Kasaragod ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ನಿವೃತ್ತ ಅಧ್ಯಾಪಕನ ಶವ ಪತ್ತೆ
Team Udayavani, Feb 13, 2024, 10:12 PM IST
ಕಾಸರಗೋಡು: ಕುತ್ತಿಕ್ಕೋಲ್ ಕರಿವಿಂಜಂ ನಿವಾಸಿ, ನುಳ್ಳಿಪ್ಪಾಡಿ ನೇತಾಜಿ ಹೌಸಿಂಗ್ ಕಾಲನಿ ನಿವಾಸಿ ನಿವೃತ್ತ ಅಧ್ಯಾಪಕ ಇ. ಮಾಧವನ್ (59) ಅವರ ಮೃತ ದೇಹ ಕುತ್ತಿಕ್ಕೋಲ್ ಕರಿವಿಂಜಂ ತರವಾಡು ಮನೆಯ ಹಿತ್ತಿಲಿನಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶಿಕ್ಷಕಿಯಾಗಿರುವ ಪತ್ನಿ ಜ್ಯೋತಿಲಕ್ಷ್ಮೀ ಅವರನ್ನು ಸ್ಕೂಟರ್ನಲ್ಲಿ ಮಂಗಳವಾರ ಬೆಳಗ್ಗೆ ನಾಯಮ್ಮಾರ ಮೂಲೆಯ ತನ್ಬಿಹುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಗೆ ಬಿಟ್ಟು ಬಳಿಕ ಕುತ್ತಿಕ್ಕೋಲ್ನ ತರವಾಡು ಮನೆಗೆ ಹೋಗಿದ್ದರು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವತಿ ನಾಪತ್ತೆ
ಕಾಸರಗೋಡು: ಕಾಂಞಂಗಾಡ್ ನಗರದ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಇಪ್ಪತ್ತಮೂರರ ಹರೆಯದ ಯುವತಿ ನಾಪತ್ತೆಯಾಗಿರುವುದಾಗಿ ಹೊಸದುರ್ಗ ಪೊಲೀಸರಿಗೆ ದೂರು ನೀಡಲಾಗಿದೆ.
ಬೆಳಗ್ಗೆ ಮನೆಯಿಂದ ಹೋಗಿದ್ದ ಆಕೆ ರಾತ್ರಿಯಾದರೂ ಮನೆಗೆ ವಾಪಸಾಗದಿರುವುದರಿಂದ ಪೊಲೀಸರಿಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ