ಸಾಹಿತ್ಯ, ಕಲೆಗಳ ಆಸಕ್ತಿಯಿಂದ ಸಂಸ್ಕಾರ: ನಾರಾಯಣ ಮಣಿಯಾಣಿ

ಸಾಹಿತ್ಯ ಸಿರಿ ಸರಣಿ ಕಾರ್ಯಕ್ರಮ ಉದ್ಘಾಟನೆ

Team Udayavani, Aug 2, 2019, 5:58 AM IST

01KSDE9

ಬದಿಯಡ್ಕ: ಬದುಕು, ಸಮಾಜಕ್ಕೆ ಹಿತ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಕಲೆ, ಸಾಹಿತ್ಯಗಳು ಸತøಜೆಗಳ ನಿರ್ಮಾಣ ಮಾಡುವ ಮೂಲಕ ಸಂತೃಪ್ತತೆ ಉಂಟುಮಾಡುತ್ತವೆ ಎಂದು ಹಿರಿಯ ವಿದ್ವಾಂಸ ಬೆಳ್ಳಿಗೆ ನಾರಾಯಣ ಮಣಿಯಾಣಿ ಅವರು ಹೇಳಿದರು.

ಕನ್ನಡ ಸಾಹಿತ್ಯ ಸಿರಿ ಬಳಗ ಬದಿಯಡ್ಕ ನೇತೃತ್ವದಲ್ಲಿ ಬದಿಯಡ್ಕದ ರಾಮಲೀಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯ ಸಿರಿ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತಿ, ಸಾಹಿತ್ಯ ಪ್ರೇಮಿಗಳಿಗೆ ಎಂದಿಗೂ ದುಃಖ ಉಂಟಾಗದು. ಜೀವನ ಮತ್ತು ಸಮಾಜ ಚಿಂತಕರಾದ ಸಾಹಿತಿಗಳು- ಕಲಾವಿದರು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುತ್ತಾರೆ. ಸಾಹಿತ್ಯ ಬರಹಗಳು ಬದುಕು, ಸಮಾಜವನ್ನು ತಿದ್ದಿ ತೀಡಿ ನೇರ್ಪುಗೊಳಿಸುತ್ತದೆ ಎಂದು ಅವರು ಈ ಸಂದರ್ಭ ತಿಳಿಸಿದರು. ಹೊಸ ತಲೆಮಾರಲ್ಲಿ ಸಾಹಿತ್ಯ-ಕಲೆಗಳ ಆಸಕ್ತಿ ಕುಂಠಿತಗೊಳ್ಳುತ್ತಿರುವುದು ಖೇದಕರವಾಗಿದೆ ಎಂದ ಅವರು ವ್ಯಾವಹಾರಿಕ ಜಗತ್ತು ಹೆಚ್ಚು ಅಪಾಯ ಮತ್ತು ಅಸುರಕ್ಷಿತತೆಯನ್ನು ತಂದೊಡ್ಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಅಳಿದ ಮೇಲೂ ಉಳಿಯುವ ಬದುಕನ್ನು ರೂಪಿಸುವಲ್ಲಿ ಹೊಸ ತಲೆಮಾರಿಗೆ ಮನವರಿಕೆ ಮಾಡಿಸಬೇಕು ಎಂದ ಅವರು ಇಂತಹ ಕಾರ್ಯಚಟುವಟಿಕೆಗಳು ಭಾಷೆ, ಸಾಹಿತ್ಯಾಭಿಮಾನವನ್ನು ಮೂಡಿಸುತ್ತದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಪಿಲಿಂಗಲ್ಲು ಕೃಷ್ಣ ಭಟ್‌ ಅವರು ಮಾತನಾಡಿ, ಸಾಹಿತ್ಯ, ಕಲಾಸಕ್ತರಲ್ಲದವರ ಬದುಕು ಸುಖಮಯವಾಗಿರಲಾರದು. ಬದು ಕನ್ನು ಸುಖಕರಗೊಳಿಸುವ ಪರಿಸರ ನಿರ್ಮಾಣದಲ್ಲಿ ಸಾಹಿತ್ಯ, ಸಂಗೀತ ಕಲೆಗಳೇ ಮೊದಲಾದವುಗಳು ಪ್ರೇರಣದಾಯಿಯಾಗಿರುತ್ತವೆ ಎಂದು ತಿಳಿಸಿದರು. ದಿ| ಕೇಳು ಮಾಸ್ತರ್‌ ಅವರ ವ್ಯಾಪಕ ಸಾಹಿತ್ಯ ಕೃಷಿ, ಹಿರಿಯ ತಲೆಮಾರನ್ನು ಗುರುತಿಸಿ ಗೌರವಿಸುವ ಸನ್ಮನಸ್ಸು ವ್ಯಕ್ತಿಯ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಅವರ ಕನಸಿನ ಕೂಸಾಗಿ ಬೆಳೆದು ನಿಂತಿರುವ ಕನ್ನಡ ಸಾಹಿತ್ಯ ಸಿರಿ ಗಡಿನಾಡಿನಲ್ಲಿ ಹೊಸ ಸಂಚಲನ ಮೂಡಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ನಿವೃತ್ತ ಕನ್ನಡ ಶಿಕ್ಷಕ, ಸಾಹಿತ್ಯ ಪ್ರೇಮಿ ದಿ| ಇಬ್ರಾಹಿಂ ಮಾಸ್ತರ್‌ ಅವರ ಸಂಸ್ಮರಣೆ ಮಾಡಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ಪುರುಷ ಅವರು ತಮ್ಮ ಒಡನಾಡಿಯಾಗಿದ್ದ ದಿ| ಇಬ್ರಾಹಿಂ ಮಾಸ್ತರ್‌ ಅವರ ಬಗ್ಗೆ ಮಾತನಾಡಿ ಸ್ಮರಿಸಿದರು.

ಹಿರಿಯ ಯಕ್ಷಗಾನ ಸ್ತ್ರೀ ವೇಷ‌ಧಾರಿ ಮಾಲಿಂಗ ಚೆಟ್ಟಿಯಾರ್‌ ಬದಿಯಡ್ಕ ಅವರನ್ನು ಸಮಾರಂಭದಲ್ಲಿ ಅಮೂಲ್ಯ ಕಲಾಸೇವೆಗಾಗಿ ಅಭಿನಂದಿಸಿ ಗೌರವಿಸಲಾಯಿತು. ಯಕ್ಷಗಾನ ಕಲಾವಿದ ಮೂಲಡ್ಕ ನಾರಾಯಣ ಅವರು ಅಭಿನಂದನ ಭಾಷಣಗೈದರು. ಕನ್ನಡ ಸಾಹಿತ್ಯ ಸಿರಿಯ ಅಧ್ಯಕ್ಷ ಮೊಹಮ್ಮದಾಲಿ ಪೆರ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಸಿರಿಯ ಕಾರ್ಯದರ್ಶಿ ಡಾ| ಬೇ.ಸಿ. ಗೋಪಾಲಕೃಷ್ಣ ಭಟ್‌ ಸ್ವಾಗತಿಸಿ, ಲಕ್ಷ್ಮಣ ಪ್ರಭು ಕರಿಂಬಿಲ ವಂದಿಸಿದರು. ಪ್ರೊ| ಎ. ಶ್ರೀನಾಥ್‌ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು. ರವಿಕಾಂತ ಕೇಸರಿ ಕಡಾರು ಸಹಕರಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.