ಸಾಟಿಯಿಲ್ಲದ ಸ್ಯಾಕ್ಸೋಫೋನ್ ವಾದಕಿ ದೀಕ್ಷಾ ದೇವಾಡಿಗ


Team Udayavani, May 17, 2019, 5:38 PM IST

Deeksha

ಬದಿಯಡ್ಕ: ಯಾವುದೇ ಕಲೆಯನ್ನು ಕರಗತ ಮಾಡಲು ಅದರ ಬಗೆಗಿನ ಕುತೂಹಲ, ಉತ್ಸಾಹ ನಮ್ಮಲ್ಲಿರಬೇಕು. ಸಂಗೀತವಾಗಲಿ, ಕಲಿಯುವ ಯಾವುದೇ ವಿಷಯವಾಗಲಿ ಇಷ್ಟಪಟ್ಟು ಅಭ್ಯಾಸಿಸಿದಲ್ಲಿ ವಿಜಯ ಕಿರೀಟ ನಮ್ಮ ಮಡಿಲಿಗೇರುವುದರಲ್ಲಿ ಸಂಶಯವೇ ಇಲ್ಲ. ಅದಕ್ಕೆ ಉದಾಹರಣೆಯಾಗಿದ್ದಾರೆ ಕುಮಾರಿ ದೀಕ್ಷಾ.

ಚಿಕ್ಕಂದಿನಲ್ಲಿಯೇ ಸಂಗೀತದೊಡನೆ ಬೆರೆತು, ಅಭ್ಯಾಸಿಸಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡವರಲ್ಲಿ ಇವರು ಒಬ್ಬರು. ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿರುವಾಗಲೇ ಸ್ಯಾಕ್ಸೋಫೋನ್ ನ್ನು ಕೈಗೆತ್ತಿಕೊಂಡವರು. ಸಂಪೂರ್ಣವಾಗಿ ವಾದನವನ್ನು ಕರಗತಮಾಡಿಕೊಂಡರು. ಉಡುಪಿ ಜಿಲ್ಲೆಯ ಅಲೆವೂರು ರಾಘವ ಶೇರಿಗಾರ್‌ ಮೋಹಿನಿ ದಂಪತಿಯ ಮಗಳು ಕುಮಾರಿ ದೀಕ್ಷಾ. ಬಿ.ಎ., ಎಂ.ಎ ಅರ್ಥಶಾಸ್ತ್ರ ಮುಗಿಸಿ ಬಿ.ಎಡ್‌. ಕಲಿಯುತ್ತಿದ್ದಾರೆ.

ಕರ್ನಾಟಿಕ್‌, ಹಿಂದುಸ್ಥಾನಿ ಸಂಗೀತಗಳನ್ನು ಆಲಿಸುವುದು ಜೊತೆಗೆ ಸ್ಯಾಕ್ಸೋಫೋನ್ ನುಡಿಸುವುದು ಇವರಿಗೆ ತುಂಬಾ ಪ್ರಿಯವಾದುದು. ಸುಮಾರು 16 ವರ್ಷಗಳಿಂದ ಸ್ಯಾಕ್ಸೋಫೋನ್ ವಾದನವನ್ನು ನುಡಿಸುತ್ತಾ ಬಂದಿರುವ ಇವರು ಕೃತಿಗಳನ್ನು ಸಲೀಸಾಗಿ ನುಡಿಸುವ ಮಟ್ಟಕ್ಕೆ ಬಂದಿದ್ದಾರೆ. ಸಂಗೀತದಲ್ಲಿ ಪ್ರಸಿದ್ಧರಾದಂತಹ ತ್ಯಾಗರಾಜರ ಪಂಚರತ್ನ ಕೃತಿಗಳನ್ನು , ಇನ್ನೀತರ ಕೃತಿಗಳನ್ನು , ವರ್ಣಗಳನ್ನು, ದೇವರ ನಾಮಗಳನ್ನು ನಾಜೂಕಾಗಿಯೇ ನುಡಿಸುತ್ತಾರೆ. ತನ್ನ ಸಂಗೀತ ವಾದನದಿಂದ ಕೇಳುಗರನ್ನು ಸಂಗೀತ ಕಡಲಲ್ಲಿ ತೇಲಿ ಬಿಡುತ್ತಾರೆ.


ಆಕಾಶವಾಣಿಯ ಕೊಳಲು ಕಲಾವಿದರಾದ ಉಡುಪಿ ಕೆ.ರಾಘವೇಂದ್ರ ರಾವ್‌ರವರ ನೆಚ್ಚಿನ ಶಿಷ್ಯೆಯಾಗಿದ್ದಾರೆ. ಅಂತೆಯೇ ಮೊದಲ ಎರಡು ವರ್ಷದ ಸಂಗೀತ ವಾದನ ಅಭ್ಯಾಸವನ್ನು ಅಲೆವೂರು ಸುಂದರ ಶೇರಿಗಾರ್‌ರವರ ಬಳಿ ಕಲಿತಿರುವರು. ವಾದನ ಅಭ್ಯಾಸವನ್ನು ವಿದುಷಿ ಮಾಧವ ಭಟ್‌ ಇವರ ಬಳಿ ಕಲಿಯುತ್ತಿದ್ದಾರೆ. ಈಗಾಗಲೇ ಉಡುಪಿಯ ನಾನಾ ಭಾಗಗಳಲ್ಲಿ ದೀಕ್ಷಾರವರು ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮವನ್ನು ನೀಡಿದ್ದಾರೆ. ಅಲ್ಲದೇ ಮಂಗಳೂರು, ಮೂಡುಬಿದಿರೆ, ಬೆಂಗಳೂರು, ಮೈಸೂರು, ಹಾಸನ, ಬಳ್ಳಾರಿ, ಕೋಲಾರ, ಹುಬ್ಬಳ್ಳಿ, ಕುಮಟಾ, ಹೊನ್ನಾವರ, ಯಲ್ಲಾಪುರ, ಗೋವಾ ಅಲ್ಲದೇ ತಮಿಳುನಾಡು, ಮುಂಬಯಿ ಹಾಗೂ ಕೇರಳದ ನಾನಾ ಕಡೆಗಳಲ್ಲಿ ಕಾರ್ಯಕ್ರಮವನ್ನು ನೀಡಿರುತ್ತಾರೆ. ಒಟ್ಟಾರೆಯಾಗಿ 8 ಸಾವಿರಕ್ಕಿಂತಲೂ ಅಧಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಪ್ರಶಸ್ತಿ
2008ರಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇದೇ ವರ್ಷ ಕನ್ನಡ ಸಾಂಸ್ಕೃತಿಕ ಇಲಾಖೆ ಶ್ರೀ ಚಕ್ರೇಶ್ವರಿ ದೇವಸ್ಥಾನ ಕೋಡಿ ಕನ್ಯಾನ ಸಾಸ್ತಾನ ಇಲ್ಲಿನ ಸಾಧನ ಪ್ರಶಸ್ತಿ ಪತ್ರವನ್ನು ಗಳಿಸಿರುತ್ತಾರೆ. ಭಾರತ ಸರಕಾರದಿಂದ ಸ್ಯಾಕ್ಸೋಫೋನ್ ವಾದನಕ್ಕಿರುವ ಪ್ರಶಸ್ತಿ ಪತ್ರವನ್ನು ಪಡೆದಿರುತ್ತರೆ. 2010ರಲ್ಲಿ ಬೆಂಗಳೂರಿನಲ್ಲಿ ನೀಡಿದ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಯಾಕ್ಸೋಫೋನ್ ವಾದನದಲ್ಲಿ ನಾದ ವೈಭವ ಬಿರುದು ಪಡೆದಿದ್ದಾರೆ. 2010 ರಲ್ಲಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ವಾದ್ಯ ಸಂಗೀತದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ, ಕ್ಲಸ್ಟರ್‌ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಜಿಲ್ಲಾಮಟ್ಟದ ವರೆಗೂ ಪ್ರತಿನಿಧಿಸಿದ್ದಾರೆ. ಉಡುಪಿಯ ಶ್ರೀಕೃಷ್ಣ ಮಠ ಶ್ರೀ ಅದಮಾರು ಮಠದ ಸ್ವಾಮೀಜಿಯವರ ಪರ್ಯಾಯ ಮಹೋತ್ಸವಕ್ಕೆ ನೀಡದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಗೋವಾದಲ್ಲಿ ನಡೆದ ನೇಶನಲ್‌ ಕಲ್ಚರಲ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿ ಅರ್ಹತಾಪತ್ರವನ್ನು ಪಡೆದುಕೊಂಡಿದ್ದಾರೆ. ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ನಡೆಸಿದ 2017 ನೇ ಸಾಲಿನ ವಾದ್ಯ ಸಂಗೀತ ಸೀನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲೇ ಈಕೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಅಖಿಲೇಶ್ ನಗುಮುಗಮ್

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.