ಮಡಿಕೇರಿ: ವೃದ್ಧ ದಂಪತಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ಮುಸುಕುಧಾರಿಗಳಿಂದ ದರೋಡೆ
Team Udayavani, Jun 9, 2022, 7:38 PM IST
ಮಡಿಕೇರಿ: ವೃದ್ಧ ದಂಪತಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ದರೋಡೆ ಮಾಡಿರುವ ಘಟನೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ವಿರಾಜಪೇಟೆ ತಾಲೂಕಿನ ಮಾಲ್ದಾರೆಯ ಬಾಡಗದ ತಂಗಪ್ಪಣ್ಣ ಹಾಗೂ ಜಾನಕಿ ದಂಪತಿಯ ಮನೆಗೆ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿಗಳು ಬಂದಿದ್ದಾರೆ. ಮನೆಯ ಹಿಂಬದಿಯ ಬಾಗಿಲು ಮೂಲಕ ಒಳಗೆ ಪ್ರವೇಶಿಸಿದ ದರೋಡೆಕೋರರು, ಚಿನ್ನ ಹಾಗೂ ನಗದು ಎಲ್ಲಿಟ್ಟಿದ್ದೀರಿ ಎಂದು ಬೆದರಿಸಿ ದಂಪತಿಯನ್ನು ಮನೆಯ ಕೋಣೆಯೊಂದರಲ್ಲಿ ಕೂಡಿ ಹಾಕಿದ್ದರು. ಬಳಿಕ ಮನೆಯಲ್ಲಿದ್ದ ಅಂದಾಜು 1.5 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಅಲ್ಲದೆ ಜಾನಕಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದಾಡಿದ್ದಾರೆ. ಪರಿಣಾಮ ಅರ್ಧ ಭಾಗ ಸರ ದರೋಡೆಕೋರರ ಕೈ ಸೇರಿದೆ.
ಘಟನ ಸ್ಥಳಕ್ಕೆ ಕೊಡಗು ಜಿಲ್ಲಾ ಎಸ್ಪಿ ಎಂ.ಎ. ಅಯ್ಯಪ್ಪ, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ಸಿಪಿಐ ವೆಂಕಟೇಶ್, ಪಿಎಸೈ ಮೋಹನ್ರಾಜ್ ಭೇಟಿ ನೀಡಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್