“ವಿದ್ವಾಂಸರು ದೀಪಸ್ತಂಭಗಳಿದ್ದಂತೆ’


Team Udayavani, Sep 10, 2019, 5:26 AM IST

09KSDE12

ಬದಿಯಡ್ಕ: ಅಧ್ಯಾಪನ, ಯಕ್ಷಗಾನ, ಸಾಹಿತ್ಯ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಮ್ಮ ನಾಡಿನ ಶ್ರೀಮಂತ ಬದುಕನ್ನು ಕ್ರಿಯಾಶೀಲವಾಗಿಟ್ಟವರು ಪಂಡಿತ ಪೆರ್ಲ ಕೃಷ್ಣ ಭಟ್‌ ಅವರು ಎಂದು ಕವಿ, ಸಾಹಿತಿ ಹಾಗೂ ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ| ವಸಂತಕುಮಾರ ಪೆರ್ಲ ಅವರು ಹೇಳಿದರು.

ಬದಿಯಡ್ಕ ಸಮೀಪದ ನಾರಾಯಣೀಯಂ ಸಮುತ್ಛಯದ ವೀಣಾವಾದಿನಿ ಸಂಗೀತ ವಿದ್ಯಾಪೀಠದಲ್ಲಿ ಏರ್ಪಡಿಸಲಾದ ಓಣಂ ಹಬ್ಬದಲ್ಲಿ ಜರಗಿದ ಪೆರ್ಲ ಕೃಷ್ಣ ಭಟ್‌ ಸಂಸ್ಮರಣ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ವೀಣಾವಾದಿನಿ ಸಂಗೀತ ವಿದ್ಯಾಪೀಠವು ಕರಾವಳಿ ಜಿಲ್ಲೆಗಳಲ್ಲಿ ಸಂಗೀತವನ್ನು ಪಸರಿಸುವ ಉದಾತ್ತ ಕೆಲಸ ಮಾಡುತ್ತಿದೆ. ಇದನ್ನು ಎಲ್ಲರೂ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಸಭಾಧ್ಯಕ್ಷತೆ ವಹಿಸಿದ ಮುಳ್ಳೇರಿಯದ ಹಿರಿಯ ವೈದ್ಯ ಡಾ.ಮಂಜುನಾಥ ಭಟ್‌ ಹೇಳಿದರು.

ನಾರಾಯಣೀಯಂನ ಸಂಚಾಲಕರಾದ ಬಳ್ಳಪದವು ಯೋಗೀಶ ಶರ್ಮ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಲಾವಿದ ಪ್ರಭಾಕರ ಕುಂಜಾರು ವಂದಿಸಿದರು.ಬೆಳಗ್ಗಿನಿಂದಲೇ ಆರಂಭವಾದ ಓಣಂ ಉತ್ಸವವನ್ನು ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ನಿವೃತ್ತ ಮಹಾಪ್ರಬಂಧಕ ಎಸ್‌.ಗೋವಿಂದರಾಜ ಭಟ್‌ ಅವರು ನೆರವೇರಿಸಿದರು. ಆನಂದ ಕೆ. ಮವ್ವಾರು ಮತ್ತು ಶಶಿಧರ ತೆಕ್ಕೆಮೂಲೆ ಅವರು ಅತಿಥಿಗಳಾಗಿ ಭಾಗವಹಿಸಿದ್ದರು. ಸಂಜೆ ನಡೆದ ಸಂಗೀತ ಕಚೇರಿಗಳಲ್ಲಿ ಮಂಗಳೂರಿನ ಉದಯೋನ್ಮುಖ ಕಲಾವಿದೆ ತೃಪ್ತಿ ಭಟ್‌ ಮತ್ತು ಕಾಸರಗೋಡಿನ ಪೂರ್ಣಪ್ರಜ್ಞ ಅವರು ಹಾಡುಗಾರಿಕೆ ನಡೆಸಿಕೊಟ್ಟರು. ಮಧ್ಯಾಹ್ನ ವಿಶಿಷ್ಟವಾದ ಓಣಂ ಭೋಜನ ಏರ್ಪಡಿಸಲಾಗಿತ್ತು.

ನಾಡಿಗೆ ಸದಾ ಬೆಳಕು
ವಿದ್ವಾಂಸರು ಒಂದು ಸಮಾಜದ ಬದುಕನ್ನು ನಿರ್ದಿಷ್ಟ ಗತಿಯತ್ತ ಒಯ್ಯುವ ಶಕ್ತಿಶಾಲಿ ವ್ಯಕ್ತಿಗಳು. ದೀಪಸ್ತಂಭಗಳಂತೆ ನಾಡಿಗೆ ಸದಾ ಬೆಳಕು ನೀಡುವ ಇಂತಹ ಅನುಪಮ ವ್ಯಕ್ತಿಗಳನ್ನು ಸ್ಮರಣೆ ಮಾಡುತ್ತಿರುವುದು ಒಂದು ಮಾದರಿ ಕೆಲಸ. ವೀಣಾವಾದಿನಿ ಸಂಗೀತ ಶಾಲೆ ಇಂತಹ ಮೇಲ್ಪಂಕ್ತಿ ಹಾಕಿರುವುದು ಸ್ತುತ್ಯರ್ಹ ಮತ್ತು ಅದು ಒಂದು ಸಾಂಸ್ಕೃತಿಕ ಬಾಧ್ಯತೆಯೂ ಹೌದು ಎಂದು ಡಾ.ವಸಂತಕುಮಾರ ಪೆರ್ಲ ಅವರು ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.