ಸಂಸ್ಕೃತಿ ಬಗ್ಗೆ ನಿಷ್ಠೆ ತೋರುವವರಿಗೆ ಧರ್ಮ ರಕ್ಷಣೆ : ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು
Team Udayavani, Sep 10, 2019, 5:39 AM IST
ಮಂಜೇಶ್ವರ: ಕೊಡ್ಲಮೊಗರು ಅಡೆಕಳಕಟ್ಟೆಯ ಫ್ರೆಂಡ್ಸ್ ಕ್ಲಬ್ನ 9ನೇ ವಾರ್ಷಿಕೋತ್ಸವ ಹಾಗೂ ಶ್ರೀ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಆಟೋಟ ಸ್ಪರ್ಧೆಗೆ ಮುಕ್ಕಾಲ್ದಿ ಮಲರಾಯ ಮಹಮ್ಮಾಯಿ ದೈವಸ್ಥಾನ ಬೋಳ್ನದ ರಾಘವ ಶೆಟ್ಟಿಗಾರ್ ಬೋಳ್ನ ಅವರು ಚಾಲನೆ ನೀಡಿದರು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಫ್ರೆಂಡ್ಸ್ ಕ್ಲಬ್ನ ಗೌರವಾಧ್ಯಕ್ಷರಾದ ರತ್ನಾಕರ ಶೆಟ್ಟಿ ಅಡೆಕಳಕಟ್ಟೆ ವಹಿಸಿದ್ದರು.
ಧಾರ್ಮಿಕ ಭಾಷಣ ಮಾಡಿದ ಧಾರ್ಮಿಕ ಮುಂದಾಳು ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು ಅವರು ಸಂಸ್ಕಾರ, ಸಂಪ್ರದಾಯಗಳು ನಮ್ಮ ಸಂಸ್ಕೃತಿಯನ್ನು ಎತ್ತಿ ತೋರಿಸುವುದು. ಅದರಲ್ಲಿ ನಿಷ್ಠೆ ತೋರುವವರಿಗೆ ಧರ್ಮ ರಕ್ಷಣೆ ನೀಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ವಿಶ್ವನಾಥ ಎಂ.ಕೆ. ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವೈದ್ಯಕೀಯ ರಂಗದಲ್ಲಿದ್ದುಕೊಂಡು ವಿವಿಧ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸುವುದರ ಜತೆಗೆ ಅನಾಥ, ನಿರ್ಗತಿಕರ ಆಶ್ರಮ ನಡೆಸಿ ಸೇವೆಯನ್ನು ಸಲ್ಲಿಸುತ್ತಿರುವ ಡಾ| ಉದಯ ಕುಮಾರ್ ನೂಜಿ ಹಾಗೂ ಡಾ| ಶಾರದಾ ಉದಯ ಕುಮಾರ್ ಅವರಿಗೆ ಕ್ಲಬ್ಬಿನ ವತಿಯಿಂದ ಗೌರವದ ಸಮ್ಮಾನವನ್ನು ನೀಡಲಾಯಿತು. ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಕೇಶವ ಪೊಯ್ಯತ್ತಬೈಲ್ ಉಪಸ್ಥಿತರಿದ್ದರು. ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಫ್ರೆಂಡ್ಸ್ ಕ್ಲಬ್ನ ಜತೆ ಕಾರ್ಯದರ್ಶಿ ರೂಪರಾಣಿ ಅಡೆಕಳಕಟ್ಟೆ ವರದಿ ವಾಚಿಸಿದರು. ಫ್ರೆಂಡ್ಸ್ ಕ್ಲಬ್ನ ಸದಸ್ಯ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿದರು. ಸದಸ್ಯೆ ದೀಕ್ಷಿತಾ ಅಡೆಕಳಕಟ್ಟೆ ವಂದಿಸಿದರು. ಶ್ರೀಶಾನ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ