ಹೊಸಮನೆಯಲ್ಲಿ ಸೋದರಿಗಾಗಿ ಕಾದಿರುವ ಶರ್ಮಿಳಾ


Team Udayavani, Feb 24, 2020, 5:46 AM IST

23KSDE1-SHARMILA

ಕಾಸರಗೋಡು: ಕಾದಿರುವರು ಹೊಸಮನೆಯಲ್ಲಿ ಶರ್ಮಿಳಾ ಸಹೋದರಿಯ ಬರೋಣಕ್ಕಾಗಿ… ರಾಜ್ಯ ಸರಕಾರದ ಜನಪರ ಯೋಜನೆಗಳಲ್ಲಿ ಒಂದಾಗಿರುವ ಲೈಫ್‌ ಮಿಷನ್‌ ಮೂಲಕ ನೂತನ ನಿವಾಸ ನಿರ್ಮಿಸಿಕೊಂಡಿರುವ ಶರ್ಮಿಳಾ ಅವರು ನೂತನ ಮನೆಗೆ ತಮ್ಮ ಸಹೋದರಿಯ ಆಗಮನಕ್ಕಾಗಿ ಕಾದು ಕುಳಿತಿದ್ದಾರೆ. ಕಲ್ಲಿಕೋಟೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಯಲ್ಲಿರುವ ಸೋದರಿ ಶೀಘ್ರದಲ್ಲಿ ನೂತನ ಮನೆಗೆ ಬರುವ ನಿರೀಕ್ಷೆಯಲ್ಲಿ ಶರ್ಮಿಳಾ ಇದ್ದಾರೆ. ಕಾರಡ್ಕ ನೀರೋಳಿಪ್ಪಾರೆ ಪರಿಶಿಷ್ಟ ಪಂಗಡ ಕಾಲನಿಯಲ್ಲಿ ಇವರಿಗೆ ನೂತನ ಮನೆ ನಿರ್ಮಾಣವಾಗಿದೆ.

ಕೆಲವು ವರ್ಷಗಳ ಹಿಂದೆಯೇ ಹೆತ್ತವರನ್ನು ಕಳೆದುಕೊಂಡಿದ್ದ ಇವರು ತಮ್ಮ ಸೋದರಿ ಶೋಭಾ ಅವರೊಂದಿಗೆ ಹಳೆಯ ಶಿಥಿಲ ಮನೆಯಲ್ಲಿ ವಾಸವಾಗಿದ್ದರು. ಮನೆಯ ದುಸ್ಥಿತಿಯ ಹಿನ್ನೆಲೆಯಲ್ಲಿ ಅವರನ್ನು ಗ್ರಾಮ ಪಂಚಾಯತ್‌ ಅಧಿಕಾರಿಗಳು ಸ್ಥಳೀಯ ಟಿ.ವಿ. ಶೆಡ್‌ಗೆ ಸ್ಥಳಾಂತರಿಸಿದ್ದರು. ಮಾನಸಿಕ ಅಸ್ವಸ್ಥತೆ ಹೊಂದಿದ್ದ ಸೋದರಿ ಶೋಭಾ ಅವರು ಶರ್ಮಿಳಾ ಅವರಿಗೆ ದೈಹಿಕ ಹಿಂಸೆಯನ್ನು ನೀಡುತ್ತಿದ್ದ ಹಿನ್ನೆಲೆಯಲ್ಲಿ, ಅವರನ್ನು ಕಲ್ಲಿಕೋಟೆಯ ಮಾನಸಿಕ ಆರೋಗ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಒಡಹುಟ್ಟಿದವಳು ಆಸ್ಪತ್ರೆಗೆ ದಾಖಲಾದ ಮೇಲೆ ಶರ್ಮಿಳಾ ಏಕಾಂಗಿ ಬದುಕನ್ನು ಸವೆಸಬೇಕಾಗಿ ಬಂದಿತ್ತು.

ಹಲವು ಸಮಸ್ಯೆಗಳ ನಡುವೆಯೂ ಲೈಫ್‌ ಮಿಷನ್‌ ಮೂಲಕ ನೂತನ ಸುರಕ್ಷಿತ ನಿವಾಸವೊಂದು ಲಭಿಸಿರುವುದು ಶರ್ಮಿಳಾರ ಬದುಕಿಗೆ ಹೊಸ ಆಶಾಕಿರಣವಾಗಿದೆ. ಲೈಫ್‌ ಮಿಷನ್‌ ಯೋಜನೆ ಮೂಲಕ 4 ಲಕ್ಷ ರೂ., ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆಯಿಂದ 2 ಲಕ್ಷ ರೂ. ಲಭಿಸಿದ ಹಿನ್ನೆಲೆಯಲ್ಲಿ ಒಟ್ಟು 6 ಲಕ್ಷ ರೂ.ನಲ್ಲಿ ಸುಭದ್ರ ನಿವಾಸ ನಿರ್ಮಾಣವಾಗಿದೆ. ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕತನ ನಡೆಸುವ ಮೂಲಕ ಇವರು ಜೀವನ ನಡೆಸುತ್ತಿದ್ದಾರೆ.

ಸೋದರಿಯೂ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಮರಳಿದರೆ ಈ ಮನೆಯಲ್ಲಿ ನೆಮ್ಮದಿಯಿಂದ ಬಾಳಬಹುದು ಎಂಬ ನಿರೀಕ್ಷೆಯಲ್ಲಿ ಶರ್ಮಿಳಾ ಅವರಿದ್ದಾರೆ.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.