ಶೂಟಿಂಗ್‌ ಬಳಿಕ ಲೊಕೇಶನ್‌ ಮರೆಯದ ರಿಷಭ್‌


Team Udayavani, Oct 16, 2018, 10:29 AM IST

kairangala.jpg

ಮಂಗಳೂರು: ಗಡಿನಾಡಿನ ಕನ್ನಡ ಶಾಲೆಗಳ ಸ್ಥಿತಿಗತಿ ಮತ್ತು ರಕ್ಷಿಸಬೇಕಾದ ಆಗತ್ಯವನ್ನು ಭಿನ್ನವಾಗಿ ಮನದಟ್ಟು ಮಾಡಿಸಿದ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನೆಮಾ ಚಿತ್ರೀಕರಣದ ಲೊಕೇಶನ್‌ ಕೈರಂಗಳ ಶಾಲೆಯನ್ನು ನಿರ್ದೇಶಕ ರಿಷಭ್‌ ಶೆಟ್ಟಿ ಮರೆತುಬಿಟ್ಟಿಲ್ಲ. ಮುಚ್ಚುವ ಭೀತಿಯಲ್ಲಿರುವ ಈ ಶಾಲೆಯನ್ನು ದತ್ತು ಪಡೆಯಲು ಮುಂದಾಗಿದ್ದಾರೆ. 

137 ವರ್ಷಗಳ ಇತಿಹಾಸವಿರುವ ಬಂಟ್ವಾಳ ತಾಲೂಕಿನ ಕೈರಂಗಳ ಸ.ಹಿ.ಪ್ರಾ. ಶಾಲೆ ಮುಚ್ಚುಗಡೆ ಅಪಾಯ ಎದುರಿಸುತ್ತಿದೆ. ಗಡಿನಾಡಿನ ಕನ್ನಡ ಶಾಲೆಗಳು ಮುಚ್ಚುತ್ತಿರುವ ಬಗೆಗಿನ ಸಿನೆಮಾ ಯಶಸ್ವಿಯಾಗಿದ್ದರೆ ಅದರ
ಶೂಟಿಂಗ್‌ ನಡೆದ ಶಾಲೆ ವಿದ್ಯಾರ್ಥಿಗಳಿಲ್ಲದ ಸ್ಥಿತಿ ತಲುಪಿರುವುದು ವಿಪರ್ಯಾಸ.

ಕೈರಂಗಳ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಇದ್ದು, ಸದ್ಯ ಕೇವಲ 25 ವಿದ್ಯಾರ್ಥಿಗಳಿದ್ದಾರೆ. 2ನೇ ತರಗತಿಗೆ
ದಾಖಲಾತಿ ಆಗಿಲ್ಲ. ಈಗ ಇರುವುದೊಬ್ಬರೇ ಅಧ್ಯಾಪಕರು. ಹೀಗಾಗಿ ಶಾಲೆ ಮುಚ್ಚುಗಡೆ ಆತಂಕ ಎದುರಿಸುತ್ತಿದೆ.
ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ರಿಷಭ್‌ ಶೆಟ್ಟಿ ಮತ್ತು ತಂಡ ಶಾಲೆಯ ಟ್ರಸ್ಟಿಗಳ ಜತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಶಾಲೆಯ ಆಡಳಿತ ಮಂಡಳಿ ಸ್ಪಂದಿಸಿದ್ದು, ಮುಂದಿನ ಕಾರ್ಯಯೋಜನೆ ಬಗ್ಗೆ ಇದೇ ತಿಂಗಳಿನಲ್ಲಿ ಮಾತುಕತೆ ನಡೆಸಲಿದ್ದಾರೆ.

ಮಂಗಳೂರು ಮೂಲದ ಅನಿಲ್‌ ಶೆಟ್ಟಿ ಮತ್ತು ತಂಡ ಈಗಾಗಲೇ “ಕನ್ನಡ ಶಾಲೆ ಉಳಿಸಿ ಆಂದೋಲನ’ವನ್ನು ಕೈಗೊಂಡಿದ್ದು, ಪ್ರಶಂಸೆ, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅನಿಲ್‌ ಶೆಟ್ಟಿ ತಂಡದಲ್ಲಿ ಸುಮಾರು 100 ಮಂದಿ ಕಾರ್ಯಕರ್ತರಿದ್ದು, ಅವರೂ ರಿಷಭ್‌ ಶೆಟ್ಟಿಯವರ ಹೊಸ ಪ್ರಯ°ಕ್ಕೆ ಕೈ ಜೋಡಿಸಲಿದ್ದಾರೆ. 

ಪ್ರಿ ಸ್ಕೂಲ್‌ ಆರಂಭಕ್ಕೆ ಚಿಂತನೆ
ಕನ್ನಡ ಶಾಲೆಯಲ್ಲಿ ಕಲಿತರೆ ಮುಂದಿನ ವಿದಾಭ್ಯಾಸಕ್ಕೆ ತೊಡಕು ಎಂಬ ಭಾವನೆ ಕೆಲವರಲ್ಲಿ ಇದೆ. ಇದನ್ನು ತೊಡೆದು ಹಾಕುವ ದೃಷ್ಟಿಯಿಂದ ಶಾಲೆಯಲ್ಲಿ ಪೂರ್ವ ಪ್ರಾಥಮಿಕ (ಪ್ರಿ ಸ್ಕೂಲ್‌) ಆರಂಭಿಸುವ ಚಿಂತನೆ ನಡೆಸಲಾಗಿದೆ. ಕನ್ನಡ ಭಾಷೆಗೆ ಪ್ರಾಶಸ್ತ್ರ ನೀಡಲಿದ್ದು, ಇದನ್ನು ಪ್ರಾರಂಭಿಸಿದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚು ಮಾಡಬಹುದು ಎಂಬ ಯೋಚನೆ ತಂಡದ್ದು.

ಕೈರಂಗಳ ಶಾಲೆಯಲ್ಲಿ ಸದ್ಯ 25 ವಿದ್ಯಾರ್ಥಿಗಳಿದ್ದಾರೆ. ಎರಡನೇ ತರಗತಿಗೆ ಮಕ್ಕಳಿಲ್ಲ. ನಾನೊಬ್ಬನೇ ಶಿಕ್ಷಕ. ಶಾಲೆ ಉಳಿಸುವುದಕ್ಕಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಶಾಲಾ ಕಟ್ಟಡ ಸರಿಯಾಗಿದೆ. ಇರುವುದು ಮಕ್ಕಳ ಕೊರತೆ ಮಾತ್ರ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಮನೆಮನೆಗೆ ತೆರಳಿ ಅರಿವು ಮೂಡಿಸಬೇಕು.
ದೇವದಾಸ್‌, ಮುಖ್ಯೋಪಾಧ್ಯಾಯರು, ಸರಕಾರಿ ಹಿ.ಪ್ರಾ. ಶಾಲೆ ಕೈರಂಗಳ

ಒಬ್ಬರಿಂದಾಗುವ ಕೆಲಸವಲ್ಲ
ರಿಷಭ್‌ ಶೆಟ್ಟಿ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಸರಕಾರಿ ಶಾಲೆಯನ್ನು ಉಳಿಸುವುದು ಒಬ್ಬರಿಂದಾಗುವ ಕೆಲಸವಲ್ಲ. ಕೈಯಲ್ಲಿ ಹಣವಿದ್ದರೆ, ಜನರಿದ್ದರೆ ಸಾಲದು. ವಿದ್ಯಾರ್ಥಿಗಳು ಶಾಲೆಗೆ ಬರುವಂತೆ ಮಾಡಬೇಕು. ಮಕ್ಕಳನ್ನು ಶಾಲಾ ವಾಹನದಲ್ಲಿ ಕರೆತರುವ ವ್ಯವಸ್ಥೆ ಮಾಡಬೇಕು. ಏನೇ ಆಗಲಿ, ಕೈರಂಗಳ ಸ. ಹಿ. ಪ್ರಾ. ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.