನತೆಗೆ ತಿಳಿಸಿ, ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಕರೆನೀಡಬೇಕು. ಸದಾ ಸೋಲೆಂಬ ಋಣಾತ್ಮಕ ಚಿಂತನೆಯಿಂದ ಹೊರಬಂದು ದೇಶದ ಒಳಿತಿಗಾಗಿ ಮತನೀಡಬೇಕೆಂದು ಅವರು ಹೇಳಿದರು.

ಯುಡಿಎಫ್‌ ಹಾಗೂ ಎಲ್‌ಡಿಎಫ್‌ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ವೋಟ್‌ ಬ್ಯಾಂಕ್‌ ರಾಜಕೀಯವನ್ನು ಮಾಡುತ್ತಿರುವ ಆ ಎರಡು ರಂಗಗಳನ್ನು ಸೋಲಿಸಿ ಎನ್‌.ಡಿ.ಎ. ಅಭ್ಯರ್ಥಿಗಳು ದೇಶದಾದ್ಯಂತ ಗೆಲ್ಲಬೇಕು. ಆದುದರಿಂದ ತಳಮಟ್ಟದ ಕೊರತೆಗಳನ್ನು ನೀಗಿಸುವಲ್ಲಿ ಕಾರ್ಯಕರ್ತರು ಶ್ರಮಪಡಬೇಕು. ಕಾಸರಗೋಡು ಜಿಲ್ಲೆಯ ಅಭಿವೃದ್ಧಿಯೆಂಬ ಕನಸನ್ನು ನನಸಾಗಿಸುವಲ್ಲಿ ಎಲ್ಲರ ಕಠಿಣ ಪರಿಶ್ರಮ ಅತೀ ಅಗತ್ಯ ಎಂದರು.

ಕಾಸರಗೋಡು ಮಂಡಲ ಅಧ್ಯಕ್ಷ ಎಂ.ಸುಧಾಮ ಗೋಸಾಡ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಜನರೊಂದಿಗೆ ಸದಾ ಬೆರೆಯುತ್ತಿರುವ ಕನ್ನಡಿಗ ಅಭ್ಯರ್ಥಿ, ಸಮರ್ಥ ಮುಂದಾಳುತ್ವವನ್ನು ವಹಿಸಿಕೊಳ್ಳಬಲ್ಲ ನೇತಾರನನ್ನು ಆರಿಸಿ ಲೋಕಸಭೆಗೆ ಕಳುಹಿಸುವ ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸೋಣ. ಈ ಕಾರ್ಯದಲ್ಲಿ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಕರೆಯಿತ್ತರು. ಬಿಜೆಪಿ ದೇಶೀಯ ಸಮಿತಿ ಸದಸ್ಯ ಎಂ.ಸಂಜೀವ ಶೆಟ್ಟಿ ಮಾತನಾಡುತ್ತಾ ಯುದ್ಧ ಆರಂಭವಾಗಿದೆ. ರಾಜ್ಯದ ರಾಜಕಾರಣದಲ್ಲಿ ಬದಲಾವಣೆಯನ್ನು ಕಾಣಬೇಕಾದರೆ ಕಾರ್ಯಕರ್ತರು ತಳಮಟ್ಟದಲ್ಲಿ ಶ್ರಮಪಡಬೇಕು. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಸದಸ್ಯರೂ ಮುಂದೆ ಬರಬೇಕು ಎಂದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಬದಿಯಡ್ಕ ಪ್ರಖಂಡ ಸಂಘ ಚಾಲಕ್‌ ಶಿವಶಂಕರ ಭಟ್‌ ಗುಣಾಜೆ, ನೇತಾರರಾದ ಸುರೇಶ್‌ ಕುಮಾರ್‌ ಶೆಟ್ಟಿ, ಶಿವಕೃಷ್ಣ ಭಟ್‌, ಜಯದೇವ ಖಂಡಿಗೆ, ಸುಜಾತಾ ಆರ್‌.ತಂತ್ರಿ, ರಾಮಪ್ಪ ಮಂಜೇಶ್ವರ, ಗೋಪಾಲಕೃಷ್ಣ ಮುಂಡೋಳುಮೂಲೆ, ಮೈರ್ಕಳ ನಾರಾಯಣ ಭಟ್‌, ಈಶ್ವರ ಮಾಸ್ತರ್‌ ಪೆರಡಾಲ, ಕೃಷ್ಣ ಮಣಿಯಾಣಿ ಮೊಳೆಯಾರು, ಬಾಲಕೃಷ್ಣ ಶೆಟ್ಟಿ ಕಡಾರು, ವಿಶ್ವನಾಥ ಪ್ರಭು, ಪುಷ್ಪಾ ಭಾಸ್ಕರ, ಜಯಂತಿ, ಡಿ. ಶಂಕರ, ಹರೀಶ್‌ ಗೋಸಾಡ ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು. ಹರೀಶ್‌ ನಾರಂಪಾಡಿ ಸ್ವಾಗತಿಸಿ, ಸುಕುಮಾರ ಕುದ್ರೆಪ್ಪಾಡಿ ವಂದಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.