ಡಿಜಿಪಿಯಾಗಿ ಲೋಕನಾಥ್‌ ಬೆಹೆರ ಮರು ನೇಮಕ 


Team Udayavani, Jun 29, 2017, 3:35 AM IST

28-KRK-21.jpg

ತಿರುವನಂತಪುರ: ಹಿರಿಯ ಐಪಿಎಸ್‌ ಅಧಿಕಾರಿ ಲೋಕನಾಥ್‌ ಬೆಹೆರ ಸುಮಾರು ಎರಡು ತಿಂಗಳ ಬಳಿಕ ಮತ್ತೂಮ್ಮೆ ರಾಜ್ಯದ ಪೊಲೀಸ್‌ ನಿರ್ದೇಶಕರಾಗಿ ನೇಮಕ ಗೊಂಡಿದ್ದಾರೆ. ಹಾಲಿ ಡಿಜಿಪಿ ಟಿ. ಪಿ. ಸೇನ್‌ಕುಮಾರ್‌ ಜೂ. 30ರಂದು ನಿವೃತ್ತರಾಗಲಿದ್ದು, ಅವರ ಉತ್ತರಾಧಿಕಾರಿಯಾಗಿ ಸರಕಾರ ಬೆಹೆರ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. 

ಸೇನ್‌ಕುಮಾರ್‌ ಸರಕಾರದ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ 11 ತಿಂಗಳು ಹೋರಾಡಿ ಡಿಜಿಪಿ ಹುದ್ದೆಯನ್ನು ಪಡೆದಿದ್ದರು. ಹೀಗಾಗಿ ಆಗ ಡಿಜಿಪಿಯಾಗಿದ್ದ ಬೆಹೆರ ಜಾಗ ಖಾಲಿ ಮಾಡಿದ್ದರು. ಇದೀಗ ಸೇನ್‌ಕುಮಾರ್‌ ನಿವೃತರಾಗಲಿರುವುದರಿಂದ ಬೆಹೆರ ಮರಳಿ ಅದೇ ಜಾಗಕ್ಕೆ ಬರಲಿದ್ದಾರೆ. ಎಲ್‌ಡಿಎಫ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಸೇನ್‌ಕುಮಾರ್‌ ಅವರನ್ನು ಡಿಜಿಪಿ ಹುದ್ದೆಯಿಂದ ಕಿತ್ತು ಹಾಕಿತ್ತು. ಇದನ್ನು ಪ್ರಶ್ನಿಸಿ ಸೇನ್‌ಕುಮಾರ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಸೇನ್‌ಕುಮಾರ್‌ ಅವರನ್ನು ವರ್ಗಾಯಿಸಿದ  ಸರಕಾರಕ್ಕೆ ಸುಪ್ರೀಂ ಕೋರ್ಟ್‌ ಛೀಮಾರಿ ಕೂಡ ಹಾಕಿತ್ತು.  ಇಂದು ನಡೆದ ಸಂಪುಟ ಸಭೆಯಲ್ಲಿ  ಪ್ರಸ್ತುತ ವಿಜಿಲೆನ್ಸ್‌ ಮತ್ತು ಭ್ರಷ್ಟಾಚಾರ ನಿಗ್ರಹ ಪಡೆಯ ನಿರ್ದೇಶಕರಾಗಿರುವ ಬೆಹೆರ ಅವರನ್ನು ಮರಳಿ ಡಿಜಿಪಿ ಹುದ್ದೆಗೆ ನೇಮಿಸುವ ನಿರ್ಧಾರ ಕೈಗೊಳ್ಳಲಾಯಿತು. ಮುಖ್ಯ ಕಾರ್ಯ ದರ್ಶಿ ನಳಿನಿ ನೆಟ್ಟೊ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಕಾನೂನು ಕಾರ್ಯದರ್ಶಿ ಯವರನ್ನೊಳಗೊಂಡಿರುವ ತಿರಸದಸ್ಯ ಸಮಿತಿ ಬೆಹೆರ ಮರು ನೇಮಕಾತಿಗೆ ಶಿಫಾರಸು ಮಾಡಿತ್ತು. 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.